ಕೆಂಪೇಗೌಡ ಬೆಂಗಳೂರು ನಗರ ನಿರ್ಮಾತೃ, ಪ್ರತಿ ಜೂ.27ರಂದು ಜಯಂತಿ; ಸಿಎಂ


Team Udayavani, Jun 27, 2017, 3:58 PM IST

siddu22.jpg

ಬೆಂಗಳೂರು:ಇಂದಿನ ಬೆಂಗಳೂರಿನ ಪೇಟೆಗಳ ನಿರ್ಮಾತೃ ಕೆಂಪೇಗೌಡರು. 70 ದಶಕಗಳ ಹಿಂದೆ ಬೆಂಗಳೂರು ತುಂಬಾ ಸುಂದರವಾಗಿತ್ತು. ಇಲ್ಲಿನ ವಾತಾವರಣ ಎಲ್ಲರಿಗೂ ಇಷ್ಟವಾಗುವಂತಿತ್ತು. ಗಾರ್ಡನ್ ಸಿಟಿ ಎಂಬ ಹೆಗ್ಗಳಿಕೆಗೂ ನಗರ ಪಾತ್ರವಾಗಿತ್ತು.  4 ದಿಕ್ಕುಗಳಲ್ಲಿಯೂ 4 ಗೋಪುರಗಳನ್ನು ಕೆಂಪೇಗೌಡರು ನಿರ್ಮಿಸಿದ್ದರು. ಆದರೆ ಬೆಂಗಳೂರು ನಗರ ಇಂದು ಗೋಪುರ ಬಿಟ್ಟು ಬೆಳೆದಿದೆ. ಕೆರೆಗಳನ್ನು ನುಂಗುವ ಕೆಲಸವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಜಾತ್ಯತೀತ ನಾಯಕರಾಗಿದ್ದರು. ಕೆಂಪೇಗೌಡರ ಹೆಸರು ಅಜರಾಮರವಾಗಿರಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.

ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವು. ಬಳಿಕ ದೇವನಹಳ್ಳಿ ಏರ್ ಪೋರ್ಟ್ ಗೆ ಕೆಐಎಎಲ್ ಹೆಸರು ಬಂತು. ಮೆಟ್ರೋ ನಿಲ್ದಾಣಕ್ಕೂ ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಬೆಂಗಳೂರು ವಿವಿ 3 ಭಾಗವಾಗಿದೆ. ಅದರಲ್ಲಿ ಒಂದು ವಿವಿಗೆ ಕೆಂಪೇಗೌಡರ ಹೆಸರಿಡಲು ಸರ್ಕಾರ ಚಿಂತನೆ ನಡೆಸಿದೆ. ನಾವು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದೇವೆ ಎಂದರು.

ಕೆಂಪೇಗೌಡರು ಬೆಂಗಳೂರನ್ನು ಸುಂದರ ನಗರವನ್ನಾಗಿ ಬೆಳೆಸಿದ್ದರು. ಕೆರೆಗಳನ್ನು ಕಟ್ಟಿ ರಕ್ಷಿಸಿದ್ದರು. ಆದರೆ ಇಂದು ಬೆಂಗಳೂರಿನಲ್ಲಿ ಕೆರೆಗಳನ್ನು ನುಂಗಿ ಕೆರೆಗಳೇ ಮಾಯವಾಗಿದೆ. ಬೆಂಗಳೂರಿನ ಜನಸಂಖ್ಯೆ ಇಂದು ಒಂದು ಕೋಟಿಗೂ ಮೀರಿದೆ. ನಗರದಲ್ಲಿ ಸುಮಾರು 40 ಲಕ್ಷ ದ್ವಿಚಕ್ರ ವಾಹನಗಳಿವೆ. ಒಟ್ಟು 67 ಲಕ್ಷ ವಾಹನಗಳು ನಗರದಲ್ಲಿ ದಿನಂಪ್ರತಿ ಸಂಚರಿಸುತ್ತವೆ ಎಂದು ವಿವರಿಸಿದರು.

ಪ್ರತಿ ಜೂನ್ 27ರಂದು ರಾಜ್ಯಾದ್ಯಂತ ಕೆಂಪೇಗೌಡ ಜಯಂತಿ:
ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜಯಂತಿಯನ್ನು ಪ್ರತಿವರ್ಷ ಜೂನ್ 27ರಂದು ರಾಜ್ಯಾದ್ಯಂತ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಂಪೇಗೌಡ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.