ತಪ್ಪಿಸಿಕೊಳ್ಳಲು ಯತ್ನಿಸಿದವನಿಗೆ ಗುಂಡು


Team Udayavani, Jun 25, 2017, 11:15 AM IST

gun-shoot-pics.jpg

ಬೆಂಗಳೂರು: ಎಚ್‌ಎಎಲ್‌ ಠಾಣೆ ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿಯೊಬ್ಬ ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾನೆ. ಜಾನ್ಸನ್‌(21) ಗುಂಡೇಟು ತಿಂದವ. ಜೂ.10 ರಂದು ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ದರೋಡೆಗೆ ಯತ್ನಿಸಿದ ಜಾನ್ಸನ್‌ನನ್ನು ತಡೆಯಲು ಮುಂದಾದ ಫ್ರಾಂಕ್‌ಫಿನ್‌ ಏರ್‌ಹೋಸ್ಟಸ್‌ ಕಂಪೆನಿ ಉದ್ಯೋಗಿ ಸಾಯಿಚರಣ್‌ನನ್ನು ಆರೋಪಿ ಕೊಲೆಗೈದಿದ್ದ. ಹೀಗಾಗಿ ಜಾನ್ಸನ್‌ನನ್ನು ಬಂಧಿಸಲಾಗಿತ್ತು. 

ಪ್ರಕರಣದಲ್ಲಿ ಸಿಕ್ಕಿ ಬಿದ್ದ ಆರೋಪಿಯನ್ನು ಘಟನೆ ನಡೆದ ಅನ್ನಸಂದ್ರಪಾಳ್ಯಕ್ಕೆ ಕರೆದೊಯ್ದು ಮಹಜರ್‌ ಮುಗಿಸಿ ಪುನಃ ಠಾಣೆಗೆ ಕರೆತರಲಾಗುತ್ತಿತ್ತು. ಈ ವೇಳೆ ಆರೋಪಿ ಜಾನ್ಸನ್‌ ಮೂತ್ರ ವಿಸರ್ಜಿಸಬೇಕೆಂದು ಕೇಳಿಕೊಂಡಿದ್ದ. ಹೀಗಾಗಿ ಆತನನ್ನು ಜೀಪಿನಿಂದ ಇಳಿಸಲಾಗಿತ್ತು.

ಈ ವೇಳೆ ಪೇದೆಗಳಾದ ಕಾಂತರಾಜು ಮತ್ತು ಮಂಜೇಶ್‌ ಆರೋಪಿಯ ಜತೆಯೇ ಇದ್ದರು. ಆದರೆ, ಏಕಾಏಕಿ ಪೇದೆಗಳ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಜಾನ್ಸನ್‌ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಠಾಣೆ ಇನ್‌ಸ್ಪೆಕ್ಟರ್‌ ಸಾದಿಕ್‌ ಪಾಷಾ ತಪ್ಪಿಸಿಕೊಳ್ಳದಂತೆ ಆರೋಪಿಗೆ ಮೂರು ಬಾರಿ ಎಚ್ಚರಿಕೆ ಕೊಟ್ಟಿದ್ದಾರೆ.

ಇದ್ಯಾವುದಕ್ಕೂ ಜಾನ್ಸನ್‌ ಬಗ್ಗಿಲ್ಲ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪ್ರಯೋಜನ ಆಗಲಿಲ್ಲ. ನಂತರ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಯಿತು. ಈ ಸಂದರ್ಭದಲ್ಲಿ ಗುಂಡು ಆತನ ಎಡಗಾಲಿಗೆ ತಗುಲಿದೆ. ಕುಸಿದು ಬಿದ್ದ ಆತನನ್ನು ತಕ್ಷಣ ಜೀಪ್‌ನಲ್ಲೇ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅವರು ತಿಳಿಸಿದರು.

ಕೊಲೆ ಪ್ರಕರಣದಲ್ಲಿ ಜಾನ್ಸನ್‌ ಸಿಕ್ಕಿದ್ದು ಹೀಗೆ: ಸಾಯಿಚರಣ್‌ ಕೊಲೆ ಬಳಿಕ ಪ್ರಾಥಮಿಕ ತನಿಖೆಯಲ್ಲಿ ಆತನ ಸ್ನೇಹಿತರೇ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಚಾಯಿಚರಣ್‌ನ ಎಲ್ಲ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿತ್ತು. ಆದರೆ, ಆರೋಪಿ ಪತ್ತೆಯಾಗಲಿಲ್ಲ. ನಂತರ ಘಟನಾ ಸ್ಥಳದ ಸುತ್ತ ಮುತ್ತಲ ಪ್ರದೇಶದಲ್ಲಿದ್ದ 25 ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಲಾಗಿತ್ತು.

ಆದರೆ, ಯಾವುದರಲ್ಲೂ ಆರೋಪಿಯ ಮುಖ ಕಾಣುತ್ತಿರಲಿಲ್ಲ. ಒಂದು ಕ್ಯಾಮೆರಾದಲ್ಲಿ ಮಾತ್ರ ಅನುಮಾನಾಸ್ಪದವಾಗಿ ಹೋಗುತ್ತಿದ್ದವನ ಚಿತ್ರ ಚಿಕ್ಕಿತ್ತು. ಈ ದೃಶ್ಯವನ್ನೇ ತಾಂತ್ರಿಕ ಪರಿಣಿತರ ಮೂಲಕ ಇನ್ನಷ್ಟು ಸ್ಪಷ್ಟವಾಗಿ ಕಾಣುವಂತೆ ಮಾಡಿಕೊಂಡು ವೈಜ್ಞಾನಿಕ ವಿಧಾನಗಳ ಮೂಲಕ ತನಿಖೆ ನಡೆಸಿದಾಗ ಆರೋಪಿ ಸಿಕ್ಕಿ ಬಿದಿದ್ದಾನೆ ಎಂದು ಹೇಮಂತ್‌ ನಿಂಬಾಳ್ಕರ್‌ ತಿಳಿಸಿದರು.

ಸುಳಿವು ಕೊಟ್ಟ ನಡೆಯುವ ಶೈಲಿ: ಸಾಯಿಚರಣ್‌ ಕೊಲೆ ಪ್ರಕರಣದಲ್ಲಿ ನಡುಗೆ ಶೈಲಿಯೇ ಆರೋಪಿ ಬಂಧನಕ್ಕೆ ನೆರವಾಗಿದೆ. ಸಿಸಿಟಿವಿಯಲ್ಲಿ ಕಂಡಿದ್ದ ಅನುಮಾನಸ್ಪದ ವ್ಯಕ್ತಿಯ ನಡುಗೆಯನ್ನು ಅಕ್ಕ-ಪಕ್ಕದ ನಾಲ್ಕು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣದಲ್ಲಿ ತೊಡಗಿರುವವರೊಂದಿಗೆ ಹೋಲಿಕೆ ಮಾಡಿ ನೋಡಲಾಗಿತ್ತು. ಈ ವೇಳೆ ಜಾನ್ಸನ್‌ ಕೂಡ ಬಂದಿದ್ದ.

ಪರೇಡ್‌ನ‌ ದೃಶ್ಯವನ್ನು ಕ್ಯಾಮರಾದಲ್ಲಿ ದಾಖಲಿಸಿಕೊಳ್ಳಲಾಯಿತು. ನಂತರ ಪರಿಶೀಲಿಸಿದಾಗ ಜಾನ್ಸನ್‌ ನಡೆಯುವ ಶೈಲಿ ಸಿಸಿಟಿವಿಯಲ್ಲಿ ಸೆರೆ ಸಿಕ್ಕ ದೃಶ್ಯಕ್ಕೆ ಹೊಂದಾಣಿಕೆ ಆಗಿತ್ತು. ಈ ಆಧಾರದಲ್ಲಿ ಈತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಸಾಯಿಚರಣ್‌ನನ್ನು ಕೊಂದಿರುವುದು ತಾನೇ ಎಂದು ಜಾನ್ಸನ್‌ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.