ಶಾಂತಿಮೊಗರು ಸೇತುವೆ: 2 ವರ್ಷಗಳಾದರೂ ಪರಿಹಾರ ಬರಲೇ ಇಲ್ಲ !


Team Udayavani, Jul 7, 2017, 5:43 PM IST

Bridge-7-7.jpg

ಸವಣೂರು: ಹಲವು ದಶಕಗಳ ಬಹುಬೇಡಿಕೆಯೊಂದು ಶಾಂತಿಮೊಗರು ಸೇತುವೆ ನಿರ್ಮಾಣದೊಂದಿಗೆ ಈಡೇರಿದೆ. ಆದರೆ ಸೇತುವೆ ನಿರ್ಮಾಣಕ್ಕಾಗಿ ಭೂಮಿ ನೀಡಿದವರಿಗೆ ಲೋಕೋಪಯೋಗಿ ಇಲಾಖೆ ಪರಿಹಾರ ನೀಡಲು ಮೀನ ಮೇಷ ಎಣಿಸುತ್ತಿದೆ. ಬೆಳಂದೂರು ಜಿ.ಪಂ.ಕ್ಷೇತ್ರ ವ್ಯಾಪ್ತಿಯ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ಕುಮಾರಧಾರಾ ನದಿಗೆ ಅಡ್ಡಲಾಗಿ ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಸೇತುವೆ ನಿರ್ಮಾಣದ ಗುತ್ತಿಗೆ ಪಡೆದ ಕಂಪೆನಿ ಕಾಮಗಾರಿಯನ್ನು ಪೂರ್ಣಗೊಳಿಸಿದೆ. 

ದೊರಕಿಲ್ಲ ಪರಿಹಾರ!
ಸೇತುವೆಯೇನೋ ಉದ್ಘಾಟನೆಯ ಸಂಭ್ರಮದಲ್ಲಿದೆ. ಆದರೆ ಸೇತುವೆ ಬಳಿಯ ಕೃಷಿಕರಾದ ಬಾಲಚಂದ್ರ ನೂಜಿ, ಮೋಹಿನಿ ಪಿ. ಶೇಣವ, ದಿನೇಶ್‌ ಶರವೂರು, ವಿಜಯ ರಾಮಣ್ಣ ಗೌಡ ಎಂಬವರು ತಮ್ಮ ಅಡಿಕೆ, ರಬ್ಬರ್‌ ಮರವಿದ್ದ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಟ್ಟಿದ್ದರು. ರಸ್ತೆ ನಿರ್ಮಾಣದ ವೇಳೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ 6 ತಿಂಗಳೊಳಗೆ ಸೆಂಟ್ಸ್‌ಗೆ 18 ಸಾವಿರ ರೂ. ಗಳಂತೆ ಪರಿಹಾರ ಪಾವತಿಸುವುದಾಗಿಯೂ ಹೇಳಿದ್ದರು. ಆದರೆ, ಈವರೆಗೂ ಭೂಮಿ ಕಳಕೊಂಡವರಿಗೆ ಪರಿಹಾರಧನ ದೊರಕಿಲ್ಲ ಎನ್ನುತ್ತಾರೆ ಸಂತ್ರಸ್ತರು.

ಪರಿಹಾರ ನೀಡಿ
ಸಾರ್ವಜನಿಕ ಕಾರ್ಯಕ್ಕೆ ತೊಂದರೆಯುಂಟುಮಾಡಬಾರದೆಂದು ನಾವು ಲೋಕೋಪಯೋಗಿ ಇಲಾಖೆಯವರು ಹೇಳಿದ ಕೂಡಲೇ ಕೃಷಿ ಭೂಮಿ ಬಿಟ್ಟುಕೊಟ್ಟಿದ್ದೇವೆ. 2 ವರ್ಷಗಳು ಕಳೆದರೂ ಪರಿಹಾರ ನೀಡಿಲ್ಲ. ಕೂಡಲೇ ಪರಿಹಾರ ವಿತರಣೆಗೆ ಇಲಾಖೆ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಸಂತ್ರಸ್ತರು. ಬಾಲಚಂದ್ರ ನೂಜಿ 46 ಸೆಂಟ್ಸ್‌, ಮೋಹಿನಿ ಪಿ. ಶೇಣವ 34 ಸೆಂಟ್ಸ್‌, ದಿನೇಶ್‌ ಶರವೂರು 15.5 ಸೆಂಟ್ಸ್‌, ವಿಜಯ ರಾಮಣ್ಣ ಗೌಡ – 27 ಸೆಂಟ್ಸ್‌ ಜಾಗ ಬಿಟ್ಟುಕೊಟ್ಟಿದ್ದಾರೆ. ಪರಿಹಾರ ಧನ ನೀಡದೆ ನಾವು ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಬಾಲಚಂದ್ರ ತಿಳಿಸಿದರು.

ಹೀಗಿದೆ ಸೇತುವೆ
ಸೇತುವೆ 9 ಪಿಲ್ಲರ್‌ಗಳನ್ನು ಹೊಂದಿದ್ದು, ಸುಮಾರು 220 ಮೀ. ಉದ್ದ, 12 ಮೀ. ಅಗಲ, 18 ಮೀ. ಎತ್ತರವಿದೆ. 1 ಮೀ. ಅಗಲದ ಫ‌ುಟ್‌ಪಾತ್‌ನ್ನು ಹೊಂದಿದೆ. ಕುದ್ಮಾರು ಗ್ರಾಮದ ಬರೆಪ್ಪಾಡಿ ಹಾಗೂ ಆಲಂಕಾರು ಗ್ರಾಮದ ಶರವೂರನ್ನು ಇದು ಸಂಪರ್ಕಿಸುತ್ತದೆ.

ತೆಪ್ಪ, ದೋಣಿಯಾನ ನೇಪಥ್ಯಕ್ಕೆ
ಶಾಂತಿಮೊಗರು ದೇವಸ್ಥಾನದ ಬಳಿ ಶರವೂರು ದಾಟಲು ಈ ಹಿಂದೆ ತೆಪ್ಪ ಹಾಗೂ ದೋಣಿಯ ವ್ಯವಸ್ಥೆಯಿತ್ತು. ಮಳೆಗಾಲದಲ್ಲಿ ಅದು ಅನಿವಾರ್ಯ. ಇದೀಗ ಸೇತುವೆ ನಿರ್ಮಾಣದೊಂದಿಗೆ ದೋಣಿ ವ್ಯವಸ್ಥೆ ನೇಪಥ್ಯಕ್ಕೆ ಸರಿದಿದೆ.

ಸೇತುವೆಯಿಂದ ಪ್ರಯೋಜನ
ಮೈಸೂರು, ಮಡಿಕೇರಿ, ಸುಳ್ಯ, ಬೆಳ್ಳಾರೆ, ಸವಣೂರು, ಕಾಣಿಯೂರು ಭಾಗದವರಿಗೆ  ಧರ್ಮಸ್ಥಳ, ಉಪ್ಪಿನಂಗಡಿ, ಕೊಟ್ಟಿಗೆಹಾರ, ಮೂಡಿಗೆರೆ ಸಂಪರ್ಕಿಸಲು ಬಹಳ ಹತ್ತಿರವಾಗಲಿದೆ. ಕುದ್ಮಾರು, ಕಾಣಿಯೂರು, ಸವಣೂರು ಭಾಗದ ಜನರು ನಾಡಕಚೇರಿ ಕಡಬವನ್ನು ಸಂಪರ್ಕಿಸಲು ಹಾಗೂ ಕಡಬ, ಆಲಂಕಾರು, ಶರವೂರು ಭಾಗದ ಜನರು ಸವಣೂರು, ಪುತ್ತೂರು ಸಂಪರ್ಕಿಸಲು ಅನುಕೂಲವಾಗಲಿದೆ. ಆಲಂಕಾರು, ಶರವೂರು ಭಾಗದ ವಿದ್ಯಾರ್ಥಿಗಳು, ಸಾರ್ವಜನಿಕರು ಸುತ್ತು ಬಳಸಿ ತಾಲೂಕು ಕೇಂದ್ರ ಪುತ್ತೂರನ್ನು ಸಂಪರ್ಕಿಸುವ ಅನಿವಾರ್ಯತೆ ತಪ್ಪಲಿದೆ.

ಬೆಳವಣಿಗೆಗೆ ಪೂರಕ
ಸವಣೂರು, ಕುದ್ಮಾರು, ಆಲಂಕಾರು ಭಾಗದ ಸರ್ವತೋಮುಖ ಬೆಳವಣಿಗೆಗೆ ಈ ಸೇತುವೆ ಪೂರಕವಾಗಲಿದೆ. ಪ್ರಸಿದ್ಧ ಧಾರ್ಮಿಕ ಕೇಂದ್ರಗಳಾದ ಕುದ್ಮಾರು ಗ್ರಾಮದ ಶಾಂತಿಮೊಗರು ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಹಾಗೂ ಕೂರ ಮಸೀದಿಗೆ ಭೇಟಿ ನೀಡುವವರಿಗೂ ಸಹಕಾರಿಯಾಗಲಿದೆ.

ಪರಿಹಾರದ ಕುರಿತಾಗಿ ಲೋಕೋಪಯೋಗಿ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಈ ಸಂಬಂಧ ಬಿಲ್‌ ಪಾವತಿಗೆ ಸರಕಾರಕ್ಕೆ ಸಲ್ಲಿಸಲಾಗಿದೆ. ಪರಿಹಾರ ಬಂದ ಕೂಡಲೇ ಭೂಮಿ ನೀಡಿದವರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

– ಪ್ರವೀಣ್‌ ಕುಮಾರ್‌ 

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.