ಬರ ಕಾಮಗಾರಿ ನಿರ್ವಹಣೆಗೆ ಸೂಚನೆ
Team Udayavani, Jul 5, 2017, 1:37 PM IST
ವಿಜಯಪುರ: ಬರ ನಿರ್ವಹಣೆ ಮತ್ತು ನೀರಿನ ಕೊರತೆ ಎದುರಿಸಲು ಸಂಬಂಧಪಟ್ಟ ಇಲಾಖೆಯಲ್ಲಿರುವ
ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ ಯೋಜನೆಗಳ
ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬರ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ
ಜಿಲ್ಲೆಯಲ್ಲಿ ಕೇಂದ್ರದ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾ ಕ್ರಿಯಾಯೋಜನೆ ರಚಿಸುವ ಜಿಲ್ಲಾಮಟ್ಟದ ತಾಂತ್ರಿಕ
ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಬಿತ್ತನೆ ಆರಂಭವಾಗಿರುವುದರಿಂದ
ಯಾವ ಬೆಳೆಗೆ ಎಷ್ಟು ನೀರಿನ ಅಗತ್ಯವಿದೆ ಎಂಬುವುದು ಅರಿತುಕೊಳ್ಳಬೇಕು. ಕೊಳವೆ ಬಾವಿ, ಕಾಲುವೆ ಸೇರಿದಂತೆ
ಮುಂತಾದ ನೀರಿನ ಮೂಲಗಳ ಮೂಲಕ ಬೆಳೆಗಳಿಗೆ ಅಗತ್ಯಾನುಸಾರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.
ಬ್ಲಾಕ್ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಪರಿಶೀಲನೆ ನಡೆಸಿ ಮುಂದಿನ ಯೋಜನೆ
ರೂಪಿಸಲಾಗುವುದು ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಭೆಗೆ ಮಾಹಿತಿ ನೀಡಿ, ರಾಜ್ಯದ 16 ಬರಪೀಡಿತ ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಯೂ ಸೇರಿದೆ. ಕೃಷಿಯ ಸ್ಥಿರತೆ, ಅಂತರ್ಜಲ ಅಭಿವೃದ್ಧಿ, ಕಾಲುವೆ ನಿರ್ಮಾಣ, ಕೃಷಿ ಹೊಂಡ, ಸಣ್ಣ ನೀರಾವರಿ, ನೀರಿನ ಪೋಲು ತಡೆಗಟ್ಟುವಿಕೆ, ಮುಂತಾದ ಕ್ರಿಯಾಯೋಜನೆ ರೂಪಿಸಲು ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಜಿಪಂ ಸಿಇಒ ಎಂ.ಸುಂದರೇಶಬಾಬು, ಅಪರ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ