ಕೃತಕ ಬೆಲೆಯೇರಿಕೆ ವಿರುದ್ಧ ಕ್ರಮ: ಡಾಣ ಐಸಾಕ್‌


Team Udayavani, Jul 8, 2017, 2:45 AM IST

Thomas.jpg

ಕಾಸರಗೋಡು: ನೂತನ ಸರಕು ಸೇವಾ ತೆರಿಗೆ ಮಸೂದೆಯು ಕೇರಳದಲ್ಲಿ ದೊಡ್ಡ ಮಟ್ಟಿನ ಬೆಲೆಯೇರಿಕೆಗೆ ಕಾರಣವಾಗಿದೆ. ಜನರು ತೀವ್ರ ಶೋಷಣೆಗೊಳಗಾಗುತ್ತಿದ್ದಾರೆ ಎಂದು ಹಣಕಾಸು ಸಚಿವ ಡಾಣ ಥೋಮಸ್‌ ಐಸಾಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿ ಲಭಿಸುವ ದೂರುಗಳಲ್ಲಿ ತೆರಿಗೆ ಇಲಾಖೆಯು ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳುವುದು. ಕೃತಕ ಬೆಲೆಯೇರಿಕೆ ಸೃಷ್ಟಿಸಲಾಗುತ್ತಿದೆ ಎಂದು ಬಂದ ದೂರುಗಳ ಹಿನ್ನೆಲೆಯಲ್ಲಿ ಅಳತೆ ತೂಕ ವಿಭಾಗವು ರಾಜ್ಯದಾದ್ಯಂತ ಮಿಂಚಿನ ಪರಿಶೋಧನೆ ನಡೆಸಿದೆ.

ಇದೇ ಸಂದರ್ಭದಲ್ಲಿ ಜಿಎಸ್‌ಟಿಗೆ ಸಂಬಂಧಿಸಿದ ವಿವರಗಳನ್ನು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಐಸಾಕ್‌ ಅವರಿಗೆ ಪತ್ರ ಬರೆದಿದ್ದಾರೆ.

ಶುಲ್ಕ ದರದಲ್ಲಿ ಕಡಿತ ಉಂಟಾಗಿರುವುದರಿಂದ ಅದಕ್ಕನುಸಾರ ವಸ್ತುಗಳ ಗರಿಷ್ಠ ಬೆಲೆ(ಎಂಆರ್‌ಪಿ)ಯನ್ನು ಮರು ನಿರ್ಣಯಿಸಬೇಕೆಂದು ಇದೇ ಸಂದರ್ಭದಲ್ಲಿ ಅವರು ಒತ್ತಾಯಿಸಿದ್ದಾರೆ. ಅಮಿತ ಲಾಭವನ್ನು ತಡೆಗಟ್ಟುವ ಪ್ರಾಧೀಕಾರ, ರಾಜ್ಯ ಸ್ಕ್ರೀನಿಂಗ್‌ ಸಮಿತಿಯನ್ನು ಕೂಡಲೇ ರಚಿಸಬೇಕೆಂದೂ ತಿಳಿಸಲಾಗಿದೆ.

ಹೊಟೇಲ್‌ಗ‌ಳಲ್ಲಿನ ಬೆಲೆಯೇರಿಕೆಯನ್ನು ತಡೆಗಟ್ಟಲು ಹೊಟೇಲ್‌ ಆ್ಯಂಡ್‌ ರೆಸ್ಟೋರೆಂಟ್ಸ್‌ನ ಪದಾಧಿಕಾರಿಗಳೊಂದಿಗೆ ತಿರುವನಂತಪುರದಲ್ಲಿ ಮುಂದಿನ ಮಂಗಳವಾರ ಮಾತುಕತೆ ನಡೆಸಲು ತೀರ್ಮಾನಿಸಲಾಗಿದೆ. 

ಸಮಸ್ಯೆಯ ಗಂಭೀರತೆಯನ್ನು ಅವರಿಗೆ ಮನವರಿಕೆ ಮಾಡಿ ಕೊಡಲಾಗುವುದು. ಗ್ರಾಹಕರನ್ನು ಕೊಳ್ಳೆ ಹೊಡೆಯಲು ಯತ್ನಿಸುವವರನ್ನು ಹಿಂಜರಿಯುವಂತೆ ಮಾಡಲು ಎಲ್ಲಾ ರೀತಿಯ ದಾರಿಗಳನ್ನು ಹುಡುಕಲಾಗುವುದು. ತೆರಿಗೆ ವಿನಾಯಿತಿಯ ಪ್ರಯೋಜನವು ಸಾರ್ವಜನಿಕರಿಗೆ ದೊರಕಿಯೇ ಸಿದ್ಧವೆಂದು ಇದೇ ಸಂದರ್ಭದಲ್ಲಿ ಸಚಿವ ಥೋಮಸ್‌ ಐಸಾಕ್‌ ತಿಳಿಸಿದ್ದಾರೆ.

ಕೇರಳದ ಮಾದರಿಯಲ್ಲಿ ಬೆಲೆ ಏರುವುದು ಮತ್ತು ಇಳಿಯುವ ಉತ್ಪನ್ನಗಳ ಪಟ್ಟಿಯನ್ನು ಕೇಂದ್ರ ಸರಕಾರವು ಬಿಡುಗಡೆ ಮಾಡಬೇಕು. ಇದರಿಂದಾಗಿ ಜನಸಾಮಾನ್ಯರನ್ನು ಹಗಲು ದರೋಡೆ ಮಾಡುವುದು ತಪ್ಪಲಿದೆ ಎಂದು ಅವರು ತಿಳಿಸಿದರು.

ಜಿಎಸ್‌ಟಿ ಜಾರಿಗೆ ಬರುತ್ತಲೇ ಎಲ್ಲಾ ರಾಜ್ಯಗಳಲ್ಲೂ ಕೃತಕ ಬೆಲೆಯೇರಿಕೆ ಮಾಡಲಾಗಿದೆ. ಇದು ಗ್ರಾಹಕರನ್ನು ವಂಚಿಸಿ ಈ ರೀತಿಯಲ್ಲಿ ಜಿಎಸ್‌ಟಿಯ ಹೆಸರಲ್ಲಿ ಬೆಲೆಯೇರಿಕೆ ಮಾಡಲಾಗಿದೆ ಎಂದು ಅವರು ಬೊಟ್ಟು ಮಾಡಿದರು.

ಕಠಿಣ ಕ್ರಮ: ಸರಕು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಂಡ ಬಳಿಕ ಸಾಮಗ್ರಿಗಳಿಗೆ ಅನ್ಯಾಯಯುತವಾದ ಬೆಲೆ ಏರಿಸುವವರ ವಿರುದ್ಧ  ರಾಜ್ಯ ಸರಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿರುವನಂತಪುರದಲ್ಲಿ  ಎಚ್ಚರಿಕೆ ನೀಡಿದ್ದಾರೆ.

ದಿನಬಳಕೆ ಸಾಮಗ್ರಿಗಳಿಗೆ ದಿಢೀರನೆ ಬೆಲೆ ಹೆಚ್ಚಿಸಿರುವ ಕ್ರಮವನ್ನು  ಸರಕಾರವು ಗಂಭೀರವಾಗಿ ಪರಿಗಣಿಸಿದೆ. ಸಾರ್ವಜನಿಕರಿಗೆ ಆ ಬಗ್ಗೆ  ದೂರುಗಳಿದ್ದಲ್ಲಿ  ಅದನ್ನು  ಸ್ವೀಕರಿಸಲು ವ್ಯವಸ್ಥೆ  ಮಾಡಲಾಗಿದೆ. ಕೃತಕ ಬೆಲೆಯೇರಿಕೆಯನ್ನು  ಕೇಂದ್ರ ಸರಕಾರದ ಗಮನಕ್ಕೂ ತರಲಾಗುವುದು ಎಂದು ಮುಖ್ಯಮಂತ್ರಿ ನುಡಿದರು.

ಕೊಚ್ಚಿಯಲ್ಲಿ  ಮಲಯಾಳದ ಯುವನಟಿಯನ್ನು  ಅಪಹರಿಸಿ ಕಿರುಕುಳ ನೀಡಿದ ಪ್ರಕರಣದ ನಿಟ್ಟಿನಲ್ಲಿ  ಪೊಲೀಸ್‌ ತನಿಖೆ ಸರಿಯಾದ ದಾರಿಯಲ್ಲೇ ಸಾಗುತ್ತಿದೆ. ಆರೋಪಿಗಳನ್ನು  ಶೀಘ್ರದಲ್ಲೇ ಪೊಲೀಸರು ಬಂಧಿಸಲಿದ್ದಾರೆ. ತನಿಖೆಯ ದೃಷ್ಟಿಯಿಂದ ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ತಪ್ಪು  ಮಾಡಿದವರು ಎಷ್ಟೇ ದೊಡ್ಡ  ವ್ಯಕ್ತಿಯಾಗಿದ್ದರೂ ಶಿಕ್ಷೆ  ಅನುಭವಿಸಲೇ ಬೇಕು ಎಂದು ಪಿಣರಾಯಿ ವಿಜಯನ್‌ ಹೇಳಿದರು.

ಟಾಪ್ ನ್ಯೂಸ್

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಸ್ಪಂದನೆಗೆ ಮೆಚ್ಚುಗೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

Kasaragod ಸಹಿತ 3 ಜಿಲ್ಲೆಗಳ ವಿದ್ಯುತ್‌ ಸಮಸ್ಯೆ; 1,023 ಕೋಟಿ ರೂ. ವಿಶೇಷ ಪ್ಯಾಕೇಜ್‌

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

Madikeri ಅಪಾಯ ಆಹ್ವಾನಿಸುವ ಪ್ರವಾಸಿಗರ ಸೆಲ್ಫಿ , ರೀಲ್ಸ್‌ ಗೀಳು!

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಸ್ಪಂದನೆಗೆ ಮೆಚ್ಚುಗೆ

ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Code of Conduct: ಮೋದಿ ಧ್ಯಾನ ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.