ಟೀ ಮಾರಿ ಏಕ್ತಾಳಿಗೆ ಕ್ರಿಕೆಟ್‌ ಕಲಿಸಿದ ಅಪ್ಪ ಕುಂದನ್‌


Team Udayavani, Jul 5, 2017, 10:10 AM IST

SPORTS-8.jpg

ನವದೆಹಲಿ: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಇತ್ತೀಚೆಗೆ ಭಾರತ ತನ್ನ ಬದ್ಧ ಎದುರಾಳಿ ಪಾಕಿಸ್ತಾನವನ್ನು
ಸೋಲಿಸಿತ್ತು. ಆ ಪಂದ್ಯದಲ್ಲಿ 5 ವಿಕೆಟ್‌ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಏಕ್ತಾ ಬಿಷ್ಟ್ ಎಂಬ
ಸ್ಪಿನ್ನರ್‌. ಈ ಸಾಧನೆಯ ಮೂಲಕ ದೇಶಾದ್ಯಂತ ಮನೆ ಮಾತಾಗಿರುವ ಬಿಷ್ಟ್ ತಂದೆ ಒಬ್ಬ ಟೀ ವ್ಯಾಪಾರಿ, ಅಷ್ಟು
ಮಾತ್ರವಲ್ಲ ಭಾರತೀಯ ಸೇನೆಯಲ್ಲಿ ಮಾಜಿ ಹವಲ್ದಾರ್‌. ಅವರು ಟೀ ಮಾರಿ ಮಗಳನ್ನು ವಿಶ್ವದರ್ಜೆಯ ಕ್ರಿಕೆಟ್‌
ಆಟಗಾರ್ತಿಯನ್ನಾಗಿಸಿದ್ದಾರೆನ್ನುವ ಸತ್ಯ ಗೊತ್ತಿರುವುದು ಕೆಲವರಿಗೆ ಮಾತ್ರ!

ಭಾರತೀಯ ಸೇನೆಯಲ್ಲಿ ಹವಲ್ದಾರ್‌ ಹುದ್ದೆಯಲ್ಲಿದ್ದ ಏಕ್ತಾ ಬಿಷ್ಟ್ ತಂದೆ ಕುಂದನ್‌ ಸಿಂಗ್‌ ಬಿಷ್ಟ್ 1988ರಲ್ಲಿ
ನಿವೃತ್ತರಾಗಿದ್ದಾರೆ. ಆದರೆ ಇವರ ನಿವೃತ್ತಿ ನಂತರ ಬರುತ್ತಿದ್ದ ಮಾಸಾಶನ ಕೇವಲ 1500 ರೂ. ಇದರಿಂದ ಜೀವನ
ನಡೆಸುವುದು ಕಷ್ಟ ಎನ್ನುವುದನ್ನು ಅರಿತ ಕುಂದನ್‌ ಸಿಂಗ್‌ ಉತ್ತರಾಖಂಡದಲ್ಲಿ ಟೀ ವ್ಯಾಪಾರ ಮಾಡಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ ನಂತರದ ದಿನಗಳಲ್ಲಿ ಮಾಸಾಶನದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಟೀ ವ್ಯಾಪಾರವನ್ನು ತ್ಯಜಿಸಿದ್ದಾರೆ.

ಹುಡುಗರ ಜತೆ ಕ್ರಿಕೆಟ್‌ ಅಭ್ಯಾಸ: ಏಕ್ತಾ ಬಿಷ್ಟ್ ಮೊದಲು ಕ್ರಿಕೆಟ್‌ ಆಡಲು ಆರಂಭಿಸಿದ್ದು ಹುಡುಗರ ಜತೆ. ಆಗ ಏಕ್ತಾಗೆ 6 ವರ್ಷ, ನಂತರದ ದಿನಗಳಲ್ಲಿ ಶಾಲಾ ತಂಡದಲ್ಲಿ ಆಡಲು ಆರಂಭಿಸಿದರು. ಆಗ ಎಲ್ಲರೂ ಅಚ್ಚರಿಯಿಂದ ನೋಡುತ್ತಿದ್ದರು. ಹುಡುಗರ ತಂಡದಲ್ಲಿರುವ ಏಕೈಕ ಹುಡುಗಿ ಏಕ್ತಾ ಆಗಿದ್ದರು. ಜೊತೆಗೆ ಮನೆಯಲ್ಲಿ ಬಡತನ. ಆದರೂ ಪೋಷಕರು ಮಗಳ ಉತ್ಸಾಹಕ್ಕೆ ಅಡ್ಡಿಯಾಗಲಿಲ್ಲ, ಹಾಗೆಯೇ ಮಗಳು ಕೂಡ ಜವಾಬ್ದಾರಿಯಿಂದ ಹಣ ಖರ್ಚು ಮಾಡುತ್ತಿದ್ದರು!
2006ರಲ್ಲಿಯೇ ಉತ್ತರಾಖಂಡ ತಂಡವನ್ನು ಪ್ರತಿನಿಧಿಸಿದ ಏಕ್ತಾ ನಂತರ 2007ರಿಂದ 2010ರವರೆಗೆ ಉತ್ತರ ಪ್ರದೇಶ ತಂಡದಲ್ಲಿ ಆಡಿದ್ದಾರೆ. ಅಲ್ಲಿ ನೀಡಿದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ 2011ರಲ್ಲಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ದೊರೆತಿದೆ. ಏಕ್ತಾ ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಿದ ಮೇಲೆ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ ಎಂದು ಏಕ್ತಾ ತಂದೆ ಕುಂದನ್‌ ಸಿಂಗ್‌ ತಿಳಿಸಿದ್ದಾರೆ.

ಮಗಳಿಗೆ ಕ್ರೀಡೆಯ ಬಗ್ಗೆ ವಿಪರೀತ ಆಸಕ್ತಿ ಇತ್ತು. ಚಿಕ್ಕವಳಿರುವಾಗಲೇ ಕುಟುಂಬದ ಹುಡುಗರ ಜತೆ ಕ್ರಿಕೆಟ್‌ ಆಡುತ್ತಿದ್ದಳು. ಇಂದು ಮಗಳ ಸಾಧನೆ ನೋಡಿ ಬಹಳ ಸಂತಸವಾಗಿದೆ.
ಕುಂದನ್‌ ಸಿಂಗ್‌ ಬಿಷ್ಟ್, ಏಕ್ತಾ ಬಿಷ್ಟ್ ತಂದೆ

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.