ಪಿಲಿಕುಳಕ್ಕೆ ಎಲೆಕ್ಟ್ರಿಕ್‌ ಬಸ್‌ :ಪ್ರವಾಸಿಗರು ಆಯಾಸ ಪಡಬೇಕಿಲ್ಲ !


Team Udayavani, Jul 6, 2017, 3:45 AM IST

pilikula.jpg

ಮಹಾನಗರ: ಸುಮಾರು 400 ಎಕ್ರೆ ಪ್ರದೇಶದಲ್ಲಿರುವ ಪಿಲಿಕುಳ ನಿಸರ್ಗಧಾಮದೊಳಗೆ ಇನ್ನು ನೀವು ನಡೆದೂ ನಡೆದು ಸುಸ್ತಾಗಬೇಕಿಲ್ಲ. ಅದಕ್ಕೆ ಬಸ್‌ಗಳು ನೆರವಾಗಲಿವೆ.

ನಿಸರ್ಗಧಾಮದೊಳಗಿನ ಎಲ್ಲ ಸ್ಥಳಗಳಿಗೂ ತೆರಳಲು ಪ್ರವಾಸಿಗರಿಗೆ ಅನುಕೂಲವಾಗುವಂತೆ ಶಬ್ದ ಹಾಗೂ ಮಾಲಿನ್ಯ ರಹಿತ  ವಾಹನಗಳ ಸೌಲಭ್ಯ ಕಲ್ಪಿಸಲು ಚಿಂತನೆ ನಡೆದಿದೆ.

ನಿಸರ್ಗಧಾಮಕ್ಕೆ ತೆರಳುವ‌ ಮುಖ್ಯ ರಸ್ತೆಯಿಂದ ಇಲ್ಲಿನ ವಿವಿಧ ವಿಭಾಗಗಳಿಗೆ ತೆರಳಲಿರುವ ಈ ಬಸ್‌ ಪ್ರಾಣಿ ಸಂಗ್ರಹಾಲಯದ  ಒಳಗೂ ಹೋಗಲಿದೆ. 

ಈವರೆಗೆ ಪ್ರಾಣಿ ಸಂಗ್ರಹಾಲಯದ  ಒಳಗೆ ಬಗ್ಗೀಸ್‌ಗಳನ್ನು ಮಾತ್ರ ಬಳಸಲಾಗುತ್ತಿತ್ತು. ಕೆಲವೇ ದಿನಗಳಲ್ಲಿ ವಾಹನದಲ್ಲೇ ಕುಳಿತು ಪಿಲಿಕುಳವನ್ನು ವೀಕ್ಷಿಸಬಹುದು. 

ಮುಖ್ಯ ರಸ್ತೆಯಿಂದ ಟಿಕೆಟ್‌ ತೆಗೆದುಕೊಂಡು ಈ ವಾಹನದಲ್ಲಿ ಕುಳಿತರೆ ವಿಜ್ಞಾನ ಕೇಂದ್ರ,  ಪ್ರಾಣಿ ಸಂಗ್ರಹಾಲಯ, ಗುತ್ತು ಮನೆ, ಬೋಟಿಂಗ್‌, ವಾಟರ್‌ ಪಾರ್ಕ್‌, ಆಯುರ್ವೇದ ಥೆರಪಿ ಮೊದಲಾದೆಡೆ ತಿರುಗಿ ವಾಪಸಾಗಬಹುದು.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ
ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ನಿಸರ್ಗಧಾಮದ ದ್ವಾರದ ಬಳಿಯ ಮುಖ್ಯ ರಸ್ತೆಯಿಂದ ಧಾಮದವರೆಗೆ ರಿಕ್ಷಾ ಗಳಿಗ ಸಾಕಷ್ಟು  ಹಣ ತೆರುವುದನ್ನು ತಪ್ಪಿಸಲು ಹಾಗೂ ಪ್ರವಾಸಿಗರಿಗೆ ಎಲ್ಲ ಭಾಗಗಳನ್ನು ವೀಕ್ಷಿಸಲು ಅನುಕೂಲ ವಾಗಲು ಈ ಯೋಜನೆ ರೂಪಿಸಲು ಜಿಲ್ಲಾಧಿಕಾರಿ ಸೂಚಿಸಿದ್ದರು. ಆ ಪ್ರಕಾರ ಮುಖ್ಯ ರಸ್ತೆಯಿಂದ ಎಲೆಕ್ಟ್ರಿಕಲ್‌ ಅಥವಾ ಬ್ಯಾಟರಿ ಚಾಲಿತ ಮಿನಿ ಬಸ್‌ ಧಾಮದೊಳಗೆ ತಿರುಗಲಿದೆ.

ರಸ್ತೆ ಅಗಲಕ್ಕೆ ಸರ್ವೇ
ಪ್ರಾಣಿ ಸಂಗ್ರಹಾಲಯ ಹಾಗೂ ಗುತ್ತು ಮನೆ ಸಹಿತ ಎಲ್ಲ ಕಡೆಗಳಲ್ಲೂ ರಸ್ತೆಯನ್ನು ಅಗಲಗೊಳಿಸುವ ನಿಟ್ಟಿನಲ್ಲಿ ಸರ್ವೇ ನಡೆಯುತ್ತಿದೆ. 

ಯೋಜನೆ ರೂಪಿಸಿದ ಬಳಿಕ  ಅನುದಾನ ಬಿಡುಗಡೆಯ ಬಗ್ಗೆ  ಚಿಂತನೆ ನಡೆಸಲಾಗುವುದು ಎಂದು ಅಧಿಕಾರಿಗಳು ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ. 

ಎಲ್ಲವೂ ಅಂದುಕೊಂಡಂತೆ ನಡೆದರೆ ಮಳೆಗಾಲದ ಬಳಿಕ ಈ ಬಸ್‌ ಸೇವೆ ಆರಂಭವಾಗಲಿದೆ.

ಹಿಂದೆ ಇದ್ದ ಮಿನಿಬಸ್‌ ಸ್ಟಾಪ್‌
ಮುಖ್ಯರಸ್ತೆಯಿಂದ ಪಿಲಿಕುಳ ಒಳಕ್ಕೆ ಚಲಿಸಲು ಖಾಸಗಿ ಸಹಭಾಗಿತ್ವದಲ್ಲಿ ನಿಯೋಜನೆಗೊಂಡಿದ್ದ ಮಿನಿಬಸ್‌ ಮಳೆಗಾಲದ ಹಿನ್ನೆಲೆಯಲ್ಲಿ ಪ್ರವಾಸಿಗರ ಕೊರತೆಯಿಂದ ನಿಂತಿದೆ. ಈ ವಾಹನ 20 ರೂ. ದರದಲ್ಲಿ ಮುಖ್ಯರಸ್ತೆಯಿಂದ ಎಲ್ಲ ಭಾಗಗಳಿಗೂ ಪ್ರವಾಸಿಗರನ್ನು ಕೊಂಡೊಯ್ಯುತ್ತಿತ್ತು.

ಬಗ್ಗೀಸ್‌ ಮಾತ್ರ ಸಂಚಾರ
ಪ್ರಸ್ತುತ ಮೃಗಾಲಯದ ಒಳಭಾಗದಲ್ಲಿ ಮೂರು ಚಕ್ರದ ಏಳು ಬಗ್ಗೀಸ್‌ಗಳು ಮಾತ್ರ ಸಂಚರಿಸುತ್ತಿವೆ. ಇದರಲ್ಲಿ ಒಂದು ಬಾರಿಗೆ ಆರು ಜನರು ಮಾತ್ರ ತೆರಳಬಹುದು. ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಮಕ್ಕಳು ನಡೆದೇ ಹೋಗಬೇಕಿತ್ತು. ಈ ಸಮಸ್ಯೆಗೆ ಪರಿಹಾರಕ್ಕಾಗಿಯೇ ಒಂದು ಬಾರಿ 25 ಜನರಿಗೆ ತೆರಳಬಹುದಾದ ಎಲೆಕ್ಟ್ರಿಕಲ್‌ ಅಥವಾ ಬ್ಯಾಟರಿ ಚಾಲಿತ ಬಸ್‌  ಬರಲಿದೆ.

ಶೀಘ್ರದಲ್ಲೇ  ಯೋಜನೆ ಜಾರಿ
ಪಿಲಿಕುಳದಲ್ಲಿ ಬೋಟಿಂಗ್‌, ಗುತ್ತಿನ ಮನೆ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ ಈ ಬಗ್ಗೆ ಸೂಕ್ತ ಮಾಹಿತಿ ಇರುವುದಿಲ್ಲ.  ಬಸ್‌ ಸೌಲಭ್ಯ ಕಲ್ಪಿಸಿದರೆ ಈ ಎಲ್ಲ ಭಾಗಗಳಿಗೆ ತೆರಳಬಹುದು ಎಂಬ ನಿಟ್ಟಿನಲ್ಲಿ ಈ  ಬಗ್ಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಕಿರಿದಾಗಿರುವ ಕಡೆ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಅನುದಾನಗಳ ಬಗ್ಗೆ ಚರ್ಚೆ ಆಗಬೇಕಷ್ಟೆ. ಮಳೆಗಾಲ ಮುಗಿದೊಡನೆ ಎಲೆಕ್ಟ್ರಿಕಲ್‌ 
ಬಸ್‌ಗೆ ಚಾಲನೆ ದೊರೆಯಲಿದೆ.
– ಜಯಪ್ರಕಾಶ್‌ ಭಂಡಾರಿ ಜೈವಿಕ ಉದ್ಯಾನವನದ ನಿರ್ದೇಶಕ

ಟಾಪ್ ನ್ಯೂಸ್

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.