ಯುವಾ ಬ್ರಿಗೇಡ್‌: ನೀರುಳಿಸಲು ವೀಕೆಂಡ್‌ ವಿಥ್‌ ರೈನ್‌


Team Udayavani, Jul 4, 2017, 7:00 PM IST

Save-Water-4-7.jpg

ಮಹಾನಗರ: ರಾಜ್ಯಾದ್ಯಂತ 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಸ್ವಚ್ಛಗೊಳಿಸುವ ಮೂಲಕ ಜಲಕ್ರಾಂತಿ ಮಾಡಿದ ಯುವಾ ಬ್ರಿಗೇಡ್‌ ಈಗ ‘ಜಲ ಜನ ಸಂಪರ್ಕ ಸೇತು’ ಎಂಬ ವಿನೂತನ ಜಲಸಾಕ್ಷರ ಅಭಿಯಾನವನ್ನು ಆರಂಭಿಸಿದೆ. ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ಉಂಟಾಗದಂತೆ ಜನರನ್ನು ಈಗಿಂದಲೇ ನೀರಿನ ಉಳಿತಾಯಕ್ಕೆ ಅಣಿಗೊಳಿಸುವುದು ಇದರ ಉದ್ದೇಶ. ಈ ಸಂಬಂಧ ಜಿಲ್ಲೆಯಲ್ಲಿ 5 ಸಾವಿರ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಈಗಾಗಲೇ ಕೆಲವು ಪ್ಲಂಬರುಗಳನ್ನು ಸಂಪರ್ಕಿಸಿ ‘ಮಳೆ ನೀರು ಸಂರಕ್ಷಣೆಯೊಂದಿಗೆ ಈ ವಾರಾಂತ್ಯ’ ಎಂಬ ಘೋಷವಾಕ್ಯದೊಂದಿಗೆ ಮಳೆ ಕೊಯ್ಲು ಕಾರ್ಯಕ್ರಮ ನಡೆಸಲು ಯೋಜಿಸಲಾಗಿದೆ.


ಮಳೆ ಬಿದ್ದ ಮಾತ್ರಕ್ಕೆ ಮುಂದಿನ ಬೇಸಗೆಯಲ್ಲಿ ನೀರಿನ ಕೊರತೆ ತಪ್ಪದು. ಅದಕ್ಕಾಗಿ ಪ್ರತಿಯೊಬ್ಬರೂ ಜಲಸಾಕ್ಷರರಾಗಬೇಕು. ಈ ಹಿನ್ನೆಲೆಯಲ್ಲೇ ‘ಜಲ ಜನ ಸಂಪರ್ಕ ಸೇತು’ ಅಭಿಯಾನ ಆರಂಭಗೊಂಡಿದೆ. ‘ಇರುವ ನೀರನ್ನು ವ್ಯರ್ಥ ಮಾಡದೇ ಉಪಾಯದಿಂದ ಬಳಸಲು ಪ್ರೇರೇಪಿಸಲು ಈ ಅಭಿಯಾನ. ವಾರದ ಕೊನೆಯ ದಿನದಂದು ಮನೆ ಮನೆಗಳಿಗೆ ತೆರಳಿ ಕರಪತ್ರ ಹಂಚಿ ಕಾರ್ಯಕರ್ತರು ನೀರು ಸಂರಕ್ಷಿಸಲು ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರೂ ಇದರಲ್ಲಿ ಪಾಲ್ಗೊಳ್ಳಬಹುದು’ ಎನ್ನುತ್ತಾರೆ ಯುವಾ ಬ್ರಿಗೇಡ್‌ನ‌ ನಿತ್ಯಾನಂದ ವಿವೇಕವಂಶಿ.

ಕರಪತ್ರದಲ್ಲೇನಿದೆ?
ಸ್ನಾನ ಮಾಡಲು ನೀರನ್ನು ವ್ಯರ್ಥ ಮಾಡದೇ ಒಂದು ಬಕೆಟ್‌ಗೆ ಸೀಮಿತಗೊಳಿಸೋಣ. ವಾಟರ್‌ ಪ್ಯೂರಿಫಯರ್‌ನಿಂದ ಹೊರ ಬರುವ ನೀರನ್ನು ಸಿಂಕ್‌ಗೆ ಬಿಡದೇ ಪಾತ್ರೆ ತೊಳೆಯಲು ಬಳಸೋಣ. ಸೋರುತ್ತಿರುವ ನಲ್ಲಿಗಳನ್ನು ಮತ್ತು ಫ್ಲಶ್‌ ಟ್ಯಾಂಕ್‌ಗಳನ್ನು ತತ್‌ಕ್ಷಣ ದುರಸ್ತಿ ಮಾಡಿಸೋಣ. ಶೌಚಾಲಯದ ಬಳಕೆಗೆ ಕಮೋಡ್‌ಗಿಂತ ಇಂಡಿಯನ್‌ ಟಾಯ್ಲೆಟ್‌ ಬಳಸೋಣ. ಸಂಪ್‌ ಅಥವಾ ಕೊಳವೆ ಬಾವಿಯಿಂದ ನೀರನ್ನು ಓವರ್‌ ಹೆಡ್‌ ಟ್ಯಾಂಕ್‌ಗೆ ಪಂಪ್‌ ಮಾಡುವಾಗ ಟ್ಯಾಂಕ್‌ ತುಂಬಿ ಸುರಿಯದಂತೆ ಎಚ್ಚರ ವಹಿಸೋಣ – ಇತ್ಯಾದಿ ಸಲಹೆಗಳಿವೆ.

ಪ್ರಧಾನಿ ಗಮನ ಸೆಳೆದ ಕಲ್ಯಾಣಿ ಸ್ವಚ್ಛತೆ
ಯುವಾ ಬ್ರಿಗೇಡ್‌ ಎರಡೂವರೆ ವರ್ಷಗಳಿಂದ ರಾಯಚೂರು, ಗದಗ, ಮೈಸೂರು ಸೇರಿದಂತೆ ಒಟ್ಟು 100ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಿದೆ. ಇಂತಹ ಕಲ್ಯಾಣಿಗಳಲ್ಲಿ ಜೀವಜಲ ತುಂಬಿ ಅಲ್ಲಿನ ಜನಜೀವನಕ್ಕೆ ಸಹಾಯವಾಗಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲೂ ಉಲ್ಲೇಖೀಸಿ ಶ್ಲಾಘಿಸಿದ್ದರು.

ತಮಿಳು – ಕನ್ನಡಿಗರ ಬೆಸೆಯಲು ‘ಮೈಟ್ರೀ’
ಕಾವೇರಿ ಜಲಾನಯನದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಜಲ ಕದನ ನಡೆಯದಂತೆ ಜಾಗೃತಿ ಮೂಡಿಸಿ ತಮಿಳುನಾಡಿನ ಯುವ ಜನರನ್ನೂ ಸೇರಿಸಿಕೊಂಡು ಕುಶಾಲನಗರದಲ್ಲಿ ಈ ಹಿಂದೆ ‘ಮೈಟ್ರೀ’ ಕಾವೇರಿ ಸ್ವಚ್ಛತೆ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ತಮಿಳು -ಕನ್ನಡಿಗರ ಮತ್ತು ಭೂಮಿ – ಆಕಾಶಗಳ ನಡುವಣ ಮರದ ಸಂಬಂಧ ಎಂಬ ಧ್ಯೇಯೋದ್ದೇಶದೊಂದಿಗೆ ಕಾವೇರಿ ಸ್ವಚ್ಛತೆ ನಡೆಸಿತ್ತು.

ಮಳೆ ಕೊಯ್ಲು, ಜಲಮರುಪೂರಣ
ಜಿಲ್ಲೆಯಲ್ಲಿ ಸುಮಾರು 5 ಸಾವಿರ ಮನೆಗಳಿಗೆ ಜಲ ಜನ ಕಾರ್ಯಕ್ರಮದ ಬಗ್ಗೆ ತಿಳಿಸುವ ಕರಪತ್ರ ತಲುಪಿಸಲಾಗುವುದು. ಈಗಾಗಲೇ ಕೆಲ ಪ್ಲಂಬರುಗಳನ್ನು ಸಂಪರ್ಕಿಸಿದ್ದು, ವಾರಾಂತ್ಯದಲ್ಲಿ ಕೆಲವೆಡೆ ಮಳೆ ಕೊಯ್ಲು, ಜಲಮರುಪೂರಣ ಕಾರ್ಯಕ್ರಮ ನಡೆಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ. ಶಾಲೆಗಳಲ್ಲಿ ಮಕ್ಕಳಿಗೆ ಜಲ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕಿದೆ.
– ತಿಲಕ್‌ ಶಿಶಿಲ, ಜಿಲ್ಲಾ ಸಹ ಸಂಚಾಲಕ,ಯುವಾಬ್ರಿಗೇಡ್‌

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.