ಧನಾತ್ಮಕ ಚಿಂತನೆಯಿಂದ ಆತ್ಮವಿಶ್ವಾಸ ವೃದ್ಧಿ: ಬಾಲಕೃಷ್ಣ 


Team Udayavani, Jul 2, 2017, 3:45 AM IST

0107kpk5.jpg

ನೆಹರೂನಗರ : ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅವಕಾಶಗಳು ಬಹಳ ಸಿಗುತ್ತವೆ. ಅವುಗಳನ್ನು ಸದು ಪಯೋಗಪಡಿಸಿಕೊಳ್ಳಬೇಕು. ಮೊದಲು ಆತ್ಮಗೌರವವನ್ನು ಬೆಳೆಸಿಕೊಳ್ಳಬೇಕು. ಧನಾತ್ಮಕ ಚಿಂತನೆಗಳು ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಸಹಕಾರಿ. ಕ್ರಿಯಾತ್ಮಕ ವಿಚಾರಗಳನ್ನು ಹಂಚಿಕೊಳ್ಳುವುದರ ಮೂಲಕ ನಮ್ಮ ಕೌಶಲವನ್ನು ಉತ್ಕೃಷ್ಟ ಗೊಳಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಎಚ್‌. ಹೇಳಿದರು.

ಕಾಲೇಜಿನ ಇಂಗ್ಲಿಷ್‌ ವಿಭಾಗ ಹಾಗೂ ಲಿಟರರಿ ಕ್ಲಬ್‌ ಜಂಟಿಯಾಗಿ ಆಯೋಜಿಸಿದ ಲಿಟರರಿ ಕ್ಲಬ್ಸ್ ಮೊದಲ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಆಲಿಸುವಿಕೆ, ಮಾತನಾಡುವಿಕೆ, ಓದುವುದು ಹಾಗೂ ಬರೆಯುವುದು ಭಾಷಾ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. ಕಷ್ಟ, ಅಸಾಧ್ಯ ಎಂಬ ಕೀಳರಿಮೆಯಿಂದ ಹೊರಬರಲು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಪ್ರಯತ್ನ ಹಾಗೂ ಶ್ರಮ ವಹಿಸುವುದು ಎರಡೂ ಅಗತ್ಯ. ಈ ಚಟುವಟಿಕೆಗಳಿಂದ ಸಿಗುವ ಅನುಭವ ವಿಷಯದ ಬಗೆಗಿನ ತಿಳಿವಳಿಕೆಯೊಂದಿಗೆ ಸಂವಹನ ಕೌಶಲವನ್ನು ಹೆಚ್ಚಿಸುತ್ತದೆ. ಇತರರ ಪ್ರತಿಕ್ರಿಯೆಯ ಬಗ್ಗೆ ಚಿಂತಿಸದೆ ನಮ್ಮ ನೈಪುಣ್ಯವನ್ನು ಹೆಚ್ಚಿಸಿಕೊಳ್ಳುವುದರ ಕಡೆಗೂ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕಿ ಮೋತಿ ಬಾೖ ಮಾತನಾಡಿ, ಹೆದರಿಕೆಯನ್ನು ಮೆಟ್ಟಿ ನಿಲ್ಲುವುದನ್ನು ಕಲಿತುಕೊಳ್ಳಬೇಕು. ಇಂಗ್ಲಿಷ್‌ ಅಧ್ಯಾಪಕ ರಾಗುವುದು ಸುಲಭದ ಮಾತಲ್ಲ. ಒಳ್ಳೆಯ ಅಂಕ ಪಡೆಯುವುದೆ ಅಂತಿಮ ವಲ್ಲ. ಭಾಷಾ ಚಾತುರ್ಯವನ್ನು ಹೊಂದ ಬೇಕು. ನಮ್ಮ ಪ್ರಾವೀಣ್ಯ ನಮಗೆ ತೃಪ್ತಿ ನೀಡುವಂತಿರಬೇಕು. ಪರಿಶ್ರಮ ವಹಿಸಿ ಕೆಲಸ ಮಾಡುವುದರಿಂದ ನಮ್ಮನ್ನು ನಾವು ಉತ್ತಮ ಪಡಿಸಿಕೊಳ್ಳಬಹುದು ಎಂದರು.

ಲಿಟರರಿ ಕ್ಲಬ್‌ ಸಂಚಾಲಕಿ, ಉಪ ನ್ಯಾಸಕಿ ರೇಖಾ ನಾಯರ್‌ ನೇತೃತ್ವದಲ್ಲಿ ಕ್ಲಬ್‌ ಪ್ರತಿನಿಧಿಗಳಾಗಿ ರಶ್ಮಿಕಾ, ಅನುಶ್ರೀ, ಕೃಪಾ, ಅಜಯ್‌, ಆಶಾ, ಸುಷ್ಮಾ ಎಂ.ಎಸ್‌., ವರ್ಷಿತಾ ಎಂ.ವಿ. ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಉಪನ್ಯಾಸಕಿ ಸರಸ್ವತಿ ಸಿ.ಕೆ., ಅಂಬಿಕಾ, ಉಪನ್ಯಾಸಕ ಗಣೇಶ್‌ ಪ್ರಸಾದ್‌ ಉಪಸ್ಥಿತರಿದ್ದರು.
ಅಂತಿಮ ಬಿ.ಎ. ವಿದ್ಯಾರ್ಥಿನಿ ವರ್ಷಿತಾ ಎಂ.ವಿ. ಸ್ವಾಗತಿಸಿ, ಪ್ರಥಮಾ ಎ. ಆರ್‌ ವಂದಿಸಿದರು. ನಮಿತಾ ನಿರೂಪಿಸಿದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.