ಅನೈತಿಕ ಸಂಬಂಧ: ಮಹಾರಾಷ್ಟ್ರ ಬಿಜೆಪಿ ಶಾಸಕರ ಬಾಡಿಗಾರ್ಡ್ ಆತ್ಮಹತ್ಯೆ
Team Udayavani, Jun 23, 2017, 12:13 PM IST
ಮುಂಬಯಿ : ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ಚಿರೋಲಿ ಜಿಲ್ಲೆಯ ಬಿಜೆಪಿ ಶಾಸಕರೋರ್ವರ ಬಾಡಿಗಾರ್ಡ್ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಡ್ಚಿರೋಲಿ ಜಿಲ್ಲೆಯ ಆರ್ಮೋರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಕೃಷ್ಣ ಗಜಬೆ ಅವರ ವಾರ್ಸಾ ತೆಹಶೀಲ್ನಲ್ಲಿರುವ ಕಚೇರಿಯಲ್ಲಿ ಅವರ ಬಾಡಿಗಾರ್ಡ್, 34ರ ಹರೆಯದ ಭಾಸ್ಕರ್ ಚೌಕೆ ಪಿಸ್ತೂಲಿನಿಂದ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡನೆಂದು ಗಡ್ಚಿರೋಲಿ ಪೊಲೀಸ್ ಸುಪರಿಂಟೆಂಡೆಂಟ್ ಅಭಿನವ್ ದೇಶ್ಮುಖ್ ತಿಳಿಸಿದ್ದಾರೆ.
ಬಾಡಿಗಾರ್ಡ್ ಭಾಸ್ಕರ್ ಚೌಕೆಯ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಉದ್ದೇಶ ಕಾಣುವುದಿಲ್ಲ; ಆತ ಕೌಟುಂಬಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ; ಆತನಿಗೆ ವಿವಾಹಿತ ಮಹಿಳೆಯೊಬ್ಬಳೊಂದಿಗೆ ಅಕ್ರಮ ಸಂಬಂಧ ಇದೆ ಎನ್ನಲಾಗಿದೆ ಎಂದು ಎಸ್ಪಿ ದೇಶ್ಮುಖ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ