ಪುಣೆ ಕನ್ನಡ ಸಂಘ ಶಿಕ್ಷಣ ಸಂಸ್ಥೆ: ನೂತನ ಶಿಕ್ಷಕಿಯರ ಸ್ವಾಗತ


Team Udayavani, Jul 6, 2017, 4:03 PM IST

05-Mum07b.jpg

ಪುಣೆ: ಕನ್ನಡ ಸಂಘ ಪುಣೆಯ ನವ ಶೈಕ್ಷಣಿಕ ವರ್ಷದಲ್ಲಿ ತನ್ನ ಕಾವೇರಿ  ವಿದ್ಯಾ ಸಂಸ್ಥೆಯಲ್ಲಿ  ನೂತನವಾಗಿ ನೇಮಕಗೊಂಡ ಸುಮಾರು 42 ಮಂದಿ ಶಿಕ್ಷಕಿಯರ ವಿಶೇಷ ಸ್ವಾಗತ ಕಾರ್ಯಕ್ರಮವು ಸಂಘದ ಆಡಳಿತ ಮಂಡಳಿಯ ವತಿಯಿಂದ ಸಂಸ್ಥೆಯ ಸಭಾಗೃಹದಲ್ಲಿ ನಡೆಯಿತು.

ಕನ್ನಡ ಸಂಘ ಪುಣೆ ಕಳೆದ 5 ದಶಕಗಳಿಂದ ಮಹಾರಾಷ್ಟ್ರದ ಪ್ರಮುಖ ವಿದ್ಯಾ
ಕೇಂದ್ರವಾಗಿರುವ ಪುಣೆಯಲ್ಲಿ ಯಶಸ್ವಿಯಾಗಿ  ನಡೆಸುತ್ತಿರುವ ಮೂಲ ಶಿಕ್ಷಣದಿಂದ ಉಚ್ಚ ಶಿಕ್ಷಣದ ವರೆಗಿನ ಶಿಕ್ಷಣ ಸಂಸ್ಥೆಗಳಲ್ಲಿ ಈ ವರ್ಷ ಪ್ರಥಮವಾಗಿ  ಸುಮಾರು  42 ಶಿಕ್ಷಕಿಯರನ್ನು ಹೊಸದಾಗಿ ನೇಮಿಸಲಾಗಿದೆ. ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆ,  ಕ್ಷೇತ್ರಗಳಿಂದ ಆಯ್ಕೆಗೊಂಡ ಶಿಕ್ಷಕಿಯರು ತಮ್ಮ ಪರಿಚಯ ಮಾಡಿಕೊಟ್ಟು  ತಾವು ಈ ಸಂಸ್ಥೆಗೆ ಸೇರಲು ಕಾರಣ ತಿಳಿಸಿದರು.

ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ ಅವರು  ಹೊಸ ಶಿಕ್ಷಕಿಯರನ್ನು ಸ್ವಾಗತಿಸಿ, ಸಂಸ್ಥೆಯ ಆಡಳಿತದಲ್ಲಿನ ಪಾರದರ್ಶಕತೆ ಮತ್ತು ನಂಬಿಕೆ ಪರಸ್ಪರ ಸಹ ಯೋಗದಿಂದಾಗಿ ಸಂಸ್ಥೆ ಇಂದು ಪುಣೆಯಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಗಿದೆ. 400ಕ್ಕೂ  ಮಿಕ್ಕಿ ಶಿಕ್ಷಕ ವರ್ಗವಿದ್ದು, 42 ಮಂದಿ ಹೊಸತಾಗಿ ಒಮ್ಮೆಲೇ ಸೇರಿದ್ದು ಮಾತ್ರವಲ್ಲದೆ ಸಂಸ್ಥೆಯಿಂದ ನಿರ್ಗಮಿಸುವವರು ನಿವೃತ್ತಿಯ ವೇಳೆಯಲ್ಲಿ ಮಾತ್ರವೆಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅಭಿನಂದಿಸಿದರು.

ಕಾರ್ಯದರ್ಶಿ ಮಾಲತಿ ಕಲ್ಮಾಡಿ ಎಲ್ಲರನ್ನು ಸ್ವಾಗತಿಸಿ ಸಂಸ್ಥೆಯ ಹೊಸ ಯೋಜನೆಗಳ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಡಾ| ನಾರಾಯಣ ಹೆಗ್ಡೆ, ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ವಿಶ್ವಸ್ತರಾದ   ರಾಧಿಕಾ ಶರ್ಮ,  ಪಾಯಲ ಭಾರತಿಯ, ಲಯನ್‌  ಚಂದ್ರಹಾಸ್‌ ಶೆಟ್ಟಿ, ಜನಸಂಪರ್ಕಾಧಿಕಾರಿ   ರಾಮದಾಸ್‌ ಆಚಾರ್ಯ, ಆಡಳಿತಾಧಿಕಾರಿ  ಪ್ರಸಾಣ ಅಕೊಲ್ಕರ್‌  ಮತ್ತು ಸಮನ್ವಯಾಧಿಕಾರಿ ಕಾಮಿನಿ ಸಕ್ಸೆನಾ   ಉಪಸ್ಥಿತರಿದ್ದರು. ಕೊನೆಯಲ್ಲಿ ಹೊಸ ಶಿಕ್ಷಕಿಯರು ಮೇಣದ  ದೀಪ ಹಚ್ಚಿ ತಮ್ಮ ಆಗಮನವನ್ನು ಪ್ರಕಟಿಸಿದರು. ನೂತನ ಶಿಕ್ಷಕಿಯರನ್ನು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಲಾಯಿತು. ಸಮಾರಂಭದಲ್ಲಿ ಸಮೂಹ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು. 

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.