ಸರಕಾರಿ ಶಾಲೆಗೆ ಸಮುದಾಯದ ಸಹಕಾರ ಅತ್ಯಗತ್ಯ


Team Udayavani, Jun 22, 2017, 12:24 PM IST

govt-school.jpg

ಉಡುಪಿ: ಸರಕಾರದ ಅನುದಾನದಿಂದ ಮಾತ್ರ ಸರಕಾರಿ ಶಾಲೆಗಳನ್ನು ಬಲಪಡಿಸಲು ಸಾಧ್ಯವಿಲ್ಲ. ಸಮುದಾಯದ ಸಹಭಾಗಿತ್ವವೂ ಬೇಕು. ಹಳೆ ವಿದ್ಯಾರ್ಥಿಗಳು ಶಾಲೆಗೆ ಕೊಡುಗೆ ನೀಡಲು ಉತ್ಸುಕರಾಗಿರುತ್ತಾರೆ. ಆದ್ದರಿಂದ ಮುಂದಿನ ಒಂದು ತಿಂಗಳೊಳಗೆ ಉಡುಪಿ ಜಿಲ್ಲೆಯ ಎಲ್ಲ 606 ಸರಕಾರಿ ಶಾಲೆಗಳಲ್ಲಿ ಕನಿಷ್ಠ 150 ಸದಸ್ಯರಿರುವ ಹಳೆ ವಿದ್ಯಾರ್ಥಿ ಸಂಘವನ್ನು ರಚನೆ ಮಾಡಬೇಕು. ಆ ಮೂಲಕ ಶಾಲೆಯ ಅಭಿವೃದ್ಧಿಗೆ ನಾಂದಿ ಹಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಹೇಳಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ| ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಉಡುಪಿ ಜಿಲ್ಲಾಡಳಿತ, ಜಿ.ಪಂ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಭಾಗಿತ್ವದಲ್ಲಿ ನಡೆದ ಸರಕಾರಿ
ಶಾಲಾ ಬಲವರ್ಧನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಗೆ ದಿನಾ 10-20 ಹೆತ್ತವರು ಬಂದು ಕಣ್ಣೀರು ಹಾಕು ತ್ತಿದ್ದಾರೆ. ಸರಕಾರಿ ಶಾಲೆಗಳ ದುಃಸ್ಥಿತಿ, ಮೂಲ ಸೌಕರ್ಯಗಳ ಕೊರತೆ, ವಿದ್ಯಾರ್ಥಿಗಳ ದಾಖಲಾತಿ ಇಲ್ಲದೆ ಮುಚ್ಚುವ ಸ್ಥಿತಿಗೆ ಬಂದಿವೆ. ರಾಜ್ಯದ 1.61 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎನ್ನುವ ಮಾಹಿತಿ ಆಯೋಗದ ಸಮೀಕ್ಷೆಯಿಂದ ಬಹಿರಂಗವಾಗಿದೆ. ಶಿಕ್ಷಣದಿಂದ ಹಲವು ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಾಧ್ಯವಿದ್ದು, ಬಾಲ್ಯ ವಿವಾಹ, ಬಾಲ ಕಾರ್ಮಿಕತೆ, ಹೆಮ್ಮಕ್ಕಳ ಸಂಖ್ಯೆ ಕುಸಿತ ಸಹಿತ ಹಲವು ಸಮಸ್ಯೆಗಳು ಬಗೆಹರಿಯಲಿವೆ ಎಂದರು. 

ಆವರಣ ಗೋಡೆ: 3 ತಿಂಗಳ ಗಡುವು 
ಜಿಲ್ಲೆಯ ಎಲ್ಲ ಶಾಲೆಗಳಿಗೆ ಆವರಣ ಗೋಡೆ ನಿರ್ಮಿಸಬೇಕು, ಕೈತೋಟ ರಚನೆ ಮಾಡಬೇಕು, ಫ್ಯಾನ್‌, ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಬೇಕು. ನಲಿ- ಕಲಿ ವಿದ್ಯಾರ್ಥಿಗಳಿಗೆ 3,000 ಟೇಬಲ್ಸ್‌, 3,129 ಫ್ಯಾನ್‌ ಅಗತ್ಯವಿದೆ. 180 ಶಾಲೆಗಳಿಗೆ ಮಾತ್ರ ಸುಣ್ಣ- ಬಣ್ಣ ಬಳಿಯಲಾಗಿದ್ದು, ಈ ವರ್ಷದೊಳಗೆ ಎಲ್ಲವೂ ಪೂರ್ಣಗೊಂಡಿರಬೇಕು. 64 ಶಾಲೆಗಳಲ್ಲಿ ಮಾತ್ರ ಪೂರ್ಣ ಆವರಣ ಗೋಡೆಯಿದ್ದು, ಶೇ. 33 ರಷ್ಟು ಭಾಗಶಃ ಕಾಂಪೌಂಡ್‌ಗಳಿವೆ. 3 ತಿಂಗಳೊಳಗೆ ಎಲ್ಲ ಶಾಲೆಗಳಲ್ಲಿ ನರೇಗಾ ಯೋಜನೆಯಡಿ ಆವರಣ ಗೋಡೆ ನಿರ್ಮಿಸಬೇಕು ಎಂದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಮಾತನಾಡಿ, ಉಡುಪಿ ಜಿಲ್ಲೆಯವರು ಹೆಚ್ಚಿನವರು ಹೊರ ರಾಜ್ಯ, ಹೊರ ದೇಶಗಳಲ್ಲಿ ದುಡಿಯುತ್ತಿದ್ದಾರೆ. ಅವರಿಂದ ದೇಣಿಗೆ ಸಂಗ್ರಹ ಸಾಧ್ಯವಿದೆ. ತಾವು ಕಲಿತ ಶಾಲೆಗೆ ಕೊಡುಗೆ ನೀಡಬಹುದು. ಆದ್ದರಿಂದ ಶಿಕ್ಷಕರು ಸ್ವಲ್ಪ ಹೆಚ್ಚಿನ ಮುತುವರ್ಜಿ ವಹಿಸಿ ಸರಕಾರಿ ಶಾಲೆಗಳ ಸಶಕ್ತೀಕರಣ ಮಾಡಲು ಮುಂದಾಗಿ ಎಂದು ಸಲಹೆಯಿತ್ತರು.

ಆಯೋಗದ ಸದಸ್ಯೆ ವನಿತಾ ತೊರವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದಿವಾಕರಶೆಟ್ಟಿ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ಸ್ವಾಗತಿಸಿ, ಸಂಗೀತಾ ನಿರ್ವಹಿಸಿದರು. 

ಇಂಗ್ಲಿಷ್‌ ಭಾಷಾ ಶಿಕ್ಷಕರು ಕಡ್ಡಾಯ
ಪ್ರತೀ ಶಾಲೆಯಲ್ಲಿ 1ರಿಂದ 5ರ ವರೆಗೆ ನಲಿ- ಕಲಿ ಒಬ್ಬ ಶಿಕ್ಷಕರು, 4-5ನೇ ತರಗತಿಗೆ ತಲಾ ಒಬ್ಬ ಶಿಕ್ಷಕರು, 6-10ನೇ ತರಗತಿಗೆ ವಿಷಯವಾರು ಶಿಕ್ಷಕರು ಬೇಕಿದ್ದು, ಅದಕ್ಕಾಗಿ ಪ್ರಯತ್ನ ಮಾಡುತ್ತೇವೆ. ಪ್ರತಿಯೊಂದು ಶಾಲೆಯಲ್ಲಿ ಇಂಗ್ಲಿಷ್‌ ಶಿಕ್ಷಕರು ಕಡ್ಡಾಯವಾಗಿ ಇರಲೇಬೇಕು. ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಂಗೀತ ಶಿಕ್ಷಕರು ಎರಡು ಶಾಲೆಗೊಬ್ಬರಂತೆ ಇದ್ದರೂ ಪರವಾಗಿಲ್ಲ ಎಂದು ಕೃಪಾ ಆಳ್ವ ಹೇಳಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.