ಈ ಆಸ್ಪತ್ರೆಗೆ ಬಂದ್ರೆ ಬರುತ್ತೆ ಮತ್ತಷ್ಟು ರೋಗ!


Team Udayavani, Jul 8, 2017, 3:24 PM IST

GUB-1.jpg

ಅಫಜಲಪುರ: ರೋಗ ವಾಸಿಯಾಗುತ್ತದೆ ಎಂದು ಸರ್ಕಾರಿ ಆಸ್ಪತ್ರೆಗೆ ಹಳ್ಳಿಗಾಡಿನ ಬಡ ಜನರು ಹಾತೊರೆದು ಬರುತ್ತಾರೆ. ಆದರೆ ಆಸ್ಪತ್ರೆಗೆ ಬಂದರೆ ಇಲ್ಲಿನ ಅವ್ಯವಸ್ಥೆ ಮತ್ತು ಕಲುಷಿತ ವಾತಾವರಣ ಕಂಡು ಹೌಹಾರಿ ಮತ್ತಷ್ಟು ರೋಗಗಳನ್ನು
ಅಂಟಿಸಿಕೊಳ್ಳುವಂತಾಗಿದೆ. ಗಬ್ಬೆದ್ದು ನಾರುವ ತಾಲೂಕು ಸರ್ಕಾರಿ ಆಸ್ಪತ್ರೆ, ಎಲ್ಲಿ ನೋಡಿದರಲ್ಲಿ ಕಸದ ರಾಶಿ, ಚರಂಡಿ ನೀರಿನಿಂದ
ಆವರಿಸಿಕೊಂಡಿದೆ.

ಇದು ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ತಾಪಂ, ಪುರಸಭೆ ಕಚೇರಿ ಮುಂಭಾಗದಲ್ಲಿರುವ ನೂರು ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವಾಸ್ತವ. ಇಲ್ಲಿಗೆ ದಿನಾಲು ಹಲವಾರು ಹಳ್ಳಿಗಳಿಂದ ನೂರಾರು ಜನ ರೋಗಿಗಳು ಬರುತ್ತಾರೆ. ಬರುವ ರೋಗಿಗಳಿಗೆ ಮೊದಲನೇಯದಾಗಿ ವೈದ್ಯರು ಇಲ್ಲದಿರುವ ಸಮಸ್ಯೆ ಎದುರಾಗುತ್ತದೆ. ನಂತರ ಸ್ವತ್ಛವಿಲ್ಲದ ಕೋಣೆಗಳು,
ಸ್ವತ್ಛವಿಲ್ಲದ ಶೌಚಾಲಯ, ಆಸ್ಪತ್ರೆ ಆವರಣ, ಪರಿಸರ ಹೀಗೆ ಎಲ್ಲವೂ ಗಲೀಜುಮಯ. ಹೀಗಾಗಿ ಇಲ್ಲಿ ರೋಗ ವಾಸಿಯಾಗುವ ಬದಲಿಗೆ ಹೆಚ್ಚಾಗುತ್ತಿದೆ.

ಆಸ್ಪತ್ರೆಯ ಡ್ರೆ„ನೇಜ್‌ ಒಡೆದು ಗಬ್ಬು ನಾತ: ನೂರು ಹಾಸಿಗೆಯ ಜರ್ಮನ್‌ ತಂತ್ರಜ್ಞಾನದ ಈ  ಆಸ್ಪತ್ರೆಯಲ್ಲಿನ ಡ್ರೈನೇಜ್‌ ವ್ಯವಸ್ಥೆ ಸಂಪೂರ್ಣ ಒಡೆದು ಎಲ್ಲೆಂದರಲ್ಲಿ ನೀರು ನಿಂತು ಗಬ್ಬು ನಾತ ಬೀರುತ್ತಿದೆ. ಸ್ನಾನದ ಕೋಣೆಗಳು ಮತ್ತು ಶೌಚಕ್ಕೆ ಬಳಸಿದ ನೀರು
ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲ. ಹೀಗಾಗಿ ಎಲ್ಲೆಂದರಲ್ಲಿ ನೀರಿನ ಪೈಪ್‌ಗ್ಳು ಒಡೆದು ಗಲೀಜು ನಿರ್ಮಾಣವಾಗಿದೆ. ಇದನ್ನು ನೋಡಿಕೊಳ್ಳಬೇಕಾಗಿರುವ ಡಿ ಗ್ರೂಪ್‌ ನೌಕರರು ಕಾಲಹರಣ ಮಾಡುತ್ತಿದ್ದಾರೆ. ಎಲ್ಲಿ ನೋಡಿದರೂ ಜಾಲಿ ಮುಳ್ಳು, ಕಸದ
ರಾಶಿ: ಆಸ್ಪತ್ರೆ ಆವರಣ ಸ್ವತ್ಛವಾಗಿದ್ದರೆ ಬರುವ ರೋಗಿಗಳ ರೋಗ ಮಾತ್ರೆ ಕೊಡುವ ಮೊದಲೇ ಅರ್ಧ ವಾಸಿಯಾಗಬೇಕು. ಆದರೆ ಇಲ್ಲಿಗೆ ಬರುವ ರೋಗಿಗಳಿಗೆ ಆಸ್ಪತ್ರೆಯ ಆವರಣ ನೋಡಿ ರೋಗ ಇನ್ನಷ್ಟು ಹೆಚ್ಚಾಗುತ್ತದೆ. ಆಸ್ಪತ್ರೆಯ ಆವರಣದಲ್ಲಿ ಎಲ್ಲಿ ನೋಡಿದರೂ ಬಳ್ಳಾರಿ ಜಾಲಿ ಬೆಳೆದಿದೆ. ಅಲ್ಲದೆ ಕಸದ ರಾಶಿ ಕಾಣುತ್ತದೆ. ಆಸ್ಪತ್ರೆಯ ಆವರಣ ಮತ್ತು ಒಳಾಂಗಣ ಸ್ವತ್ಛಗೊಳಿಸುವ ಗೋಜಿಗೆ ಸಂಬಂಧ ಪಟ್ಟವರು ಹೋಗಿಲ್ಲ.

ಮುರಿದ ವಿದ್ಯುತ್‌ ಕಂಬ: ಆಸ್ಪತ್ರೆಯ ಆವರಣದಲ್ಲಿ ರಾತ್ರಿ ವೇಳೆ ಬೆಳಕು ಕಾಣುವ ದೃಷ್ಟಿಯಿಂದ ವಿದ್ಯುತ್‌ ಕಂಬಗಳು ಮತ್ತು ಮಕೂರಿ ಬಲ್ಬ್ಗಳನ್ನು ಅಳವಡಿಸಲಾಗಿದೆ. ಅವು ಮುರಿದು ಬಿದ್ದಿವೆ. ರಾತ್ರಿ ವೇಳೆ ಆಸ್ಪತ್ರೆಯ ಹಿಂಭಾಗದಲ್ಲಂತೂ ಭಯಾನಕವಾಗಿ ಕಾಣುತ್ತದೆ. ಕತ್ತಲೆ ಆವರಿಸಿ ಜನ ಓಡಾಡದಂತಾಗುತ್ತಿದೆ. ಒಟ್ಟಿನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳು ಕಾಗದಲ್ಲಿವೆ. ಆದರೆ ವಾಸ್ತವದಲ್ಲಿ ಇಲ್ಲದಂತಾಗಿದೆ. ಇದರಿಂದ ಬರುವ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಸಂಬಂಧ ಪಟ್ಟವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇಲ್ಲಿನ ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿದೆ. ಹಂದಿಗಳ ವಾಸಸ್ಥಾನ; ಮಳೆ ಬಂದರೆ ಸಾಕು ಆಸ್ಪತ್ರೆ ಆವರಣದಲ್ಲಿ ಮಳೆ ನೀರು ಚರಂಡಿ ನೀರಿನೊಂದಿಗೆ ಸೇರಿ ನಿಲ್ಲುತ್ತದೆ. ಇದರಲ್ಲಿ ಹಂದಿಗಳು ಒದ್ದಾಡಿ ಮತ್ತಷ್ಟು ವಾತಾವರಣ ಕಲುಷಿತಗೊಳಿಸುತ್ತವೆ. ಹಂದಿಗಳನ್ನು ಹೊರ ಹಾಕಿ ಮಳೆ ಮತ್ತು ಚರಂಡಿ ನೀರು ನಿಲ್ಲದಂತೆ ಮಾಡಲು ಯಾರೂ ಯತ್ನಿಸಿಲ್ಲ.

ಸಮಸ್ಯೆಗೆ ಪುರಸಭೆ ಸ್ಪಂದಿಸಿಲ್ಲ
ತುರ್ತಾಗಿ ಡಿ ಗ್ರೂಪ್‌ ನೌಕರರ ಸಭೆ ಕರೆದು ಮೇಲಾಧಿಕಾರಿಗೆ ಮಾಹಿತಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುತ್ತದೆ.
ಆಸ್ಪತ್ರೆಯ ಮುಂಭಾಗದ ಚರಂಡಿ ಸ್ವತ್ಛ ಮಾಡುವಂತೆ ಪುರಸಭೆಗೆ ಎರಡು ಬಾರಿ ಮನವಿ ಮಾಡಲಾಗಿದೆ ಅವರು ಸ್ಪಂದಿಸಿಲ್ಲ.
ಮಹಾಂತಪ್ಪ ಹಾಳಮಳ್ಳಿ, ಪ್ರಭಾರಿ ಆಡಳಿತ ವೈದ್ಯಾಧಿಕಾರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.