ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಶೇ. 0.1 ಇಳಿಕೆ
Team Udayavani, Jul 1, 2017, 3:45 AM IST
ಹೊಸದಿಲ್ಲಿ: ಪಿಪಿಎಫ್, ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿಯಂಥ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ. 0.1 ಇಳಿಕೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಎಪ್ರಿಲ್-ಜೂನ್ ಅವಧಿಗೆ ಹೋಲಿಸಿದರೆ ಜುಲೈ-ಸೆಪ್ಟಂಬರ್ ತ್ತೈಮಾಸಿಕ ಅವಧಿಯಲ್ಲಿ ಉಳಿತಾಯ ಯೋಜನೆಗಳ ಬಡ್ಡಿ ದರ ದಲ್ಲಿ ಇಳಿಕೆ ಆಗಲಿದೆ. ಬ್ಯಾಂಕ್ಗಳು ಕೂಡ ಠೇವಣಿ ದರದಲ್ಲಿ ಇಳಿಕೆ ಮಾಡುವ ಸಾಧ್ಯತೆಯಿದೆ. ಆದರೆ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿ ದರ ಯಥಾಸ್ಥಿತಿ ಶೇ. 4 ಇರಲಿದೆ.
ಕಳೆದ ವರ್ಷದ ಎಪ್ರಿಲ್ನಿಂದ ಸರಕಾರ ಪ್ರತಿ ತ್ತೈಮಾಸಿಕಕ್ಕೂ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಪರಿಷ್ಕರಿಸುತ್ತಿದೆ. ಶುಕ್ರವಾರ ವಿತ್ತ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ ಪಿಪಿಎಫ್(ಸಾರ್ವಜನಿಕ ಭವಿಷ್ಯ ನಿಧಿ) ಬಡ್ಡಿ ದರ ವರ್ಷಕ್ಕೆ ಶೇ. 7.8, ಕಿಸಾನ್ ವಿಕಾಸ ಪತ್ರದ ಬಡ್ಡಿದರ ಶೇ. 7.5 ಆಗಲಿದ್ದು, 115 ತಿಂಗಳಿಗೆ ಇದು ಮೆಚೂÂರ್ ಆಗಲಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಶೇ. 8.3 (ಈಗಿರುವುದು ಶೇ. 8.4), 1ರಿಂದ 5 ವರ್ಷಗಳ ಅವಧಿ ಠೇವಣಿಗೆ ಶೇ. 6.8ರಿಂದ ಶೇ. 7.6 ಹಾಗೂ 5 ವರ್ಷಗಳ ರಿಕರಿಂಗ್ ಡೆಪಾಸಿಟ್ಗೆ ಶೇ. 7.1 ಬಡ್ಡಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ