ಕಾಣಿಯೂರು ರೈಲು ನಿಲ್ದಾಣ: ಉಚಿತ ಪ್ರಯಾಣ ಖಚಿತ!


Team Udayavani, Jul 6, 2017, 3:45 AM IST

0507svnr1ph.jpg

ಸವಣೂರು: ಕಬಕ- ಪುತ್ತೂರು ರೈಲು ನಿಲ್ದಾಣದಿಂದ ನೆಟ್ಟಣ ಮಾರ್ಗ ವಾಗಿ 19 ಕಿ.ಮೀ. ದೂರದಲ್ಲಿರುವ ಕಾಣಿಯೂರು ರೈಲು ನಿಲ್ದಾಣದಿಂದ ಪ್ರಯಾಣಿಕರು ಉಚಿತವಾಗಿ ರೈಲಿನಲ್ಲಿ ಪ್ರಯಾಣಿಸಬಹುದು. 

ಖಂಡಿತ ಇದು ರೈಲ್ವೇ ಇಲಾಖೆಯ ವರ ಪ್ರಕಟನೆಯಲ್ಲ. ಆದರೆ, ಅಲ್ಲಿರುವ ನೈಜ ಪರಿಸ್ಥಿತಿ. ಕಾರಣ ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ನೀಡುವವರಿಲ್ಲ. ಹೀಗಾಗಿ ಇಲ್ಲಿನ ರೈಲು ಪ್ರಯಾಣಿಕರಿಗೆ ಉಚಿತ ಪ್ರಯಾಣದ ಭಾಗ್ಯ.

ರೈಲ್ವೇ ಇಲಾಖೆ ವೈಫಲ್ಯ 
ಇಲಾಖೆಯ ಈ ವೈಫ‌ಲ್ಯ ಕೆಲವರಿಗೆ ಖುಷಿಗೆ ಕಾರಣವಾದರೆ, ಮತ್ತೆ ಕೆಲವರಿಗೆ ಆತಂಕಕ್ಕೆ ಕಾರಣವಾಗಿದೆ. ಪ್ರಯಾಣದ ವೇಳೆ ಟಿಕೆಟ್‌ ಪರೀಕ್ಷಕರು ಬಂದು (ಟಿಟಿಇ-ಟ್ರಾವೆಲಿಂಗ್‌ ಟಿಕೆಟ್‌ ಎಕ್ಸಾಮಿನರ್‌) ಪರಿಶೀಲಿಸಿದರೆ ಏನು ಮಾಡುವುದೆಂಬ ಆತಂಕ ಇದ್ದೇ ಇದೆ. ಇದರೊಂದಿಗೆ ಒಂದುವೇಳೆ ಹಾಗೆ ಸಿಕ್ಕು ಬಿದ್ದರೂ ದಂಡ ಪಾವತಿಸ ಬೇಕಿಲ್ಲ. ಪ್ರಯಾಣ ದರವನ್ನು ನೀಡಿದರೆ ಸಾಕೆಂಬ ಖುಷಿಯ ಸಂಗತಿಯೂ ಇದೆ. ಯಾರೂ ಬಾರದಿದ್ದರೆ ಉಚಿತ ಪ್ರಯಾಣ.

ಹೇಗೆ ಉಚಿತ ಪ್ರಯಾಣ
ಈ ನಿಲ್ದಾಣದಲ್ಲಿ ಸ್ಥಳೀಯರಾದ ಅನಂತರಾಮ ಉಪಾಧ್ಯಾಯ ಹಾಗೂ ಬಳಿಕ ವಸಂತ ಅನಿಲ ಅವರು  ರೈಲ್ವೇ ಇಲಾಖೆಯಿಂದ ಟಿಕೆಟ್‌ ಹಂಚಿಕೆಯ ಟೆಂಡರ್‌ ಪಡೆದು ಕೌಂಟರ್‌ನಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ವಿತರಿಸುತ್ತಿದ್ದರು. ಆದರೆ, ಅವರ ಟೆಂಡರ್‌ ಅವಧಿ ಮುಗಿದು ಆರು ತಿಂಗಳು ಕಳೆದರೂ ಹೊಸಬರ್ಯಾರೂ ಬಂದಿಲ್ಲ. ಇಲಾಖೆಯೂ ಟೆಂಡರ್‌ ಕರೆದಿಲ್ಲ. ಹಾಗಾಗಿ ಬೇರೆಯವರಿಗೆ ಗುತ್ತಿಗೆ ನೀಡುವವರೆಗೆ ಈ ಉಚಿತ ಪ್ರಯಾಣ ಭಾಗ್ಯ ಮುಂದುವರಿಯಲಿದೆ.
 
ಹೀಗಿದೆ ಪ್ರಯಾಣ ವೆಚ್ಚ
ಕಾಣಿಯೂರಿನಿಂದ ನೆಟ್ಟಣಕ್ಕೆ 10 ರೂ., ಕಾಣಿಯೂರಿನಿಂದ ಪುತ್ತೂರಿಗೆ 10 ರೂ., ಕಾಣಿಯೂರಿನಿಂದ ಮಂಗಳೂರಿಗೆ 20 ರೂ. ಇದೆ. ಕಾಣಿ ಯೂರಿನಿಂದ ಮಂಗಳೂರಿಗೆ ಬಸ್‌ನಲ್ಲಿ ಪ್ರಯಾಣಿಸುವುದಾದರೆ 70 ರೂ. ವೆಚ್ಚವಾಗಲಿದೆ. ಆದ್ದರಿಂದ ರೈಲಿನಲ್ಲಿ ಪ್ರಯಾಣಿಸುವವರೇ ಅಧಿಕ. ನಿಲ್ದಾಣದಲ್ಲಿಯೇ ಟಿಕೆಟ್‌ ನೀಡಲು ಕೊಠಡಿಯೊಂದಿದೆ. ಈ ಕೊಠಡಿಗೆ ಬೀಗದ ವ್ಯವಸ್ಥೆಯಿಲ್ಲದೇ ಅನೈತಿಕ ಚಟುವಟಿಕೆಗಳ ಆಶ್ರಯ ತಾಣ ವಾಗಬಹುದೆನ್ನುವುದು ಸ್ಥಳೀಯರ ಆತಂಕ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.