ರಾಷ್ಟ್ರೀಕೃತ ಬ್ಯಾಂಕ್ನಲ್ಲಿರುವ ಸಾಲ ಮನ್ನಾಕ್ಕೆ ರೈತರ ಆಗ್ರಹ
Team Udayavani, Jul 4, 2017, 3:03 PM IST
ಯಾದಗಿರಿ: ಯಾವುದೇ ಷರತ್ತುಗಳಿಲ್ಲದೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರಕಾರ ಸಹಕಾರಿ ಸಂಘಗಳ ಕೇವಲ 50 ಸಾವಿರ ರೂ. ಹಲವಾರು ಷರತ್ತುಗಳೊಂದಿಗೆ ಸಾಲ ಮನ್ನಾ ಮಾಡಿದೆ. ಆದರೆ ಯಾವುದೇ ಷರತ್ತುಗಳಿಲ್ಲದೆ ಇನ್ನುಳಿದ ಸಹಕಾರಿ ಕ್ಷೇತ್ರ, ಮಹಿಳಾ ಸ್ವ-ಸಹಾಯ ಸಂಘಗಳ ಎಲ್ಲ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರಕಾರ ಸಹ ಷರತ್ತುಗಳಿಲ್ಲದೆ ಸಾಲ ಮನ್ನಾ ಮಾಡಬೇಕು
ಎಂದು ಆಗ್ರಹಿಸಿದರು.
ಬೆಳೆ ವಿಮೆ, ಬರಗಾಲ ಪರಿಹಾರದ ಮೊತ್ತವನ್ನು ವೈಜ್ಞಾನಿಕವಾಗಿ ಕ್ರಮ ಕೈಗೊಂಡು ರೈತರಿಗೆ ವಿತರಿಸಬೇಕು. ಜೂನ್ 10ರ ಒಳಗಿನ ತೊಗರಿ ಖರೀದಿ ಕೇಂದ್ರದಲ್ಲಿನ ಉಳಿದ ತೊಗರಿಗಳನ್ನು ಖರೀದಿಸುವುದು ಮತ್ತು ಶೀಘ್ರ ರೈತರಿಗೆ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.
ನಕಲಿ ಬೀಜ, ಕ್ರಿಮಿನಾಶಕ, ಗೊಬ್ಬರ ತಡೆಯುವದು. ಬೆಳೆ ಬೆಳೆಯಲು ಅಗತ್ಯ ಕ್ರಮ ಕೈಗೊಂಡು ಕೃಷಿ ಅಭಿವೃದ್ದಿ ಪಡಿಸುವ ಕಾರ್ಯಕ್ರಮಗಳು ಪ್ರತಿಯೊಬ್ಬ ರೈತರಿಗೆ ತಲುಪಿಸಬೇಕು. ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಕೆರೆಯ ನೀರನ್ನು 14 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕವಾಗಿದ್ದು, ಕಾಮಗಾರಿ ಕೆಲಸವನ್ನು
ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಹಾಲಭಾವಿ, ಮಹಾದೇವಿ ಬೇವಿನಾಳಮಠ, ಹಣಮಂತ ಕೊಂಗಂಡಿ, ದೇವಿಂದ್ರಪ್ಪಗೌಡ ಮಾಲಗತ್ತಿ, ಶಿವಯೋಗಿ ಯಾದಗಿರಿ, ಬಸವರಾಜಪ್ಪಗೌಡ ಹೆಮ್ಮಡಗಿ, ಭೀಮರಾಯ ಯಡಹಳ್ಳಿ, ಮಲ್ಲಣ್ಣ ವಡಗೇರಿ, ಮಲ್ಕಣ್ಣ ಚಿಂತಿ, ಸಿದ್ದನಗೌಡ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ