ಸುಳ್ಯಮೆ : ಮಾದಕ ವಸ್ತು ವಿರೋಧಿ ದಿನಾಚರಣೆ
Team Udayavani, Jul 7, 2017, 3:50 AM IST
ಕುಂಬಳೆ: ರೂಪಕಲಾ ಗ್ರಂಥಾಲಯ ಸುಳ್ಯಮೆ ಇದರ ಆಶ್ರಯದಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಜರಗಿಸಲಾಯಿತು. ಕಾರ್ಯಕ್ರಮವನ್ನು ವರ್ಕಾಡಿ ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಸಾಮಾನಿ ಉದ್ಘಾಟಿಸಿದರು.
ಕೊಡ್ಲಮೊಗರು ಶ್ರೀ ವಾಣಿವಿಜಯ ವಿದ್ಯಾಲಯದ ಅಧ್ಯಾಪಿಕೆ ಕೃಷ್ಣವೇಣಿ ಬಿ. ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಮಾತನಾಡಿ, ನಮ್ಮ ಮಕ್ಕಳಲ್ಲಿ ಪ್ರೀತಿಯ ಕೊರತೆ, ಮನೆಯಲ್ಲಿ ಹೆತ್ತವರೊಳಗೆ ಕಲಹ, ಪರಸ್ಪರ ಆತ್ಮವಿಶ್ವಾಸದ ಕೊರತೆ ಇರುವ ಮಕ್ಕಳು ಬೇಗನೆ ಮಾದಕ ವಸ್ತುಗಳ ದಾಸರಾಗುತ್ತಾರೆ. ಅಲ್ಲದೆ ವಿವಿಧ ರೀತಿಯ ಕೆಟ್ಟ ಚಟಗಳಿಗೆ ಬಲಿಯಾಗುತ್ತಾರೆ ಎಂಬುದಾಗಿ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರವಾಗಿ ವಿವರಿಸಿದರು. ಗ್ರಂಥಾಲಯದ ಅಧ್ಯಕ್ಷ ಉದಯ ಶೆಟ್ಟಿ, ರೂಪಕಲಾ ಕರ್ಷಕ ಸಮಿತಿಯ ಮಾಜಿ ಅಧ್ಯಕ್ಷ ಮೊಹಮ್ಮದ್ ಎಸ್ ಉಪಸ್ಥಿತರಿದ್ದರು. ಗ್ರಂಥಾಲಯದ ಕಾರ್ಯದರ್ಶಿ ಆಶಾ ದಿಲೀಪ್ ಸ್ವಾಗತಿಸಿದರು. ಉಪಾಧ್ಯಕ್ಷ ರವೀಂದ್ರ ಮಾಂಡೇಲು ವಂದಿಸಿದರು. ಸದಸ್ಯೆ ಫೌಝಿಯಾಬಾನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು