ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಿ


Team Udayavani, Jul 4, 2017, 3:21 PM IST

CHIKMAGLURU-5.jpg

ರಾಯಚೂರು: ಸಹಕಾರಿ ಬ್ಯಾಂಕ್‌ಗಳ ಮಾದರಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲವನ್ನೂ ಮನ್ನಾ ಮಾಡಬೇಕು ಹಾಗೂ ಮುಂಗಾರು, ಹಿಂಗಾರು ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ನಗರದ ಟಿಪ್ಪು ಸುಲ್ತಾನ್‌ ಉದ್ಯಾನವನದಲ್ಲಿ ಧರಣಿ ನಡೆಸಿ
ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ, ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಫಸಲ್‌ ಬಿಮಾ ಯೋಜನೆಯಡಿ ರೈತರು ಹಣ ಪಾವತಿಸಿದ್ದಾರೆ. ಆದರೆ, ಈವರೆಗೂ ಯಾವ ರೈತರಿಗೂ ಪರಿಹಾರ ತಲುಪಿಲ್ಲ. ಈಗ ಪುನಃ ಹಣ ಕಟ್ಟುವಂತೆ ಪ್ರಕಟಣೆ ನೀಡಲಾಗಿದೆ. ಅದಕ್ಕೂ ಮೊದಲು ಕಳೆದ ಬಾರಿ ಕಟ್ಟಿದ ಹಣಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದರು. ರಾಜ್ಯದಲ್ಲಿ ಸತತ ಬರದಿಂದ ಅನ್ನದಾತರು ಕಂಗೆಟ್ಟಿದ್ದು, ಸಾಲದ
ಸುಳಿಗೆ ಸಿಲುಕಿದ್ದಾರೆ. ಕೃಷಿ ಉತ್ಪನ್ನಗಳಿಗೂ ನಿರೀಕ್ಷಿತ ಮಟ್ಟದ ಬೆಲೆ ಸಿಕ್ಕಿಲ್ಲ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈ ಭಾಗದಲ್ಲಿ ಭೀಕರ ಬರವಿದ್ದು, ಸೂಕ್ತ ಪರಿಹಾರ
ನೀಡುವಂತೆ ಬರ ಅಧ್ಯಯನ ತಂಡ ವರದಿ ಸಲ್ಲಿಸಿದರೂ ಸರ್ಕಾರಗಳು ಮಾತ್ರ ರೈತರ ನೆರವಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಎಲ್ಲ ಸಾಲ ಮನ್ನಾ ಮಾಡಬೇಕು. ಸಹಕಾರ ಸಂಘಗಳಲ್ಲಿನ ರೈತರ ಉಳಿದ ಸಾಲ ಮನ್ನಾ ಮಾಡಬೇಕು. ಮುಂಗಾರು, ಹಿಂಗಾರು ಬೆಳೆ ನಷ್ಟ ಪರಿಹಾರ ಎಲ್ಲ ರೈತರಿಗೆ ವಿತರಿಸಬೇಕು ಎಂದು ಒತ್ತಾಯಿಸಿದರು. 

ಅಕ್ರಮ ಸಕ್ರಮ ಯೋಜನೆಯಡಿ ಹಣ ಪಾವತಿಸಿದ ರೈತರಿಗೆ ಕೂಡಲೇ ವಿದ್ಯುತ್‌ ಪೂರೈಸಬೇಕು. ಗುಣಮಟ್ಟದ ವಿದ್ಯುತ್‌ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ 12 ಗಂಟೆ ಹಗಲು ತ್ರಿಪೇಸ್‌ ವಿದ್ಯುತ್‌ ಪೂರೈಸಬೇಕು. ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಿದ ರೈತರಿಗೆ ಕೂಡಲೇ ಬಾಕಿ ಪಾವತಿಸಬೇಕು ಎಂಬುದು ಸೇರಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಲಕ್ಷಣಗೌಡ ಕಡಗಂದೊಡ್ಡಿ, ಸದಸ್ಯರಾದ ದೊಡ್ಡಬಸನಗೌಡ, ವಿ.ಭೀಮೇಶ್ವರರಾವ್‌, ಮಲ್ಲಣ್ಣ ದಿನ್ನಿ, ಜಯಪ್ಪಸ್ವಾಮಿ ಉಡಮಗಲ್‌, ಬಸವರಾಜ ಮಾಲಿಪಾಟೀಲ, ನರಸಪ್ಪ ಯಾದವ ಹೊಕ್ರಾಣಿ, ಸಿದ್ದರಾಮಯ್ಯ ಸ್ವಾಮಿ,
ಬೂದೆಯ್ಯಸ್ವಾಮಿ ಸೇರಿ ಇತರರು ಧರಣಿಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.