ಬಿಎಸ್ ವೈಗೆ ಮತ್ತೆ ಸಂಕಷ್ಟ; ಡಿನೋಟಿಫೈ ತನಿಖೆಗೆ ತಡೆ ನೀಡಲು ನಕಾರ
Team Udayavani, Jul 3, 2017, 1:31 PM IST
ಬೆಂಗಳೂರು:ಡಿನೋಟಿಫಿಕೇಶನ್ ಪ್ರಕರಣವೊಂದರ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡಂತಾಗಿದೆ.
2010ರ ಗಂಗೇನಹಳ್ಳಿ ವ್ಯಾಪ್ತಿಯ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ತಡೆ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿದ್ದರು.
2010ರಲ್ಲಿ ಗಂಗೇನಹಳ್ಳಿಯಲ್ಲಿ 1ಎಕರೆ 11ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಎಸ್ ವೈ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಏತನ್ಮಧ್ಯೆ ಪ್ರಕರಣದ ತನಿಖೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡತಾಗಿದೆ. ಹೈಕೋರ್ಟ್ ಪೀಠ ಜುಲೈ 7ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.