ಮತ್ತೂಮ್ಮೆ ಸುನಾದ ಯುವದನಿ 


Team Udayavani, Jun 30, 2017, 3:35 AM IST

KALA-2.jpg

ಸಂಗೀತ ಎನ್ನುವುದು ಒಂದು ಸ್ವತಂತ್ರವಾದ ಕಲೆ. ಸ್ವತಂತ್ರವಾಗಿ ತನ್ನ ಅಸ್ತಿತ್ವವನ್ನು ಕಂಡುಕೊಂಡು, ಜನರ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿರುವ ವೈಶಿಷ್ಟ್ಯಪೂರ್ಣವಾಗಿರುವ ಕಲೆ. ಶ್ರೋತೃ ವರ್ಗಕ್ಕೆ ಅಲೌಕಿಕವಾದ ಆನಂದವನ್ನು ಒದಗಿಸುವುದರೊಂದಿಗೆ ಸಮಾಜಕ್ಕೆ ಉತ್ತಮ ಮೌಲ್ಯಗಳನ್ನು ನೀಡುವಂತಹ ಶಕ್ತಿ ಸಂಗೀತದ್ದು. ಇಂತಹ ಕಲೆಯನ್ನು ಬೆಳೆಸುವ ಕಾರ್ಯದಲ್ಲಿ ವಿ| ಕಾಂಚನ ಎ. ಈಶ್ವರ ಭಟ್‌ ಇವರ ನೇತೃತ್ವದಲ್ಲಿ “ಸುನಾದ’ ಸಂಸ್ಥೆ ಅವಿರತ ಶ್ರಮಿಸುತ್ತಿದೆ. “ಸುನಾದ ಯುವದನಿ’ ಎಂಬ ಸರಣಿಯಲ್ಲಿ ನಾಡಿನ ಹಲವಾರು ಯುವ ಕಲಾವಿದರುಗಳ ಕಛೇರಿಗಳನ್ನು ಏರ್ಪಡಿಸಿ, ಪ್ರೋತ್ಸಾಹಿಸುವುದರೊಂದಿಗೆ ಸಂಗೀತದ ಅಭಿರುಚಿಯನ್ನು ಪಸರಿಸುವುದು ಕಾರ್ಯಕ್ರಮದ ಮೂಲ ಉದ್ದೇಶ.

ಸುನಾದ ಯುವದನಿ ಸರಣಿಯಲ್ಲಿ 154ನೆಯ  ಕಾರ್ಯಕ್ರಮ “ಸುನಾದ’ ಸಭಾಂಗಣದಲ್ಲಿ ಈಚೆಗೆ ಸಂಪನ್ನಗೊಂಡಿತು. ಮೊದಲಿಗೆ ಕು| ಹರ್ಷಿತಾ ವರ್ಣಿಕಾ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸ್ಫೂರ್ತಿದಾಯಕ ಗಾಯನದೊಂದಿಗೆ ಉತ್ತಮ ಕಲಾವಿದೆಯಾಗುವ ಭರವಸೆಯನ್ನು ಮೂಡಿಸಿದರು. ಇವರಿಗೆ ವಯಲಿನ್‌ನಲ್ಲಿ ಡಾ| ರಾಮಕೃಷ್ಣ ಭಟ್‌, ಮೃದಂಗದಲ್ಲಿ ಪೃಥ್ವೀರಾಜ್‌ ಸಹಕರಿಸಿದರು. 

 ತದನಂತರ ಬೆಂಗಳೂರಿನ ವಿನಯ ಎಸ್‌. ಆರ್‌. ಇವರಿಂದ ಸಂಗೀತ ಕಛೇರಿ ನಡೆಯಿತು. ಮೈಸೂರು ವಾಸುದೇವಾಚಾರ್ಯರ ನಳಿನಕಾಂತಿ ರಾಗದ ವರ್ಣದೊಂದಿಗೆ ಕಾರ್ಯಕ್ರಮ ಆರಂಭಿಸಿದ ಕಲಾವಿದರು ನಾಟ ರಾಗದ ಚುಟುಕಾದ ಆಲಾಪನೆ, ಸ್ವರ ಪ್ರಸ್ತಾರದೊಂದಿಗೆ ಜಯ ಜಯ ಸ್ವಾಮಿನ್‌ ಕೃತಿಯನ್ನು ಪ್ರಸ್ತುತಪಡಿಸಿದರು. ಅನಂತರ ಅಸಾವೇರಿಯ ಮಾಂಪಾಲವೆಲಸಿ ಇಕ ಕೃತಿಯು ಗಂಭೀರವಾಗಿ ಮೂಡಿಬಂದಿತು. ಪೂರ್ವಿಕಲ್ಯಾಣಿಯ ಆಲಾಪನೆಯೊಂದಿಗೆ ಪರಿಪೂರ್ಣಕಾಮ ಭಾವಮುನ ಬಹಳ ಅಚ್ಚುಕಟ್ಟಾಗಿ ನಿರೂಪಿಸಿದರು. ಸಾಕೇತಾಧಿಪನೀಮುಖ ಎಂಬಲ್ಲಿನ ನೆರವಲ್‌ ಹಾಗೂ ಸ್ವರ ಪೋಣಿಕೆಗಳು ಹಿತವೆನಿಸಿದವು. ಪ್ರಧಾನ ರಾಗವಾಗಿ ಹರಿಕಾಂಭೋಜಿಯ ಒಳಹು ಹೊರಹುಗಳು ಚೆನ್ನಾಗಿ ನಿರೂಪಿತವಾಯಿತು. ಎಂತರಾ ನೀ ಕೃತಿಯಲ್ಲಿನ ನೆರವಲ್‌, ಸ್ವರಪ್ರಸ್ತಾರಗಳು ಭಿನ್ನವಾಗಿ ಮೂಡಿಬಂದವು. ಅನಂತರ ಕಲಿಯುಗದ ಮಹಿಮೆಯು, ಸರ್ವಂ ಬ್ರಹ್ಮಮಯಂ ರಚನೆಗಳು ಭಾವಪೂರ್ಣವಾಗಿ ಪ್ರಸ್ತುತವಾದವು.

ವಿ| ಶಿಲ್ಪಾ ಸಿ. ಎಚ್‌.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.