ಸುಳ್ಳಿನ ವಿರುದ್ಧ ಕ್ರಮ ಅಗತ್ಯವಿದೆ: ಆಯೋಗ
Team Udayavani, Jun 30, 2017, 3:55 AM IST
ಹೊಸದಿಲ್ಲಿ: ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಆಯೋಗದ ವಿರುದ್ಧ ಆರೋಪ ಮಾಡುವಂಥ ರಾಜಕೀಯ ಪಕ್ಷಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಲ್ಲಿ ತನಿಖೆ ನಡೆಸಲು ಹೆಚ್ಚಿನ ಅಧಿಕಾರ ನೀಡಬೇಕು ಎಂಬ ತನ್ನ ಮನವಿಯನ್ನು ಚುನಾವಣಾ ಆಯೋಗ ಪುನರುಚ್ಚರಿಸಿದೆ. ಸುಳ್ಳು ಆರೋಪಗಳ ವಿರುದ್ಧ ಆಯೋಗವನ್ನು ರಕ್ಷಿಸಬೇಕೆಂದರೆ ಇಂತಹುದೊಂದು ಅಧಿಕಾರದ ಅಗತ್ಯವಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಹೇಳಿದ್ದಾರೆ.
ನಮ್ಮ ವಿರುದ್ಧ ಸೂಕ್ತ ಪುರಾವೆಗಳಿಲ್ಲದೇ ಕೆಲವು ರಾಜಕೀಯ ಪಕ್ಷಗಳು ಆರೋಪ ಹೊರಿಸುತ್ತವೆ. ಅಂಥವರ ವಿರುದ್ಧ ನಾವು ಮಾನಹಾನಿ ಪ್ರಕರಣ ದಾಖಲಿಸಬಹುದು. ಆದರೆ, ನಾವದನ್ನು ಮಾಡುವುದಿಲ್ಲ. ಏಕೆಂದರೆ, ದೂರುದಾರನಾಗಿ ಕೋರ್ಟ್ಗೆ ಹೋಗುವುದು ನಮಗೆ ಇಷ್ಟವಿಲ್ಲ. ಹಾಗಾಗಿ, ನ್ಯಾಯಾಂಗ ನಿಂದನೆ ಆರೋಪದಲ್ಲಿ ವಿಚಾರಣೆ ನಡೆಸುವ ಅಧಿಕಾರವನ್ನು ನಮಗೇ ನೀಡಬೇಕು. ಆಗ ಅಂಥ ರಾಜಕೀಯ ಪಕ್ಷಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದಿದ್ದಾರೆ ಜೈದಿ. ಏಪ್ರಿಲ್ ತಿಂಗಳಲ್ಲಿ ಈ ಕುರಿತು ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದ ಚುನಾವಣಾ ಆಯೋಗ, ಇದಕ್ಕೆ ಸಂಬಂಧಿಸಿದ ಚುನಾವಣಾ ಕಾನೂನಿಗೆ ತಿದ್ದುಪಡಿ ತರುವಂತೆ ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್