ಜಿಎಸ್‌ಟಿ ಬಗ್ಗೆ ವ್ಯಾಪಾರಸ್ಥರಲ್ಲಿಲ್ಲ ಅರಿವು


Team Udayavani, Jul 1, 2017, 11:20 AM IST

gst-avinue-road.jpg

ಬೆಂಗಳೂರು: ಜಿಎಸ್‌ಟಿ ಅನುಷ್ಠಾನದಿಂದ ಆಗಬಹುದಾದ ಅನುಕೂಲ ಹಾಗೂ ಅನಾನುಕೂಲದ ಬಗ್ಗೆ ರಾಜಧಾನಿಯ ಬಹುತೇಕ ವ್ಯಾಪಾರಿಗಳಿಗೆ  ಸ್ಪಷ್ಟ ಮಾಹಿತಿಯೇ ಇಲ್ಲದಂತಿದೆ. ಅದರಲ್ಲೂ ನಗರದಲ್ಲಿ ನಿತ್ಯ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಯುವ ಕೆ.ಆರ್‌.ಮಾರುಕಟ್ಟೆ, ಅವೆನ್ಯೂರಸ್ತೆ, ಚಿಕ್ಕಪಟ್ಟೆ, ಬಳೆಪೇಟೆ, ಎಸ್‌.ಪಿ.ರಸ್ತೆ ಮೊದಲಾದ ಕಡೆಗಳಲ್ಲಿರುವ ವ್ಯಾಪಾರಸ್ಥರಿಗೆ ಜಿಎಸ್‌ಟಿ ಬಗ್ಗೆ ಮಾಹಿತಿ ಇಲ್ಲ. ಜತೆಗೆ ಅವರು ಇದರ ಬಗ್ಗೆ ತಲೆಕೆಡಿಸಿಕೊಂಡಂತೆಯೂ ಕಾಣಲ್ಲ.

ಜಿಎಸ್‌ಟಿ ಜಾರಿಯ ಮುನ್ನಾ ದಿನವಾದ ಶುಕ್ರವಾರ ಈ ಪ್ರದೇಶಗಳಿಗೆ ಭೇಟಿ ನೀಡಿದಾಗ, ಯಾವುದೇ ನಿಯಮ ಬಂದರೂ ನಮ್ಮ ವ್ಯಾಪಾರ ಹೀಗೇ ಇರುತ್ತದೆ ಬಿಡಿ ಎಂದು ಯಾವುದೇ ರೀತಿಯಲ್ಲೂ ತಲೆ ಕಡೆಸಿಕೊಳ್ಳದೇ ತಮ್ಮ ವ್ಯಾಪಾರ- ವಹಿವಾಟಿನಲ್ಲಿ ನಿರತರಾಗಿದ್ದದ್ದು ಕಂಡು ಬಂದಿತು. 

ಜಿಎಸ್‌ಟಿ ಬಗ್ಗೆ ಇಷ್ಟೆಲ್ಲಾ ಚರ್ಚೆಯಾಗುತ್ತಿದ್ದರೂ, ಇಲ್ಲಿನ ಎಲೆಕ್ಟ್ರಾನಿಕ್ಸ್‌, ಬಟ್ಟೆ, ತಾಮ್ರ ಹಾಗೂ ಕಬ್ಬಿಣದ ವ್ಯಾಪಾರಿಗಳು ಸೇರಿದಂತೆ ಯಾರನ್ನೇ ಕೇಳಿದರೂ, ಜೂನ್‌ 30ರ ವ್ಯಾಪಾರ ಹೇಗಿತ್ತೋ ಜುಲೈ 1ರಿಂದು ಅದೇ ಮುಂದುವರಿಯಲಿದೆ ಎಂದು ಸಲೀಸಾಗಿ ಹೇಳುತ್ತಾರೆ.

ಇಲ್ಲಿ ಒಂದೊಂದು ಬೀದಿಯಲ್ಲಿ ಒಂದೊಂದು ಬಗೆಯ ಬ್ರ್ಯಾಂಡೆಡ್‌ ಉತ್ಪನ್ನ ಸಿಗುತ್ತದೆ. ಬಟ್ಟೆ, ಪಾತ್ರೆಗಳು, ಎಲೆಕ್ಟ್ರಾನಿಕ್ಸ್‌ ಉತ್ಪನ್ನ, ಅಟೋಮೊಬೈಲ್‌ ಉತ್ಪನ್ನ, ಗೃಹ ಅಲಂಕಾರಿಕ ಉತ್ಪನ್ನ ಹೋಲ್‌ಸೇಲ್‌ ಖರೀದಿ,  ರಶೀದಿ ಇಲ್ಲದೇ ಅಗ್ಗದ ದರದಲ್ಲಿ ಸಿಗುತ್ತದೆ. ಈ ಎಲ್ಲಾ ಕ್ಷೇತ್ರದಲ್ಲೂ ಜಿಎಸ್‌ಟಿ ಅನ್ವಯವಾಗುವುದರಿಂದ ವ್ಯಾಪಾರಿಗಳು ಇಂದಿನಿಂದ ಹೇಗೆ ವ್ಯವಹಾರ ನಡೆಸುತ್ತಾರೆ ಎನ್ನುವುದೇ ಕೌತುಕದ ವಿಚಾರ.

ಸಗಟು ವ್ಯಾಪಾರ ಕೇಂದ್ರವೆಂದೇ ಖ್ಯಾತಿ ಪಡೆದಿರುವ  ಬೆಂಗಳೂರಿನ ಚಿಕ್ಕಪೇಟೆ, ಅವೆನ್ಯೂರಸ್ತೆ, ಎಸ್‌.ಪಿ.ರಸ್ತೆ, ಕೆ.ಆರ್‌. ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಎಷ್ಟೇ ವ್ಯಾಪಾರ ಮಾಡಿದರೂ, ರಶೀದಿ ಸಿಗುವುದು ಸಿಗುವುದಿಲ್ಲ. ರಶೀದಿ ಬೇಕಾದರೆ, ಹೆಚ್ಚುವರಿ ಹಣ ಪಾವತಿಸಬೇಕು. ಬ್ರ್ಯಾಂಡೆಡ್‌ ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಲ್‌ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್‌ ವಸ್ತುಗಳು ಅಗ್ಗದ ದರದಲ್ಲಿ ರಶೀದಿ ಇಲ್ಲದೆ ದೊರೆಯುತ್ತದೆ.

ಜಿಎಸ್‌ಟಿ ಅನುಷ್ಠಾನದ ನಂತರ ಇದಕ್ಕೆಲ್ಲ ಬ್ರೇಕ್‌ ಬೀಳುತ್ತದೆಯೋ ಅಥವಾ ಜಿಎಸ್‌ಟಿ ಇಲ್ಲದೇ ಗೂಡ್ಸ್‌ ಮಾರಾಟಕ್ಕೆ ಇನ್ಯಾವುದಾದರೂ ಹೊಸ ಮಾರ್ಗ ಹುಡುಕುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಬಗ್ಗೆ ಕಳೆದ ಕೆಲವು ತಿಂಗಳಿಂದ ಬಹಳಷ್ಟು ಚರ್ಚೆ, ಸಂವಾದ, ವಿಚಾರ ಗೋಷ್ಠಿ, ತಿಳುವಳಿಕೆ ಕಾರ್ಯಗಾರ, ವ್ಯಾಪಾರಿಗಳಿಗೆ, ಸಾರ್ವಜನಿಕರಿಗೆ ಮಾಹಿತಿ ಒದಗಿಸುವುದರ ಜತೆ ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆ ನಡೆದಿದೆ.

ಆದರೂ, ಬಹುತೇಕರಲ್ಲಿ ಜಿಎಸ್‌ಟಿ ಬಗ್ಗೆ ಇರುವ ಗೊಂದಲ ಬಗೆಹರಿದಿಲ್ಲ. ಯಾವೆಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ ಮತ್ತು ಯಾವುದು ಅಗ್ಗವಾಗಲಿದೆ ಎಂಬುದರ ಸ್ಪಷ್ಟತೆಯೂ ಸಿಗುತ್ತಿಲ್ಲ. ಗ್ರಾಮೀಣ ಪ್ರದೇಶದವರಿಗೆ ಮಾತ್ರವಲ್ಲ ನಗರ ಪ್ರದೇಶದ ಸುಶಿಕ್ಷಿತರಿಗೂ ಈ ಬಗ್ಗೆ ಗೊಂದಲ ಇದೆ.

ಗ್ರಾಹಕರಿಗೆ ಕಡಿಮೆ ದರದಲ್ಲಿ ಎಲ್ಲಾ ಬಗೆಯ ಎಲೆಕ್ಟ್ರಾನಿಕ್ಸ್‌ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದೇವೆ. ರಶೀದಿ ಕೇಳಿದರೆ, ನೀಡುತ್ತೇವೆ. ಮುಂದೆಯೂ ಕೊಡುತ್ತೇವೆ. ಜಿಎಸ್‌ಟಿಯಿಂದ ನಮ್ಮ ವ್ಯಾಪಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.
-ವಿಶಾಲ್‌, ಎಲೆಕ್ಟ್ರಾನಿಕ್ಸ್‌ ವ್ಯಾಪಾರಿ, ಎಸ್‌.ಪಿ.ರಸ್ತೆ

ಹೋಲ್‌ಸೇಲ್‌ ಬಟ್ಟೆ ವ್ಯಾಪಾರಿಗಳ ಮೇಲೂ ಜಿಎಸ್‌ಟಿ ಹೇರಿರುವುದು ಸರಿಯಲ್ಲ. ಕೇಂದ್ರ ಸರ್ಕಾರ ಜವಳಿ ಮೇಲಿನ ಜಿಎಸ್‌ಟಿಯನ್ನು ಹಿಂದಕ್ಕೆ ಪಡೆಯಬೇಕು.  ಇಲ್ಲವಾದರೆ ಗ್ರಾಹಕರಿಗೆ ಅಗ್ಗದ ದರದಲ್ಲಿ ಬಟ್ಟೆ ಒದಗಿಸುವುದು ಅಸಾಧ್ಯ.
-ಕೌಶಿಕ್‌,  ಬಟ್ಟೆ ವ್ಯಾಪಾರಿ

ನಮ್ಮಂತ ಸಣ್ಣಪುಟ್ಟ ಅಂಗಡಿಗಳ ಮೇಲೆ ಜಿಎಸ್‌ಟಿ ಹೇಗೆ ಅನ್ವಯ ಆಗುತ್ತದೆ ಎಂಬುದು ಗೊತ್ತಿಲ್ಲ. ಜುಲೈ ತಿಂಗಳಲ್ಲಿ ಇದರ ಸಂಪೂರ್ಣ ಚಿತ್ರಣ ದೊರೆಯಲಿದೆ.
-ಪ್ರಸಾದ್‌, ಅವೆನ್ಯೂರಸ್ತೆ ವ್ಯಾಪಾರಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.