ವಚನ ಸಾಹಿತ್ಯ ಓದಿನೊಂದಿಗೆ ಪಾಲಿಸಿ: ಡಾ|ಪಟ್ಟಣಶೆಟ್ಟಿ


Team Udayavani, Jun 27, 2017, 11:59 AM IST

hub5.jpg

ಧಾರವಾಡ: ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತಮ ಚಿಂತನೆ ಕೊಡಬಲ್ಲ ವಚನ ಸಾಹಿತ್ಯವನ್ನು ಓದುವುದಷ್ಟೇ ಅಲ್ಲದೇ ಅಳವಡಿಕೆಗೂ ಆದ್ಯತೆ ನೀಡಬೇಕು ಎಂದು ಹಿರಿಯ ಸಾಹಿತಿ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ ಅಭಿಪ್ರಾಯಪಟ್ಟರು. ನಗರದ ಮುರುಘಾಮಠದಲ್ಲಿ ಸೋಮವಾರ ನಡೆದ ಲಿಂ| ತ್ರಿವಿಧ ದಾಸೋಹ ಮೂರ್ತಿ ಶ್ರೀ ಮಹಾಂತಪ್ಪಗಳ 24ನೇ ಸ್ಮರಣೋತ್ಸವದಲ್ಲಿ ಐದು ಗ್ರಂಥಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. 

ನಮ್ಮೊಳಗೆ ನಾವು ಬೆಳಕು ಕಂಡಾಗ ಮಾತ್ರ ನಮ್ಮೆದುರಿಗೆ ಬೆಳಗು ಕಂಡು ಬರುತ್ತದೆ. ಅಂತಹ ಸಾತ್ವಿಕ ಚಿಂತನೆಗಳ ಸಾಹಿತ್ಯದ ಮೂಲಕ ಹೊರಗಣ ಬೆಳಕನ್ನು ಕಾಣುವಂತಾಗಬೇಕು. ವಚನಕಾರರು ತಮ್ಮ ಅನುಭವದ ಮೇಲೆ ಬರೆದ ವಚನಗಳನ್ನು ವಿಶೇಷವಾಗಿ ವಿವರಿಸಿ ಅವುಗಳ ಮೌಲ್ಯಗಳನ್ನು ಹೆಚ್ಚಿಸಿದ ಕಾರಣ ಅವು ಷಟಸ್ಥಲ ರೂಪಗಳನ್ನು ಪಡೆದುಕೊಂಡವು.

ಮೌಲ್ಯಯುತ ಅನುಭಾವದ ವಿಷಯಗಳು ವಚನ ಸಾಹಿತ್ಯದ ಮೂಲಕ ಜನಮನ ತಲುಪಿ ಪ್ರಸಾರವಾದವು. ನಾವು ಕೂಡ ವಚನಗಳನ್ನು ಓದಿ ಅವುಗಳನ್ನು ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ವಚನ ಸಾಹಿತ್ಯ ರಚನೆ ಮಾಡುವಂತಹ ಶಕ್ತಿ ಯುವ ಜನರಿಗೆ ಬರಬೇಕು ಎಂದರು. ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಮಹಾಂತಪ್ಪಗಳು ಈ ನಾಡು ಕಂಡ ಮಹಾನ್‌ ಚೇತನರು. 

ಶ್ರೀ ಮೃತ್ಯುಂಜಯಪ್ಪಗಳ ಕಾರುಣ್ಯದ ಶಿಶುವಾಗಿ ಪರಮ ಶಿಷ್ಯರಾಗಿ ಸಾತ್ವಿಕ ಬದುಕನ್ನು ಸಾಗಿಸಿ ಸ್ವಾಮಿತ್ವಕ್ಕೆ ಒಂದು ಅಪೂರ್ವ ಮಾದರಿಯಾಗಿದ್ದರು. ಅವರ ಆಶಯದಂತೆ ಇಂದು ಕೂಡ ಶ್ರೀ ಮಠವು ಅದೇ ಪರಂಪರೆ ಮುಂದುವರಿಸಿಕೊಂಡು ಹೋಗುತ್ತಿದೆ. ಮುಂಬರುವ ಜನೇವರಿಯಲ್ಲಿ ಶ್ರೀಮಠವು ಶತಮಾನ ಆಚರಿಸಿಕೊಳ್ಳುತ್ತಿದ್ದು, ಶ್ರೀ ಮಲ್ಲಿಕಾರ್ಜುನ ಸ್ವಾಮಿಜಿಯವರ ಮಾರ್ಗದರ್ಶನಲ್ಲಿ ಮಹತ್ವದ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಬ್ರಿಟಿಷರ ಕಾಲದಲ್ಲಿ ಯಾವುದೇ ಸೌಲಭ್ಯ ಹೊಂದಿರದ ಈ ನಾಡಿನಲ್ಲಿ ಶ್ರೀ ಮೃತ್ಯುಂಜಯಪ್ಪಗಳು ಮುರುಘಾಮಠದಲ್ಲಿ ಜ್ಞಾನ ಹಾಗೂ ಅನ್ನ ದಾಸೋಹ ನೆರವೇರಿಸಿ  ಅನೇಕರಿಗೆ ಶಿಕ್ಷಣ ನೀಡುವುದಲ್ಲದೇ ಜ್ಞಾನದ ಹಸಿವನ್ನು ನೀಗಿಸಿದ್ದರು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ ಕಾಯಕ ದಾಸೋಹದ ಮಹತ್ವದ ಅರಿವನ್ನು ನಾಡಿಗೂ ಪರಿಚಯಿಸಿದ ಕೀರ್ತಿ ಶ್ರೀಮಠಕ್ಕೆ ಸಲ್ಲುತ್ತದೆ ಎಂದರು. 

ಸಾನ್ನಿಧ್ಯ ವಹಿಸಿದ್ದ ಫಕೀರೇಶ್ವರ ಸಂಸ್ಥಾನ ಮಠದ ಫಕೀರಸಿದ್ದರಾಮ ಸ್ವಾಮೀಜಿ ಮಾತನಾಡಿ, ಮಹಾಂತಪ್ಪಗಳು ಮಾತೃ ಹೃದಯಿಯಾಗಿದ್ದರು. ಗುರುಭಕ್ತಿ, ಲಿಂಗನಿಷ್ಠೆ, ಜಂಗಮ ದಾಸೋಹಕ್ಕೆ ಹೆಸರುವಾಸಿಯಾಗಿದ್ದರು. ಮೃತ್ಯುಂಜಯಪ್ಪಗಳದ್ದು ಅಲ್ಲಮಪ್ರಭುವಿನ ಗಾಂಭಿರ್ಯದ ನಿಲುವು. ಆದರೆ ಮಹಾಂತಪ್ಪಗಳದ್ದು ಬಸವಣ್ಣನವರಂತೆ ಸದುವಿನಯ ತುಂಬಿದ ಭಕ್ತಿ ಪಾರಮ್ಯದ ನಿಲುವಾಗಿತ್ತು ಎಂದರು. 

ಮಲ್ಲಿಕಾರ್ಜುನ ಸ್ವಾಮೀಜಿ, ಗುದೆಶ್ವರ ಸ್ವಾಮೀಜಿ, ಡಾ| ಶಂಭುಲಿಂಗ ಹೆಗಡಾಳ  ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಸಂಸದ ಮಂಜುನಾಥ ಕುನ್ನೂರು, ನಾಗರಾಜ ದ್ಯಾಮನಕೊಪ್ಪ, ಡಾ| ವೀರಣ್ಣ ರಾಜೂರ, ನಾಗರಾಜ ಪಟ್ಟಣಶೆಟ್ಟಿ ಇದ್ದರು. ಡಾ| ಮಲ್ಲು ಗಾಣಗೇರ ನಿರೂಪಿಸಿ, ಸ್ವಾಗತಿಸಿದರು. ಸಮಾರಂಭದಲ್ಲಿ ದಾಸೋಹಿಗಳನ್ನು ಹಾಗೂ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು.  

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.