ಬೆಳಗಾವಿ ಪಾಲಿಕೆಯಲ್ಲಿ ಮೊದಲ ಬಾರಿಗೆ ಮೊಳಗಿದ ನಾಡಗೀತೆ
Team Udayavani, Jun 25, 2017, 3:45 AM IST
ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಶನಿವಾರ ಮೊದಲ ಬಾರಿಗೆ ಕನ್ನಡ ನಾಡಗೀತೆ ಮೊಳಗುವ ಮೂಲಕ ಇತಿಹಾಸ ಸೃಷ್ಟಿಸಿದೆ. ಕನ್ನಡ-ಮರಾಠಿ ಭಾಷಾ ಜಗಳದಲ್ಲಿಯೇ ಮುಳುಗಿದ್ದ ಪಾಲಿಕೆಯಲ್ಲಿ “ಜಯ ಭಾರತ ಜನನಿಯ ತನುಜಾತೆ…’ನಾಡಗೀತೆ ಮೊಳಗಿತು.
ಕನ್ನಡ ವಿರೋಧಿ ಚಟುವಟಿಕೆಯಲ್ಲಿ ಹಾಗೂ ರಾಜ್ಯೋತ್ಸವದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ ಮಾಜಿ ಮೇಯರ್ ಸರಿತಾ ಪಾಟೀಲ, ಶಾಸಕ ಸಂಭಾಜಿ ಪಾಟೀಲ ಸೇರಿ ಎಂಇಎಸ್ನ ಎಲ್ಲ ಸದಸ್ಯರು ಎದ್ದು ನಿಂತು ಗೌರವ ಸಲ್ಲಿಸಿದರು. ಎಂಇಎಸ್ ಸದಸ್ಯರಿಗೆ ಜಿಲ್ಲಾಧಿಕಾರಿ ಎನ್. ಜಯರಾಮ್ ಚಾಟಿ ಬೀಸಿದ್ದರಿಂದ ಈ ಬದಲಾವಣೆ ಕಾಣುವಂತಾಗಿದೆ.
ಬೆಳಗಾವಿ ಪಾಲಿಕೆಯಲ್ಲಿ ಮರಾಠಿ ಭಾಷಿಕರ ಆಡಳಿತವಿದೆ. ಮೊದಲ ಬಾರಿಗೆ ನಾಡಗೀತೆ ಹಾಡುವ ಪ್ರಕ್ರಿಯೆ ನಡೆದಿದ್ದಕ್ಕೆ ಮರಾಠಿ ಭಾಷಿಕ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ನಾಡಗೀತೆ ಬಗ್ಗೆ ಸರ್ಕಾರದಿಂದ ಆದೇಶ ಬಂದಿದೆಯೇ ಎಂದು ಪಾಲಿಕೆ ಅಭಿಯಂತರಾದ ಲಕ್ಷ್ಮೀ ನಿಪ್ಪಾಣಿಕರ ಬಳಿ ಕೇಳಿದ್ದರು. ಸರ್ಕಾರದಿಂದ ಡಿಸಿ ಕಚೇರಿಗೆ ನಾಡಗೀತೆ ಹೇಳುವ ಬಗ್ಗೆ ಆದೇಶ ಬಂದಿದೆ ಎಂದು ಅವರು ಹೇಳಿದಾಗ ಸದಸ್ಯರು ಮರಳಿದರು.
ಶನಿವಾರ ನಡೆದ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಮುನ್ನ ಕೋರಂ ಭರ್ತಿ ಆಗದ್ದನ್ನು ಗಮನಿಸಿದ ಜಿಲ್ಲಾಧಿಕಾರಿ, ಸದಸ್ಯರಿಗೆ ಸೂಚನೆ ನೀಡಿ, ಐದು ನಿಮಿಷದೊಳಗೆ ಕೋರಂ ಭರ್ತಿ ಆಗದಿದ್ದರೆ ಬಾಗಿಲು ಬಂದ್ ಮಾಡುವುದಾಗಿ ಹೇಳಿದರು. ಎಲ್ಲ ಸದಸ್ಯರೂ ಒಳ ಬಂದೊಡನೆ ನಾಡಗೀತೆ ಹಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ