ಕಲ್ಲಡ್ಕ ಗಲಭೆ ಆರೋಪಿ ಪರಾರಿಯಾಗಿಲ್ಲ,ಹೆಚ್ಚಿನ ಚಿಕಿತ್ಸೆಗೆ ತೆರಳಿದ್ದು


Team Udayavani, Jun 15, 2017, 10:40 AM IST

11.jpg

ಬಂಟ್ವಾಳ : ಕಲಡ್ಕದಲ್ಲಿ  ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಪುತ್ತೂರು ಆದರ್ಶ ಆಸ್ಪತ್ರೆಗೆ  ದಾಖಲಾಗಿದ್ದ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿರಾತೋರಾತ್ರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.                         

ಕಾವಲು ಕಾಯುತ್ತಿದ್ದ ಪೊಲೀಸರು ನಿದ್ರೆಗೆ ಜಾರಿದ ಸಮಯ ನೋಡಿ ಆಸ್ಪತ್ರೆಯಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

ಜೂನ್‌13 ರಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ ಬಳಿಕ ಅಂಗಡಿಗಳಿಗೆ ಕಲ್ಲೆಸೆದು ಹಾನಿ ಮಾಡಿದ್ದು ಕೋಮು ಘರ್ಷಣೆಗೆ ಕಾರಣವಾಗಿತ್ತು. ರತ್ನಾಕರ ಶೆಟ್ಟಿ ಮತ್ತು ರವಿ ಭಂಡಾರಿ ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಖಲೀಲ್‌ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ರತ್ನಾಕರ ಶೆಟ್ಟಿ ಅವರು ಸ್ಥಳೀಯ ಆಸ್ಪತ್ರೆಗೆ ಪುತ್ರನನ್ನು ಕರೆತಂದು ಔಷಧ ಪಡೆದುಕೊಂಡು ಮರಳುತ್ತಿರುವಾಗ ಖಲೀಲ್‌ ಮೀಸೆ ತಿರುವಿಕೊಂಡು ಮಾತನಾಡಿದ್ದು, ಇದೇ ವೇಳೆ ಹಿಂದಿನಿಂದ ಬಂದ ಜುನೈಜ್‌ ಹಲ್ಲೆ ನಡೆಸಿ ಇರಿದಿದ್ದಾನೆ ಎಂದು ಸಿಸಿ ಕೆಮರಾ ದೃಶ್ಯಗಳನ್ನು ಆಧರಿಸಿ
ಹೇಳಲಾಗಿದೆ. ಪೂರ್ವಯೋಜಿತವಾಗಿ ಹಲ್ಲೆ, ಕಲ್ಲೆಸೆತ ನಡೆದಿದೆ ಎನ್ನಲಾಗಿದೆ.ಘಟನೆಯ ಬಳಿಕ ಕಲ್ಲಡ್ಕದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. 

ಇದೀಗ ಕಲ್ಲಡ್ಕದಲ್ಲಿ ಪರಿಸ್ಥಿತಿ ಶಾಂತವಾಗಿದೆ. ನಿನ್ನೆಯಿಂದ ಯಾವುದೇ ಅಹಿತಕರ
ಘಟನೆಗಳು ನಡೆದಿಲ್ಲ. ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಹಾಸನ ಮತ್ತು ಚಿಕ್ಕಮಗಳೂರಿನಿಂದ ಹೆಚ್ಚುವರಿ 3 ತುಕಡಿ ಕೆಎಸ್‌ಆರ್‌ಪಿ ಪಡೆಯನ್ನು ಕರೆಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಭೂಷಣ್‌ ಜಿ. ಬೊರಸೆ ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿ ಎರಡೂ ಕಡೆಯ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ. 

ರತ್ನಾಕರ್‌ ಶೆಟ್ಟಿ ವಿರುದ್ಧ ಖಲೀಲ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪವಿದ್ದು ಪ್ರಕರಣ ದಾಖಲಾಗಿದೆ. 

ಕರ್ತವ್ಯ ಲೋಪ ಎಸಗಿದ ಕಾರಣಕ್ಕೆ  ಮೂವರು ಪೊಲೀಸರ ಅಮಾನತು ಮಾಡಿ ಆದೇಶ ನೀಡಲಾಗಿದೆ. 

ಪರಾರಿಯಾಗಿಲ್ಲ 
ನಾನು ಪರಾರಿಯಾಗಿಲ್ಲ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಅನುಮತಿ ಪಡೆದು ಮಂಗಳೂರಿಗೆ ತೆರಳಿದ್ದೆ ಎಂದು ರತ್ನಾಕರ್‌ ಶೆಟ್ಟಿ ಹೇಳಿದ್ದಾರೆ. 

 ನೀಡಿ ರತ್ನಾಕರ್‌ ಶೆಟ್ಟಿ ಅವರನ್ನ ನಾವೇ ಕಳುಹಿಸಿದ್ದು ಎಂದು ಆಸ್ಪತ್ರೆಯ ವೈದ್ಯ ಪ್ರಸಾದ್‌ ಭಂಡಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.