ಎಚ್ಡಿಕೆಗೆ ಬಂಧನ ಭೀತಿ? ಜಾಮೀನಿಗಾಗಿ ಹೈಕೋರ್ಟ್ ಮೊರೆ
Team Udayavani, Jun 14, 2017, 8:39 AM IST
ಬೆಂಗಳೂರು: ಜಂತಕಲ್ ಕಂಪೆನಿಗೆ ಅಕ್ರಮ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೀಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ)ದಿಂದ ಬಂಧನ ಭೀತಿ ಎದುರಿಸುತ್ತಿರುವ ಕುಮಾರಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನ್ಯಾ| ಗೋಪಾಲ್ ಅವರು, ನಿರೀಕ್ಷಣ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದರು. ಈ ಬೆನ್ನಲ್ಲೇ ಕುಮಾರಸ್ವಾಮಿ, ನಿರೀಕ್ಷಣ ಜಾಮೀನು ಮಂಜೂರು ಕೋರಿ ಹೈಕೋರ್ಟ್ ಮೊರೆಹೋಗಿದ್ದು, ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಆದರೆ ಇದುವರೆಗೆ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಎಸ್ಐಟಿ ಯಾವುದೇ ವಾರಂಟ್ ಅನ್ನು ಜಾರಿಗೊಳಿಸಿಲ್ಲ ಎಂದು ತಿಳಿದುಬಂದಿದೆ. ಗಣಿ ಹಗರಣಗಳಿಂದ ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಗಣಿ ಹಗರಣಗಳ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸು ತ್ತಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅರ್ಜಿದಾರರು, ಮಾಜಿ ಮುಖ್ಯಮಂತ್ರಿಗಳಾಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಅಥವಾ ಸಾಕ್ಷ್ಯನಾಶಕ್ಕೆ ಯತ್ನಿಸುವ ಸಾಧ್ಯತೆಯಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಆಕ್ಷೇಪಣೆ ಸಲ್ಲಿಸಲಾಗಿತ್ತು ಎಂದು ಎಸ್ಐಟಿ ಪರ ವಕೀಲರು ‘ಉದಯವಾಣಿ’ಗೆ ತಿಳಿಸಿದರು.
ಸುಪ್ರೀಂಕೋರ್ಟ್ ಆದೇಶದನ್ವಯ ಅಕ್ರಮ ಗಣಿ ಪ್ರಕರಣ ಗಳ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾರನ್ನು ಬಂಧಿಸಿತ್ತು. ಇದೇ ಪ್ರಕರಣ ಸಂಬಂಧ ಕುಮಾರಸ್ವಾಮಿಗೂ ನೋಟಿಸ್ ಜಾರಿಗೊಳಿಸಿತ್ತು. ಹೀಗಾಗಿ ಬಂಧನ ಭೀತಿಯಿಂದ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಮೇ 16ರಂದು ಹಲವು ಷರತ್ತು ಗಳೊಂದಿಗೆ ಏಳು ದಿನಗಳವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಇದಾದ ಬಳಿಕ ಎಸ್ಐಟಿ ಪರ ವಕೀಲರ ಆಕ್ಷೇಪಣೆ, ಅರ್ಜಿದಾರರ ಪರ ವಕೀಲರ ವಾದ ಮಂಡನೆಗೆ ಅವಕಾಶ ನೀಡಿ ವಿಚಾರಣೆ ಪೂರ್ತಿಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ