ಜರ್ಮನಿಯಲ್ಲಿ  ಬಾಗಲಕೋಟೆ ವಿದ್ಯಾರ್ಥಿ ಕಾಣೆ; ಚಪ್ಪಲಿ, ಸೈಕಲ್ ಪತ್ತೆ


Team Udayavani, Jun 22, 2017, 1:10 PM IST

Bagalakot.jpg

ಬಾಗಲಕೋಟೆ: ಸರ್ಕಾರದ ಪ್ರೋತ್ಸಾಹಧನ ಯೋಜನೆಯಡಿ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಐದು ದಿನಗಳಿಂದ ಕಾಣೆಯಾಗಿದ್ದಾನೆ. ನಗರ ಸಮೀಪದ ಸೀಮಿಕೇರಿ ಗ್ರಾಮದ ಮಂಜುನಾಥ ಸಿದ್ದಣ್ಣ ಚೂರಿ (28) ಜರ್ಮನಿಯಲ್ಲಿ ಎಂಎಸ್‌ ವ್ಯಾಸಂಗ ಮಾಡುತ್ತಿದ್ದ. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ನೀಡುವ ಪ್ರೋತ್ಸಾಹಧನ ಯೋಜನೆಯಡಿ ಹ್ಯಾಂಬರ್ಗ್‌ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಮಾಸ್ಟರ್‌ ಆಫ್‌ ಸೈನ್ಸ್‌ ವಿಭಾಗದಲ್ಲಿ 4ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ.

ಗೊತ್ತಾಗಿದ್ದು ಯಾವಾಗ?: ಒಂದೂವರೆ ವರ್ಷದ ಹಿಂದೆ ಜರ್ಮನಿಗೆ ಹೋಗಿದ್ದ ಮಂಜುನಾಥ, ಏಳು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಸಿದ್ದಣ್ಣ ಚೂರಿ ಅವರನ್ನು ಕಳೆದುಕೊಂಡಿದ್ದ. ತಂದೆ ತೀರಿಕೊಂಡಿದ್ದಾಗ ಬಾಗಲಕೋಟೆಗೆ
ಬಂದಿದ್ದ ಆತ, ತಿಂಗಳ ಬಳಿಕ ಮರಳಿ ಹೋಗಿದ್ದ. ಬೀಳಗಿ ಪಟ್ಟಣದ ಗಾಂಧಿನಗರದಲ್ಲಿ ವಾಸವಾಗಿದ್ದ ಚೂರಿ ಕುಟುಂಬ, ತಂದೆಯ ನಿಧನದ ಬಳಿಕ ಸೀಮಿಕೇರಿ ಬಳಿ ಇರುವ ಸೋದರಮಾವನ (ತಾಯಿಯ ತಮ್ಮ) ಮನೆಯ ಪಕ್ಕದಲ್ಲೇ
ಬಾಡಿಗೆ ಮನೆ ಮಾಡಿ, ತಾಯಿಯನ್ನು ಬಿಟ್ಟು ಹೋಗಿದ್ದ. ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ತಾಯಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದ. ಆದರೆ, ರವಿವಾರ ಆತನಿಂದ ಫೋನ್‌ ಬಂದಿರಲಿಲ್ಲ. 

ಓದು ಹೆಚ್ಚಿಗೆ ಇರಬೇಕು. ಅದಕ್ಕಾಗಿ ಫೋನ್‌ ಮಾಡಿರಲಿಕ್ಕಿಲ್ಲ ಎಂದು ಭಾವಿಸಿ ತಾಯಿ ಮಹಾನಂದಾ ಸುಮ್ಮನಾಗಿದ್ದರು. ಸೋಮವಾರವೂ ಫೋನ್‌ ಬಂದಿರಲಿಲ್ಲ. ಆದರೆ, ಮಂಗಳವಾರ ಜರ್ಮನಿಯಲ್ಲಿ ಮಂಜುನಾಥ ಚೂರಿ ಜತೆಗೆ
ವ್ಯಾಸಂಗ ಮಾಡುತ್ತಿರುವ ಅನಿಲ ದೇಶಪಾಂಡೆ ಎಂಬಾತ ಅಲ್ಲಿನ ಪೊಲೀಸರಿಗೆ ದೂರು ನೀಡಿದ್ದಾನೆ. ಆ ಬಳಿಕ ಅಲ್ಲಿನ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಾಗೂ ಪೊಲೀಸರು ಅನಿಲ್‌ ಮೂಲಕ ಮನೆಗೆ ಫೋನ್‌ ಮಾಡಿಸಿ, ನಿಮ್ಮ ಪುತ್ರ ಕಾಣುತ್ತಿಲ್ಲ. ಮೂರು ದಿನಗಳಿಂದ  ಕಾಣೆಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಆತಂಕದಲ್ಲಿ ಕುಟುಂಬ: ಮಂಜುನಾಥನಿಗೆ ತಾಯಿ ಮಹಾನಂದ ಚೂರಿ, ಹಿರಿಯ ಸಹೋದರಿ ಕವಿತಾ, ಕಿರಿಯ ಸಹೋದರಿ ವಿಜಯಲಕ್ಷ್ಮೀ ಇದ್ದಾರೆ. ಕವಿತಾಳನ್ನು ಮಹಾಲಿಂಗಪುರ ಮತ್ತು ವಿಜಯಲಕ್ಷ್ಮಿಯನ್ನು  
ಬಸವನಬಾಗೇವಾಡಿಯ ಮನಗೂಳಿಗೆ ಮದುವೆ ಮಾಡಿಕೊಡಲಾಗಿದೆ. ಸದ್ಯ ತಾಯಿ ಒಬ್ಬರೇ ಸೀಮಿಕೇರಿಯಲ್ಲಿದ್ದು, ಮಂಜುನಾಥ ಕಾಣೆಯಾದ ವಿಷಯ ತಿಳಿದು ಇಬ್ಬರೂ ಸಹೋದರಿಯರು, ಮಾವಂದಿರು ಬಂದಿದ್ದಾರೆ. ಇಡೀ ಕುಟುಂಬ, ಮಂಜುನಾಥನ ಸೋದರ ಮಾವ ಮಲ್ಲಿಕಾರ್ಜುನ ಡೋಮನಾಳ ಅವರ ಮನೆಯಲ್ಲಿದ್ದು, ತೀವ್ರ ದುಃ ಖದಲ್ಲಿದ್ದಾರೆ.

ಸುಷ್ಮಾ ಸ್ವರಾಜ್‌- ಮೋದಿಗೆ ಟ್ವೀಟ್‌:
ಮಂಜುನಾಥ ಚೂರಿ ಕಾಣೆಯಾದ ಕುರಿತು ಬಾಗಲಕೋಟೆಯ ಎಸ್ಪಿ, ಸಂಸದ ಗದ್ದಿಗೌಡರ ಅವರಿಗೆ ಕುಟುಂಬದವರು ತಿಳಿಸಿದ್ದಾರೆ. ಟ್ವೀಟ್‌ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ಪ್ರಧಾನಿ ಮೋದಿ ಅವರ ಗಮನಕ್ಕೆ ತಂದಿದ್ದಾರೆ.
ಬಾಗಲಕೋಟೆಯ ಎಸ್ಪಿ ಸಿ.ಬಿ. ರಿಷ್ಯಂತ ಅವರ ಸಹಪಾಠಿಯೊಬ್ಬರು ಜರ್ಮನಿಯಲ್ಲಿ ಅಧಿಕಾರಿಯಾಗಿದ್ದು, ಅವರ ಮೂಲಕ ಮಂಜುನಾಥನ ಪತ್ತೆಗೆ ಪ್ರಯತ್ನಿಸಿದ್ದಾರೆ.

ವಿದ್ಯಾರ್ಥಿಯ ಚಪ್ಪಲಿ, ಸೈಕಲ್, ಪತ್ರ ಪತ್ತೆ:
ಜರ್ಮನಿಯಲ್ಲಿ ನಾಪತ್ತೆಯಾಗಿದ್ದ ಬಾಗಲಕೋಟೆ ವಿದ್ಯಾರ್ಥಿಯ ಸೈಕಲ್, ಚಪ್ಪಲ್ ಹಾಗೂ ಕನ್ನಡದಲ್ಲಿ ಬರೆದಿಟ್ಟಿರುವ ಪತ್ರ ಹ್ಯಾಮ್ಸ್ ಬರ್ಗ್ ನದಿ ಸಮೀಪ ಪತ್ತೆಯಾಗಿರುವುದಾಗಿ ಜರ್ಮನಿಯ ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.