ಬಹು ನಿರೀಕ್ಷೆಯ ಕೊಚ್ಚಿ ಮೆಟ್ರೋ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ


Team Udayavani, Jun 17, 2017, 12:06 PM IST

Modi Metro-700.jpg

ಕೊಚ್ಚಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಕೇರಳದ ಪ್ರಪ್ರಥಮ ಕೊಚ್ಚಿ ಮೆಟ್ರೋ ರೈಲನ್ನು ಉದ್ಘಾಟಿಸಿದರು. 

ಬಳಿಕ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಮೆಟ್ರೋ ಮ್ಯಾನ್‌ ಇ ಶ್ರೀಧರನ್‌, ಹಾಗೂ ಇತರ ಕೆಲವು ಮುಖ್ಯ ಅಧಿಕಾರಿಗಳೊಂದಿಗೆ ಉದ್ಘಾಟನಾ ಮೆಟ್ರೋ ಸಂಚಾರದಲ್ಲಿ ಭಾಗಿಯಾಗಿ ಕೇರಳದ ಈ ಚೊಚ್ಚಲ ಸಾಧನೆಯ ಸಂತಸವನ್ನು ಹಂಚಿಕೊಂಡರು. 

ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಕೇರಳ ರಾಜ್ಯಪಾಲ ಪಿ. ಸದಾಶಿವಂ ಮತ್ತು ಕೇರಳ ಬಿಜೆಪಿ ಮುಖ್ಯಸ್ಥ ಕುಮ್ಮನಂ ರಾಜಶೇಖರನ್‌ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಸಂದರ್ಭದಲ್ಲಿ ಇದ್ದರು. 

ಮೋದಿ ಅವರು ಈ ಬಹು ನಿರೀಕ್ಷೆಯ ಯೋಜನೆಯ ಉದ್ಘಾಟನಾರ್ಥವಾಗಿ ಪಳರಿವಟ್ಟಂ  ಸ್ಟೇಶನ್‌ನಲ್ಲಿ ರಿಬ್ಬನ್‌ ಕತ್ತರಿಸಿ ನೂತನ, ಪ್ರಪ್ರಥಮ ಮಟ್ರೋ ಯಾನಕ್ಕೆ ಚಾಲನೆ ನೀಡಿದರು. ಪಳರಿವಟ್ಟಂ ನಿಂದ ಪಢದಿಪ್ಪಾಲಂ ವರೆಗಿನ ಈ ಮಟ್ರೋ ರೈಲು ಯಾನ ಸೇವೆಯು ಜನರಿಗೆ ತ್ವರಿತ ಸಂಚಾರ ಸೌಕರ್ಯವನ್ನು ಒದಗಿಸುತ್ತದೆ. 

ಕೊಚ್ಚಿ ಮೆಟ್ರೋ ರೈಲು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇದು ಭವಿಷ್ಯದ ಅತ್ಯಾಧುನಿಕ ಮೂಲ ಸೌಕರ್ಯವಾಗಿದ್ದು  ಭಾರತದ ಬೆಳವಣಿಗೆಗೆ ಮಹತ್ತರ ಕಾಣಿಕೆ ನೀಡಲಿದೆ’ ಎಂದು ಹೇಳಿದರು. 

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಮಾತನಾಡಿ ಕೊಚ್ಚಿ ಮೆಟ್ರೋ ರೈಲು ಯೋಜನೆಯ ಸಾಕಾರಕ್ಕೆ ಶ್ರಮಿಸಿದ ಎಲ್ಲ ಕೆಲಸಗಾರರಿಗೆ ಕೃತಜ್ಞತೆ ಅರ್ಪಿಸಿದರು. 

ಮೋದಿ ಅವರ ಬೆಳಗ್ಗೆ 10.15ಕ್ಕೆ ಇಲ್ಲಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ಅವರನ್ನು ರಾಜ್ಯಪಾಲ ಸದಾಶಿವಂ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ವಾಗತಿಸಿದರು. 

ಪಳರಿವಟ್ಟಂ ನಿಂದ ಅಳುವಾ ವರೆಗಿನ 13 ಕಿ.ಮೀ. ಉದ್ದದ 11 ಸ್ಟೇಶನ್‌ಗಳನ್ನು ಒಳಗೊಂಡ ಕೊಚ್ಚಿ ಮೆಟ್ರೋ ರೈಲಿನ ಈ ಮೊದಲ ಹಂತವು ಅತೀ ಉದ್ದದ ಭಾಗವಾಗಿ ಉದ್ಘಾಟನೆಗೊಂಡಿದೆ. 

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.