GST impact: ಅಪಾರ್ಟ್‌ಮೆಂಟ್‌ ದರ ಶೇ.20ರಷ್ಟು ಕಡಿಮೆಯಾಗಲಿದೆ


Team Udayavani, Jul 5, 2017, 11:11 AM IST

Housing-700.jpg

ಮುಂಬಯಿ : ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಅನುಷ್ಠಾನಗೊಂಡಿರುವುದರಿಂದ  ರಿಯಲ್‌ ಎಸ್ಟೇಟ್‌ ಉದ್ಯಮದಲ್ಲಿ ಕಪ್ಪು ಹಣದ ಬಳಕೆ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗಲಿದ್ದು  ಡೆವಲಪರ್‌ಗಳಿಗೆ ಸಿಗುವ ತೆರಿಗೆ ಲಾಭದಿಂದಾಗಿ ಈಗಿನ್ನು ದೇಶದಲ್ಲಿ  ಅಪಾರ್ಟ್‌ಮೆಂಟ್‌ ಬೆಲೆ ಶೇ.20ರಷ್ಟು ಇಳಿಯುವ ಸಾಧ್ಯತೆ ಇದೆ ಎಂದು ‘ಲಯಸಸ್‌ ಫೋರಾಸ್‌’ ಸಿದ್ಧಪಡಿಸಿರುವ ‘ಗೂಡ್ಸ್‌ ಆ್ಯಂಡ್‌ ಸರ್ವಿಸಸ್‌ ಟ್ಯಾಕ್ಸ್‌ – ಹಿಸ್ಟರಿ ಇನ್‌ ದಿ ಮೇಕಿಂಗ್‌’ ಎಂಬ ಶೀರ್ಷಿಕೆಯ ವರದಿಯು ತಿಳಿಸಿದೆ. 

ಜಿಎಸ್‌ಟಿಯಿಂದಾಗಿ ರಿಯಲ್‌ ಎಸ್ಟೇಟ್‌ ಡೆವಲಪರ್‌ಗಳು ತಮ್ಮ ತೆರಿಗೆ ಪಾವತಿಯ ಮೇಲಿನ ‘ಪೂರ್ತಿ ಕ್ರೆಡಿಟ್‌’ ಪಡೆದುಕೊಳ್ಳುವುದಕ್ಕೆ ಅವಕಾಶವಿರುವುದರಿಂದ ವಸತಿ ಘಟಕಗಳ ನಿರ್ಮಾಣ ವೆಚ್ಚವು ಕನಿಷ್ಠ ಶೇ.20ರಷ್ಟು ಕಡಿಮೆಯಾಗುತ್ತದೆ. ಇದರ ಪರಿಣಾಮವಾಗಿ ಅಪಾರ್ಟ್‌ಮೆಂಟ್‌ ಬೆಲೆಗಳಲ್ಲಿ ಕೂಡ ಶೇ.20ರಷ್ಟು ಕಡಿತ ಉಂಟಾಗುತ್ತದೆ ಎಂದು ವರದಿ ಹೇಳಿದೆ. 

ಜಿಎಸ್‌ಟಿ ಕ್ರಮದಿಂದಾಗಿ ಖರೀದಿದಾರನಿಗೆ ಮಾರುವ ಉದ್ದೇಶದಿಂದ ನಿರ್ಮಾಣವಾಗುವ ವಸತಿ ಕಟ್ಟಡ ಅಥವಾ ಅದರ ಭಾಗದ ವೆಚ್ಚಕ್ಕೆ ಶೇ.12ರ ತೆರಿಗೆ ಲಗಾವಾಗುತ್ತದೆ. ಇದು ಮುದ್ರಾಂಕ ವಚ್ಚವನ್ನು ಹೊರತುಪಡಿಸುವ ಪೂರ್ತಿ ‘ಇನ್‌ಪುಟ್‌ ಟ್ಯಾಕ್ಸ್‌  ಕ್ರೆಡಿಟ್‌’ ಅನ್ನು ಒಳಪಡುತ್ತದೆ. ಜಿಎಸ್‌ಟಿ ಅಡಿ ಡೆವಲಪರ್‌ಗಳಿಗೆ ಇನ್‌ಪುಟ್‌ ಕ್ರೆಡಿಟ್‌ ಟ್ಯಾಕ್ಸ್‌ ಲಾಭವನ್ನು ಪಡೆಯಲು ಅವಕಾಶವಿದೆ. ಇದರ ಪರಿಣಾಮವಾಗಿ ವಸತಿ ಕಟ್ಟಡಗಳ ನಿರ್ಮಾಣ ವೆಚ್ಚವು ಶೇ.20ರಷ್ಟು ಕಡಿಮೆಯಾಗುತ್ತದೆ ಎಂದು ವರದಿ ತಿಳಿಸಿದೆ. 

ವಸತಿ ಕಟ್ಟಡ ನಿರ್ಮಾಣಕ್ಕೆ ಬಳಸಲ್ಪಡುವ ವಸ್ತುಗಳು ಮತು ಸಲಕರಣೆಗಳ ಮೇಲೆ ಡೆವಲಪರ್‌ಗಳು ಪಾವತಿಸುವ ತೆರಿಗೆಯ ಮೇಲೆ ಅವರಿಗೆ ಐಟಿಸಿ (ಇನ್‌ಪುಟ್‌ ಟ್ಯಾಕ್ಸ್‌  ಕ್ರೆಡಿಟ್‌)ಸವಲತ್ತು ಸಿಗುತ್ತದೆ. ಡೆವಲಪರ್‌ ಸಮುದಾಯದವರು ನೀಡಿರುವ ಅಂದಾಜಿನ ಪ್ರಕಾರ ಈ ತೆರಿಗೆಯು ವಸತಿ ಕಟ್ಟಡ ನಿರ್ಮಾಣ ವೆಚ್ಚದ ಶೇ.20ರಿಂದ ಶೇ.25ರಷ್ಟು ಆಗುತ್ತದೆ.

ಐಟಿಸಿ (ಇನ್‌ಪುಟ್‌ ಟ್ಯಾಕ್ಸ್‌  ಕ್ರೆಡಿಟ್‌) ಯಿಂದಾಗಿ ಡೆವಲಪರ್‌ಗಳಿಗೆ ಈ ಪ್ರಮಾಣದ ಲಾಭವಾಗುವುದರಿಂದ ನಿರ್ಮಾಣ  ವೆಚ್ಚವು ಕಡಿಮೆಯಾಗಿ ಗ್ರಾಹಕರಿಗೆ ಶೇ.20ರಷ್ಟು ಕಡಿಮೆ ವೆಚ್ಚದಲ್ಲಿ ಅಪಾರ್ಟ್‌ಮೆಂಟ್‌ಗಳು ಸಿಗುವಂತಾಗುತ್ತದೆ ಎಂದು ವರದಿ ತಿಳಿಸಿದೆ. 

ಟಾಪ್ ನ್ಯೂಸ್

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.