ಕನ್ನಡಿಗ v/s ಕನ್ನಡಿಗ; ವಾಟಾಳ್ ಗೆ ಕರ್ನಾಟಕವನ್ನು ಬರೆದುಕೊಟ್ಟಿಲ್ಲ!
Team Udayavani, Jun 12, 2017, 10:42 AM IST
ಬೆಂಗಳೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿ, ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ವಿಫಲವಾಗಿದೆ. ಕನ್ನಡ ಪರ ಸಂಘಟನೆಗಳ ಮುಖಂಡರ ನಡುವಿನ ಸ್ವಪ್ರತಿಷ್ಠೆಯಿಂದಾಗಿ ಒಗ್ಗಟ್ಟು ಮುರಿದು ಹೋದಂತಾಗಿದೆ. ಮತ್ತೊಂದೆಡೆ ಕನ್ನಡ ಪರ ಸಂಘಟನೆಗಳಿಗೆ ಬಂದ್ ಗೆ ಅನುಮತಿ ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಾಟಾಳ್ ನಾಗರಾಜ್ ವಿರುದ್ಧವೇ ಪ್ರತಿಭಟನೆ:
ಏಕಾಏಕಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ವಿರುದ್ಧವೇ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆಯಿತು. ಸುಮ್ಮನಹಳ್ಳಿ ಸೇತುವೆ ಸಮೀಪ ವಾಟಾಳ್ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ ನಡೆಯಿತು.
ಕರ್ನಾಟಕವನ್ನು ವಾಟಾಳ್ ನಾಗರಾಜ್ ಗೆ ಬರೆದುಕೊಟ್ಟಿಲ್ಲ; ನಾರಾಯಣ ಗೌಡ
ಕರ್ನಾಟಕ ರಾಜ್ಯವನ್ನು ವಾಟಾಳ್ ನಾಗರಾಜ್ ಅವರಿಗೆ ಬರೆದುಕೊಟ್ಟಿಲ್ಲ. ಪದೇ, ಪದೇ ರಾಜ್ಯ ಬಂದ್ ನಡೆಸುವುದರಿಂದ ಯಾರಿಗೆ ಲಾಭವಿದೆ. ಕನ್ನಡಪರ ಸಂಘಟನೆಗಳು ಸಚಿವರು, ಶಾಸಕರು, ಸಚಿವರ ಮನೆ ಎದುರು ಪ್ರತಿಭಟನೆ ನಡೆಸಬೇಕು. ಅದನ್ನು ಬಿಟ್ಟು ನಾನು ಹೇಳಿದ್ದೇ ಅಂತಿಮ ಎನ್ನುವವರಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ನೀಡಿದ್ದ ಪ್ರತಿಕ್ರಿಯೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಬಂದ್ ವಿಫಲವಾಗಿಲ್ಲ; ಪ್ರವೀಣ್ ಶೆಟ್ಟಿ
ಕನ್ನಡ ಪರ ಸಂಘಟನೆಗಳ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾಗಿ ಕರ್ನಾಟಕ ಬಂದ್ ವಿಫಲವಾಗಿಲ್ಲ. ನಾರಾಯಣ ಗೌಡರು ಸ್ವಪ್ರತಿಷ್ಠೆಯನ್ನು ಬಿಡಬೇಕಾಗಿತ್ತು. ಬಂದ್ ವಿಫಲಗೊಳಿಸಲು ಪಿತೂರಿ ನಡೆಸಿದವರ ಹೆಸರನ್ನು ಶೀಘ್ರವೇ ಬಹಿರಂಗಗೊಳಿಸುತ್ತೇವೆ ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿರುಗೇಟು ನೀಡಿದ್ದಾರೆ.
ಟೌನ್ ಹಾಲ್ ಬಳಿ ಕರವೇ ಮುಖಂಡರ ಸುಳಿವೇ ಇಲ್ಲ!
ಅನುಮತಿಯ ಹೊರತಾಗಿಯೂ ಕರ್ನಾಟಕ ಬಂದ್ ಗೆ ಕರೆ ಕೊಟ್ಟು ಬಂದ್ ವಿಫಲವಾದ ಹಿನ್ನೆಲೆಯಲ್ಲಿ ಬೆಳಗ್ಗೆ 10ಗಂಟೆಗೆ ಟೌನ್ ಹಾಲ್ ಬಳಿ ಧರಣಿ ನಡೆಸುವುದಾಗಿ ತಿಳಿಸಿದ್ದ ಕನ್ನಡಪರ ಸಂಘಟನೆಯ ಮುಖಂಡರಾದ ವಾಟಾಳ್ ನಾಗರಾಜ್, ಸಾರಾ ಗೋವಿಂದು, ಪ್ರವೀಣ್ ಶೆಟ್ಟಿಯಾಗಲಿ ಯಾರೂ ಬಂದಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ