ಅಜೆಕಾರು ಕಲಾಭಿಮಾನಿ ಬಳಗ: ಶ್ರೀ ಶನೀಶ್ವರ ಪೂಜಾ,ತಾಳಮದ್ದಳೆಗೆ ಚಾಲನೆ


Team Udayavani, Jun 27, 2017, 4:34 PM IST

25-Mum02a.jpg

ಮುಂಬಯಿ: ಶ್ರೀ ಶನೀಶ್ವರ ಮಹಾತೆ¾ ತಾಳಮದ್ದಳೆಯ ಮುಖಾಂತರ ಧಾರ್ಮಿಕತೆಗೆ ಹೆಚ್ಚಿನ ಒಲವನ್ನು ನೀಡುತ್ತಿರುವ ಅಜೆಕಾರು ಕಲಾಭಿಮಾನಿ ಬಳಗದ ಕಾರ್ಯ ಅಭಿನಂದನೀಯ. ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಿಯ ಸನ್ನಿಧಾನದಲ್ಲಿ ಅಜೆಕಾರು ಬಾಲಕೃಷ್ಣ ಶೆಟ್ಟಿ ನೇತೃತ್ವದ ಅಜೆಕಾರು ಯಕ್ಷಪರ್ಯಟನೆ-2017 ಸಮಾರಂಭಕ್ಕೆ ಚಾಲನೆ ದೊರೆತಿರುವುದು ಶುಭ ಸೂಚನೆಯಾಗಿದೆ. ಊರಿನ ಪ್ರಸಿದ್ಧ ಕಲಾವಿದರ ಸಮ್ಮಿಲನದೊಂದಿಗೆ ಶ್ರೀ ಶನಿಕಥಾ ಪಾರಾಯಣವನ್ನು ತಾಳಮದ್ದಳೆಯ ರೂಪದಲ್ಲಿ ಪ್ರಸ್ತುತಪಡಿಸುವ ಈ  ಯಕ್ಷ ಪರ್ಯಟನೆಗೆ ಶ್ರೀ ದೇವಿ ಮೂಕಾಂಬಿಕೆಯ ಅನುಗ್ರಹ ಸದಾ ಇದೆ. ನಿಮ್ಮೆಲ್ಲರ ಅಶೋತ್ತರಗಳು ಈಡೇರಲಿ. ಇದರ ಮುಖಾಂತರ ನಾಡಿನ ಯಕ್ಷಗಾನ ಕಲೆ, ಕಲಾವಿದರು ಬೆಳೆಯಲಿ ಎಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಅಭಿಪ್ರಾಯಿಸಿದರು.

ಜೂ. 24ರಂದು ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸಂಯೋಜನೆಯಲ್ಲಿ  ಶ್ರೀ ಶನೀಶ್ವರ ಪೂಜಾ ಸಮಿತಿ ಪಕ್ಷಿಕೆರೆ ಬಳಗದ ಕಲಾವಿದರುಗಳಿಂದ ಆಯೋಜಿಸಲಾಗಿದ್ದ ಶ್ರೀ ಶನೀಶ್ವರ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆ – ಅಜೆಕಾರು ಯಕ್ಷಪರ್ಯಟನೆ -2017 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಓರ್ವ ಕಲಾವಿದರಾಗಿ ಇತರ ಕಲಾವಿದರ ಕಷ್ಟ-ಕಾರ್ಪಣ್ಯಗಳನ್ನು ಅರಿತುಕೊಂಡು ಪ್ರತಿವರ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಊರಿನ ಕಲಾವಿದರನ್ನು ಆಹ್ವಾನಿಸಿ ಅವರಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುತ್ತಿದ್ದಾರೆ. ಇದರಿಂದ ಯಕ್ಷಗಾನ ಕಲೆಯೊಂದಿಗೆ ಕಲಾವಿದರು ಬೆಳೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದ ಕದ್ರಿ ನವನೀತ ಶೆಟ್ಟಿ ಅವರನ್ನು ಶ್ರೀ ಮೂಕಾಂಬಿಕಾ ಮಂದಿರದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಮಂದಿರದ ಉಪಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ಕಾರ್ಯದರ್ಶಿ ಸುರೇಶ್‌ ಕೋಟ್ಯಾನ್‌, ಕೋಶಾಧಿಕಾರಿ ಶೇಖರ್‌ ದೇವಾಡಿಗ, ಉದ್ಯಮಿಗಳಾದ ನಾಗರಾಜ ಶೆಟ್ಟಿ, ಪ್ರಮೋದ್‌ ಕರ್ಕೇರ, ಅಜೆಕಾರು ಕಲಾಭಿಮಾನಿ ಬಳಗದ ಸಂಸ್ಥಾಪಕಾಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.

ಶ್ರೀ ಶನೀಶ್ವರ ಮಹಾತೆ¾ ತಾಳಮದ್ದಳೆಯಲ್ಲಿ ಭಾಗವತರಾಗಿ ಶ್ರೀ ಕಟೀಲು ಮೇಳದ ಪ್ರಸಿದ್ಧ ಭಾಗವತರಾದ ಸತೀಶ್‌ ಶೆಟ್ಟಿ ಬೊಂದೆಲ್‌, ಮದ್ದಳೆಯಲ್ಲಿ ಪದ್ಮನಾಭ ಶೆಟ್ಟಿಗಾರ್‌, ಚೆಂಡೆಯಲ್ಲಿ ದಯಾನಂದ ಶೆಟ್ಟಿಗಾರ್‌ ಅವರು ಪಾಲ್ಗೊಂಡಿದ್ದರು. ಅರ್ಥದಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಅಶೋಕ್‌ ಶೆಟ್ಟಿ ಸರಪಾಡಿ, ವಿಜಯಕುಮಾರ್‌ ಶೆಟ್ಟಿ ಮೈಲೊಟ್ಟು, ಪ್ರಸನ್ನ ಶೆಟ್ಟಿ ಅತ್ತೂರು, ಸಸಿಹಿತ್ಲು ಶ್ರೀಪತಿ ಭಟ್‌  ಅವರು ಭಾಗವಹಿಸಿದ್ದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಕಲಾಭಿಮಾನಿಗಳು, ಭಕ್ತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.