ಮುಸ್ಲಿಂ ಯುವತಿ, ದಲಿತ ಯುವಕನ ಲವ್: ತಂದೆ,ತಮ್ಮನಿಗೆ ಥಳಿಸಿದ್ದೇಕೆ?
Team Udayavani, Jun 28, 2017, 10:53 AM IST
ವಿಜಯಪುರ: ಜಿಲ್ಲೆಯ ಸಿಂಧಗಿಯ ಹಾಳಗುಂಡನಹಾಳದಲ್ಲಿ ಅಂತರ್ಧರ್ಮೀಯ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿ ದಲಿತ ವ್ಯಕ್ತಿಗಳಿಬ್ಬರನ್ನು ಮರಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿರುವ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ನಿಂಗಪ್ಪ ಎಂಬ ಯುವಕ ಮುಸ್ಲಿಂ ಧರ್ಮದ ಯುವತಿಯನ್ನು ಪ್ರೇಮ ವಿವಾಹವಾಗಿ ಊರು ಬಿಟ್ಟು ತೆರಳಿರುವುದು ಹಲ್ಲೆ ನಡೆಸಲು ಕಾರಣವಾಗಿದೆ. ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲದ ಅಮಾಯಕರಾದ ನಿಂಗಪ್ಪನ ತಂದೆ ಮರೆಪ್ಪ ಮತ್ತು ಸಹೋದರ ರಮೇಶ್ನನ್ನು ಯುವತಿಯ ಕಡೆಯವರು ಮರಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇಬ್ಬರನ್ನು ವಿನಾಕಾರಣ ಅಮಾನವೀಯವಾಗಿ ಥಳಿಸುತ್ತಿದ್ದರೂ ಸ್ಥಳೀಯರು ಯಾರೂ ನೆರವಿಗೆ ಬರಲಿಲ್ಲ. ಇದೀಗ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿರುವ ಮರೆಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ರಮೇಶ್ ಅವರು ಕಲ್ಕೇರಿ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಗ್ಗೆಯಾಗಲಿ, ಥಳಿಸಿದ ಆರೋಪಿಗಳನ್ನು ವಶಕ್ಕೆ ಪಡೆದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಯುವತಿಯ ಅಣ್ಣ ಮಾಬು ಸಾಬ್ ಮತ್ತು ಅಲ್ಲಾ ಭಕ್ಷ್ ಎನ್ನುವವರು ಬೆಂಬಲಿಗರೊಂದಿಗೆ ಬಂದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ತಾಣಗಳು,ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್