GST: ಮಧ್ಯರಾತ್ರಿ ಸೆಷನ್‌ಗೆ ಕಾಂಗ್ರೆಸ್‌ ಹೋಗಲ್ಲ


Team Udayavani, Jun 30, 2017, 3:05 AM IST

Congress-29-6.jpg

ಹೊಸದಿಲ್ಲಿ: ದೇಶವೇ ಕಾತರದಿಂದ ಕಾಯುತ್ತಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೆ ಇನ್ನು  ಕೆಲವೇ ಗಂಟೆಗಳು ಬಾಕಿ ಇವೆ. ಶುಕ್ರವಾರ ರಾತ್ರಿ 12 ಗಂಟೆಗೆ ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸಹಿತ ಹಲವು ಸಚಿವರು, ಮುಖ್ಯಮಂತ್ರಿಗಳು, ನಾಯಕರು ಉಪ ಸ್ಥಿತರಿರಲಿದ್ದಾರೆ. ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ಅವರಿಗೂ ಮುಖ್ಯ ಅತಿಥಿಯಾಗಿ ಬರಲು ಆಹ್ವಾನ ಹೋಗಿದ್ದು, ಇವರು ಪಾಲ್ಗೊಳ್ಳುವುದು ಅನುಮಾನ ಎಂದೇ ಹೇಳಲಾಗಿದೆ.

ಈ ನಡುವೆ ಮಧ್ಯರಾತ್ರಿಯ ಸೆಷನ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ. ಗುರುವಾರ ಬೆಳಗ್ಗೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ಚರ್ಚಿಸಿದ ಅನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಪಕ್ಷದ ವತಿಯಿಂದ ಯಾರೂ ಪಾಲ್ಗೊಳ್ಳುವುದಿಲ್ಲ ಎಂದು ವಕ್ತಾರ ಸತ್ಯವ್ರತ ಚತುರ್ವೇದಿ ಹೇಳಿದ್ದಾರೆ. ಅಲ್ಲದೆ ಪಕ್ಷದ ಯಾರೂ ಭಾಗವಹಿಸಬಾರದು ಎಂದು ಹೇಳಿರುವ ಹಿನ್ನೆಲೆಯಲ್ಲಿ ಮನಮೋಹನ್‌ ಸಿಂಗ್‌ ಅವರೂ ಪಾಲ್ಗೊಳ್ಳುವುದಿಲ್ಲ ಎನ್ನಲಾಗಿದೆ.

ಮಧ್ಯರಾತ್ರಿಯ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವ ಕುರಿತಂತೆ ಕಾಂಗ್ರೆಸ್‌ನಲ್ಲೇ ಗೊಂದಲಗಳು ಏರ್ಪಟ್ಟಿದ್ದವು. ಕೆಲವು ನಾಯಕರು ಸಮಾರಂಭದಲ್ಲಿ ಭಾಗಿಯಾಗುವುದೇ ಸೂಕ್ತ ಎಂದು ಹೇಳಿದ್ದರೆ ಇನ್ನು ಕೆಲವರು ಜಿಎಸ್‌ಟಿಯಿಂದ ಸಣ್ಣ ವರ್ತಕರು ಹಾಗೂ ಉದ್ದಿಮೆದಾರರಿಗೆ ಅನನುಕೂಲವಾಗುವುದರಿಂದ ಪಾಲ್ಗೊಳ್ಳುವುದು ಬೇಡ ಎಂಬ ಹೇಳಿದ್ದರು.

ಈ ಸಮಾರಂಭಕ್ಕೆ ಕಾಂಗ್ರೆಸ್‌ ಗೈರಾಗುವುದರ ಹಿಂದೆ ಬೇರೆಯೇ ಕಾರಣವಿದೆ ಎಂದು ಹೇಳಲಾಗಿದೆ. ಸ್ವಾತಂತ್ರ್ಯ ಬಂದಾಗ ಆಗಿನ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಸಂಸತ್‌ನ ಮಧ್ಯರಾತ್ರಿ ಕಲಾಪದಲ್ಲಿ ಭಾಷಣ ಮಾಡಿದ್ದರು. ಈಗ ಮೋದಿ ಅವರು ನೆಹರೂ ಅವರ ಈ ಮಧ್ಯರಾತ್ರಿ ಭಾಷಣವನ್ನೇ ಹೈಜಾಕ್‌ ಮಾಡುವ ಪ್ರಯತ್ನ ಮಾಡುತ್ತಿರುವುದರಿಂದ ಭಾಗಿಯಾಗುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸಿಪಿಎಂ ಕೂಡ ಗೈರು: ಸಮಾರಂಭದಲ್ಲಿ ಭಾಗಿಯಾಗಲ್ಲ ಎಂದು ಈಗಾಗಲೇ ಪಶ್ಚಿಮ ಬಂಗಾಲದ ತೃಣಮೂಲ ಕಾಂಗ್ರೆಸ್‌ ಹೇಳಿದೆ. ಇದರ ಜತೆಗೆ ಎಡಪಕ್ಷಗಳು ಕೂಡ ಹೋಗದಿರಲು ನಿರ್ಧರಿಸಿವೆ. ಇದರ ಜತೆಗೆ ಎಸ್ಪಿ, ಬಿಎಸ್ಪಿ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ. ಆದರೆ ಉಳಿದ ಪಕ್ಷಗಳು ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ಜೇಟ್ಲಿ ಮನವಿ: ಈ ನಡುವೆ ಜಿಎಸ್‌ಟಿ ಜಾರಿ ಸಮಾರಂಭಕ್ಕೆ ಗೈರಾಗಲು ನಿರ್ಧರಿಸಿರುವ ವಿಪಕ್ಷಗಳ ಮನವೊಲಿಕೆಗೆ ಹಣಕಾಸು ಸಚಿವ ಅರುಣ್‌ ಜೇಟ್ಲಿ ಪ್ರಯತ್ನಿಸಿದ್ದಾರೆ. 70 ವರ್ಷಗಳ ನಂತರ ದೇಶದಲ್ಲಿ ತೆರಿಗೆ ವ್ಯವಸ್ಥೆ ಸುಧಾರಣೆಯಾಗುತ್ತಿದೆ. ಇಂಥ ಐತಿಹಾಸಿಕ ಸನ್ನಿವೇಶದಲ್ಲಿ ಎಲ್ಲರೂ ಭಾಗಿಯಾಗುವುದು ಸೂಕ್ತ ಎಂದು ಹೇಳಿದ್ದಾರೆ.

ಮೋದಿ ಹೊಗಳಿದ ಪ್ರಣವ್‌
ಜಿಎಸ್‌ಟಿ ಜಾರಿ ಬಗ್ಗೆ  ಸಂತಸ ವ್ಯಕ್ತಪಡಿಸಿರುವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ, ಇದಕ್ಕೆ  ಕಾರಣರಾದ ಎನ್‌ಡಿಎ ಸರಕಾರ, ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರನ್ನು ಶ್ಲಾಘಿಸಿದ್ದಾರೆ. ನಾಳೆಯಿಂದ ದೇಶ ಹೊಸ ತೆರಿಗೆ ವ್ಯವಸ್ಥೆಗೆ ಸಿದ್ಧವಾಗುತ್ತಿದೆ. ಇಂಥ ಸನ್ನಿವೇಶದಲ್ಲಿ ಸಾಕಷ್ಟು ಶ್ರಮದ ಮೂಲಕ ಜಿಎಸ್‌ಟಿ ಸಾಕಾರ ಮಾಡಿದ ಎನ್‌ಡಿಎ ಸರಕಾರಕ್ಕೆ ಅಭಿನಂದನೆ ಹೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೆ, ತಾವು ಹಣಕಾಸು ಸಚಿವರಾಗಿದ್ದ ವೇಳೆ ಇದನ್ನು ಜಾರಿ ಮಾಡಲಾಗಲಿಲ್ಲವಲ್ಲ ಎಂದೂ ವಿಷಾದಿಸಿದ್ದಾರೆ.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.