ರೈತರ ಸಾಲ ಮನ್ನಾಕ್ಕೆ ಒತ್ತಾಯ
Team Udayavani, Jul 4, 2017, 11:46 AM IST
ಚಿಕ್ಕಮಗಳೂರು: ಬರಗಾಲದಿಂದ ಬಳಲುತ್ತಿರುವ ರೈತರು ಮತ್ತು ಎಲ್ಲ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ
ಮಾಡುವಂತೆ ಒತ್ತಾಯಿಸಿ ಕರ್ನಾಟಕ ಬೆಳೆಗಾರರ ಒಕ್ಕೂಟ, ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಲೀಡ್ ಬ್ಯಾಂಕ್ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬ್ಯಾಂಕ್ ಎದುರು ಕೆಲಕಾಲ ಧರಣಿ ನಡೆಸಿ
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಜಯರಾಮ್, ಕಳೆದ ನಾಲ್ಕು ವರ್ಷಗಳ ಸತತ ಬರಗಾಲದಿಂದ ರೈತರು ಮತ್ತು ಎಲ್ಲ ಬೆಳೆಗಾರರು ಕಂಗೆಟ್ಟಿದ್ದಾರೆ. ಎಲ್ಲ ಬೆಳೆಗಳೂ ನಾಶವಾಗಿ ಬ್ಯಾಂಕಿನಿಂದ ಪಡೆದ ಸಾಲ ತೀರಿಸಲಾಗದೆ ಮರ್ಯಾದೆಗೆ
ಅಂಜಿ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಉಪಾದ್ಯಕ್ಷ ಮಂಜುನಾಥ್ ಮಾತನಾಡಿ, ರೈತರ ದುಡಿಮೆಯ ಫಲವಾಗಿ
ಐಷಾರಾಮಿಯಾಗಿ ಬದುಕುತ್ತಿರುವ ಉದ್ದಿಮೆದಾರರ ಸಾಲವನ್ನು ಮನ್ನಾ ಮಾಡುತ್ತಿರುವ ಕೇಂದ್ರ ಸರ್ಕಾರ
ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರೈತರತ್ತ ತಿರುಗಿ ನೋಡುತ್ತಿಲ್ಲ ಎಂದು ದೂರಿದರು.
ಕೆಜಿಎಫ್ ಸಂಘಟನಾ ಕಾರ್ಯದರ್ಶಿ ಡಿ.ಎಂ. ವಿಜಯ್ ಮಾತನಾಡಿ, ಕಳೆದ ವರ್ಷ ಬೆಳೆ ವಿಮೆಯಡಿ ಪ್ರತಿ ರೈತರಿಂದ 12 ಸಾವಿರ ರೂ. ಪಡೆದಿರುವ ಕೇಂದ್ರ ಸರ್ಕಾರ ಇದುವರೆಗೂ ಬೆಳೆ ನಷ್ಟಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡುವುದನ್ನು ಮತ್ತು ರಾಜಕಾರಣ ಮಾಡುವುದನ್ನು ಬಿಡಬೇಕು.
ಈಗಾಗಲೇ ಐವತ್ತು ಸಾವಿರ ರೂ. ಸಾಲ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ಮಾದರಿಯಲ್ಲಿ ಕೃಷಿಕರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ್ ಎಂ. ದೇಸಾಯಿ ಅವರಿಗೆ ಮನವಿ ಸಲ್ಲಿಸಲಾಯಿತು, ರೈತರ
ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಪ್ರತಿಭಟನೆ
ಹಿಂಪಡೆಯಲಾಯಿತು.
ಕೆಜಿಎಫ್ ಉಪಾಧ್ಯಕ್ಷ ರತೀಶ್, ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಎ. ಸುರೇಶ್, ಲಿಂಗಪ್ಪಗೌಡ,
ಮಹೇಶ್, ರೈತ ಸಂಘ, ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎ. ಮಂಜುನಾಥ್, ಮಹಿಳಾ ಘಟಕದ
ಅಧ್ಯಕ್ಷೆ ಹಾಲಮ್ಮ, ರಾಜ್ಯ ಉಪಾಧ್ಯಕ್ಷೆ ವನಶ್ರೀ, ಮುಖಂಡ ಕೆ.ಕೆ. ಕೃಷ್ಣೇಗೌಡ, ಜಿಲ್ಲಾಧ್ಯಕ್ಷ ಎಂ.ಸಿ. ಬಸವರಾಜ್
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು