ಹಾಲಿವುಡ್‌ ಸ್ಟೈಲ್‌ನ ಕನ್ನಡ ಸಿನಿಮಾ


Team Udayavani, Jun 23, 2017, 2:26 PM IST

David_(160).jpg

ಈ ಚಿತ್ರವನ್ನು ಹಾಲಿವುಡ್‌ ಸ್ಟೈಲ್‌ನಲ್ಲಿ ಮಾಡಿ ತೋರಿಸುತ್ತೇವೆ …ಹೀಗೆ ತುಂಬ ವಿಶ್ವಾಸದಿಂದ ಹೇಳಿಕೊಂಡರು ಯುವ ನಿರ್ದೇಶಕ ಭಾರ್ಗವ್‌ ಯೋಗಂಬರ್‌. ಅವರು ಹೇಳಿದ್ದು “ಡೇವಿಡ್‌’ ಬಗ್ಗೆ. ಇತ್ತೀಚೆಗೆ ಈ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇದು ಹೊಸಬರೇ ಸೇರಿ ಮಾಡುತ್ತಿರುವ ಮರ್ಡರ್‌ ಮಿಸ್ಟರಿ ಸಿನಿಮಾ.

ಕೋರಿಯೋಗ್ರಾಫ‌ರ್‌ ಆಗಿರುವ ಭಾರ್ಗವ್‌ ಅವರಿಗೆ ಇದು ಮೊದಲ ಅನುಭವ. “ಸಸ್ಪೆನ್ಸ್‌, ಥ್ರಿಲ್ಲರ್‌ ಆಗಿರುವುದರಿಂದ ಇಲ್ಲಿ ತಾಂತ್ರಿಕತೆ ಸ್ಟ್ರಾಂಗ್‌ ಆಗಿರುತ್ತೆ. ಹಾಗಾಗಿ, ಇಂಟರ್‌ನ್ಯಾಷನಲ್‌ ಲೆವೆಲ್‌ನಲ್ಲಿ ಈ ಚಿತ್ರ ಮಾಡುವುದಾಗಿ’ ಹೇಳಿದ ಭಾರ್ಗವ್‌, “ಇದು ಯಾವುದೇ ಧರ್ಮಕ್ಕೆ ಸಂಬಂಧಿಸಿದ ಚಿತ್ರವಲ್ಲ. “ಡೇವಿಡ್‌’ ಅನ್ನೋದು ಇಲ್ಲಿ ವಿಲನ್‌ ಹೆಸರು. ನಾಲ್ಕು ಪಾತ್ರಗಳ ಸುತ್ತ ನಡೆಯೋ ಕಥೆ ಇದು. ಸಣ್ಣ ಬಜೆಟ್‌ನಲ್ಲೇ ಒಳ್ಳೇ ಸಿನಿಮಾ ಮಾಡುವ ಯೋಚನೆ ನಮ್ಮದು. ಬೆಂಗಳೂರಿನ ಕೆಲ ಸ್ಥಳಗಳನ್ನು ಇಲ್ಲಿ ವಿಶೇಷವಾಗಿ ತೋರಿಸುವ ಪ್ರಯತ್ನ ಮಾಡುತ್ತೇನೆ. ಯಾವುದೇ ಸಂದೇಶ ಕೊಡಲು ಚಿತ್ರ ಮಾಡುತ್ತಿಲ್ಲ.

ಒಂದು ಮನರಂಜನೆ ಜತೆಯಲ್ಲಿ ಹೊಸ μàಲ್‌ ಕೊಡುವ ಚಿತ್ರ ಇದಾಗಲಿದೆ. ಜುಲೈ 17 ರಿಂದ 20 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ’ ಅಂದರು ಭಾರ್ಗವ್‌. ಶ್ರೇಯಸ್‌ ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ. “ಪ್ರಕಾಶ್‌ ಬೆಳವಾಡಿ ಅವರ ರಂಗಭೂಮಿಯಲ್ಲಿ ಕೆಲಸ ಮಾಡಿದ್ದ ನಾನು, ಕೆಲ ಜಾಹಿರಾತು, ಶಾರ್ಟ್‌μಲ್ಮ್ಗಳಲ್ಲಿ ನಟಿಸಿದ್ದೇನೆ.

“ರಂಗ್‌ಬಿರಂಗಿ’ ಚಿತ್ರದಲ್ಲೂ ನಟಿಸುತ್ತಿದ್ದೇನೆ. ಇಲ್ಲಿ ಗೌತಮ್‌ ಎಂಬ ಪಾತ್ರ ನಿರ್ವಹಿಸುತ್ತಿದ್ದು, ಇದೊಂದು ಕಾಮನ್‌ ಮ್ಯಾನ್‌ವೊಬ್ಬನ ಸಿಂಪಲ್‌ ಸ್ಟೋರಿ. ಯುಎಸ್‌ ರಿಟರ್ನ್ ಆಗಿರುವ ಹುಡುಗನ ಲೈಫ್ನಲ್ಲಿ ಏನಾಗುತ್ತೆ ಎಂಬುದೇ ಕಥೆ. ಇಲ್ಲಿ ಎರಡು ಶೇಡ್‌ ಇರುವ ಪಾತ್ರ ನನ್ನದು’ ಅಂದರು ಶ್ರೇಯಸ್‌. ಸಾರಾ ಹರೀಶ್‌ ಚಿತ್ರದ ನಾಯಕಿ. 
ಮೂಲತಃ ಕೊಡಗಿನವರಾದ ಸಾರಾ, ಮಾಡೆಲಿಂಗ್‌ ಕ್ಷೇತ್ರದಲ್ಲಿದ್ದವರು. ಕಥೆ ಮತ್ತು ಪಾತ್ರ ಕೇಳಿದಾಗ, ಒಳ್ಳೇ ಅವಕಾಶ ಅಂದುಕೊಂಡು ನಟಿಸುತ್ತಿದ್ದೇನೆ. ಅವಿನಾಶ್‌ ಅವರ ಮಗಳ ಪಾತ್ರ ನನ್ನದು ಅಂದರು ಸಾರಾ. ನವ್ಯಾ ಎಂಬ ಮತ್ತೂಬ್ಬ ಹೊಸ ಹುಡುಗಿಗೂ ಇದು ಮೊದಲ ಅನುಭವ. ಅವರಿಲ್ಲಿ ಆಂಗ್ಲೋ ಇಂಡಿಯನ್‌ ಹುಡುಗಿ ಪಾತ್ರವಂತೆ. ಕಾವ್ಯಾ ಶಾ ಕೂಡ ಇಲ್ಲೊಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಹೇಳಿಕೊಂಡರು. ಪ್ರತಾಪ್‌ ನಾರಾಯಣ್‌, ಇಲ್ಲಿ ವಿಕ್ರಮ್‌ ಶೆಟ್ಟಿ ಎಂಬ ಪಾತ್ರ ಮಾಡುತ್ತಿದ್ದು, ಅವರ ಹಿಂದಿನ ಎಲ್ಲಾ ಸಿನಿಮಾಗಳಲ್ಲೂ ಒಂದು ರೀತಿಯ ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿದ್ದರಂತೆ.

ಇಲ್ಲಿ ಬಿಜಿನೆಸ್‌ಮ್ಯಾನ್‌ವೊಬ್ಬರ ಮಗನಾಗಿ, ಸ್ಟೈಲಿಶ್‌ ಹುಡುಗನಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ಪ್ರತಾಪ್‌
ನಾರಾಯಣ್‌.

ಇನ್ನು, ಚಿತ್ರಕ್ಕೆ ಅಲೋಕ್‌ ಸಂಗೀತ ಕೊಡುತ್ತಿದ್ದಾರೆ. ಮೂರು ಹಾಡುಗಳಿದ್ದು, ಎಲ್ಲವೂ ಫ್ರೆಶ್‌ ಆಗಿರಲಿವೆ. ಹೊಸತಂಡಕ್ಕೆ ನಿಮ್ಮ ಬೆಂಬಲ ಇರಲಿ ಅಂದರು ಅಲೋಕ್‌. ಆಸ್ಟ್ರೇಲಿಯಾದ ಸ್ಟೀವ್‌ ರೇಸ್‌ ಚಿತ್ರಕ್ಕೆ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಮಾತಿಗೂ ಮುನ್ನ ಪ್ರಕಾಶ್‌ ಬೆಳವಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.