ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ: ವಿಮಾಕಂತು ಪಾವತಿ ದಿನಾಂಕ ವಿಸ್ತರಣೆ
Team Udayavani, Jul 8, 2017, 2:00 AM IST
ಮಂಗಳೂರು: ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಬೆಳೆ ವಿಮೆ ಕಾರ್ಯಕ್ರಮವನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಕಾರ್ಯಕ್ರಮದಲ್ಲಿ 2017 ಮುಂಗಾರು ಹಂಗಾಮಿಗೆ ಅನ್ವಯಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಈ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2017 ನೇ ಮುಂಗಾರು ಹಂಗಾಮಿಗೆ ಅಡಿಕೆ ಮತ್ತು ಕರಿಮೆಣಸು ಬೆಳೆಗಳನ್ನು ಅಧಿಸೂಚಿಸಿ ಆದೇಶ ಹೊರಡಿಸಲಾಗಿದೆ. 2017ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಅಂತಿಮ ದಿನವನ್ನು ಜು.15 ಕ್ಕೆ ವಿಸ್ತರಿಸಲಾಗಿದೆ.
ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ಬ್ಯಾಂಕ್ಗಳಿಂದ (ರಾಷ್ಟ್ರೀಕೃತ ಬ್ಯಾಂಕ್/ ಖಾಸಗಿ/ ಸಹಕಾರಿ ಬ್ಯಾಂಕ್ಗಳು) ಬೆಳೆ ಸಾಲ ಪಡೆದಿರುವ ರೈತರಿಗೆ ಕಡ್ಡಾಯವಾಗಿರುತ್ತದೆ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿ ಸಲು ಅವಕಾಶ ಕಲ್ಪಿಸಲಾಗಿದೆ.
ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ, ಉಳಿತಾಯ ಖಾತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ, ಸ್ವಯಂ ಘೋಷಿಸಿ ದೃಢೀಕರಿಸಿದ ಜಮೀನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆಯಡಿ ವಿಮಾ ನಷ್ಟ ಪರಿಹಾರವನ್ನು adhar card enabled RTGS/NEFT ಮೂಲಕ ಇತ್ಯರ್ಥಪಡಿಸಲಾಗುವ ಕಾರಣ ಎಲ್ಲಾ ರೈತರು ಆಧಾರ್ ಕಾರ್ಡ್ ಮಾಹಿತಿಗಳನ್ನು ಒದಗಿಸಬೇಕು. ಈ ಯೋಜನೆಯನ್ನು ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿಸಲು ಉದ್ದೇಶಿಸಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ ಗ್ರಾಮೀಣ ಸಹಕಾರಿ ಬ್ಯಾಂಕ್/ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಥವಾ ಕೃಷಿ ಅಧಿಕಾರಿಗಳು/ ತಾಲೂಕು ಮಟ್ಟದ ಹಿರಿಯ ಸಹಾಯಕ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರು/ ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಹಾರ್ಟಿಕ್ಲಿನಿಕ್, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, (ಜಿಪಂ) ಮಂಗಳೂರು ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Ramanagara: ತಂದೆಯಿಂದಲೇ ಮಗನ ಕೊಲೆ.!
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು