ಕೆ.ಶ್ರೀಕಾಂತ್ ಮುಡಿಗೆ ಇಂಡೋನೇಷ್ಯಾ ಬ್ಯಾಡ್ಮಿಂಟನ್ ಓಪನ್ ಕಿರೀಟ
Team Udayavani, Jun 18, 2017, 5:12 PM IST
ಜಕಾರ್ತ: ಭಾರತದ ಬ್ಯಾಡ್ಮಿಂಟನ್ ಆಟಗಾರ ಕೆ.ಶ್ರೀಕಾಂತ್ ಇಂಡೋನೇಷ್ಯಾ ಬ್ಯಾಡ್ಮಿಂಟನ್ ಫೈನಲ್ ಹಣಾಹಣಿಯಲ್ಲಿ ವಿಶ್ವದ 47ನೇ ರಾಂಕಿನ ಜಪಾನ್ ಆಟಗಾರ ಕಾಜೂಮಾಸಾ ಸಕಾಯಿ ಅವರನ್ನು 21-11, 21-19 ಸೆಟ್ ಗಳ ಅಂತರದಿಂದ ಪರಾಜಯಗೊಳಿಸುವ ಮೂಲಕ ಇಂಡೋನೇಷ್ಯಾ ಓಪನ್ ಸೂಪರ್ ಸೀರಿಸ್ ಪ್ರೀಮಿಯರ್ ಪುರುಷರ ಸಿಂಗಲ್ಸ್ ಟೈಟಲ್ ಅನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಅಮೋಘ ಆಟವಾಡಿದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ ಕೆ.ಶ್ರೀಕಾಂತ್ ವಿಶ್ವ ನಂ.1 ಕೊರಿಯಾದ ಸನ್ ವಾನ್ ಹೊ ಅವರನ್ನು ಮಣಿಸಿ ಇಂಡೋನೇಷ್ಯಾ ಬ್ಯಾಡ್ಮಿಂಟನ್ ಕೂಟದ ಫೈನಲ್ಗೇರಿದ್ದರು.
ಗೆಲ್ಲುವ ಏಕೈಕ ಗುರಿಯೊಂದಿಗೆ ಹೋರಾಡಿದ್ದ ಶ್ರೀಕಾಂತ್ 21-15, 18-21, 24-22 ಗೇಮ್ಗಳ ಅಂತರದಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೇರಿದ್ದರು. ಈ ಹೋರಾಟ ಒಂದು ತಾಸು ಮತ್ತು 12 ನಿಮಿಷಗಳವರೆಗೆ ಸಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ