ಕುದ್ಮಾರಿನಲ್ಲಿ ಶಾಂತಿಯುತ ಪ್ರತಿಭಟನೆ


Team Udayavani, Jul 11, 2017, 2:30 AM IST

1007svnr4ph.jpg

ಶಿಕ್ಷ‌ಕರ ನಿಯೋಜನೆ ರದ್ದುಗೊಳಿಸುವಂತೆ ಆಗ್ರಹ 

ಸವಣೂರು: ಬೆಳಂದೂರು ಗ್ರಾ.ಪಂ. ಗೊಳಪಟ್ಟ  ಕುದ್ಮಾರು ಶಾಲೆಯಿಂದ ಶಿಕ್ಷಕಿಯೋರ್ವರನ್ನು ಪಳ್ಳತ್ತಾರು ಶಾಲೆಗೆ ನಿಯೋಜನೆಗೊಳಿಸಿರುವುದನ್ನು ಹಾಗೂ ಶಿಕ್ಷಣಾಧಿಕಾರಿಗಳ  ವರ್ತನೆಯನ್ನು ಖಂಡಿಸಿ ಕುದ್ಮಾರು ಶಾಲೆಯಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಪೋಷಕರು, ಹಿರಿಯ ವಿದ್ಯಾರ್ಥಿಗಳು ಜು.10ರಂದು ಶಾಂತಿಯುತ ಪ್ರತಿಭಟನೆ ನಡೆಸಿದರು.

ಈ ಹಿಂದೆ ನಡೆದ ಶಾಲಾಭಿವೃದ್ದಿ ಸಮಿತಿ ಹಾಗೂ ಪೋಷಕರ ಸಭೆಯಲ್ಲಿ ನಿರ್ಧರಿಸಿದಂತೆ ಜು.10ರಂದು ಯಾವುದೇ ವಿದ್ಯಾರ್ಥಿಗಳನ್ನು ಪೋಷಕರನ್ನು ಶಾಲೆಗೆ ಕಳುಹಿಸದೇ ಪ್ರತಿಭಟನೆ ನಡೆಸಿದ್ದರು.ಶಾಲಾ ಆವರಣದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಮಂದಿ ಜಮಾಯಿಸಿದ್ದರು.

ಕೆಲ ಹೊತ್ತಿನಲ್ಲಿ ಪ್ರತಿಭಟನಾ ಸ್ಥಳಕ್ಕೆ ಶಿಕ್ಷಣಾಧಿಕಾರಿಗಳ ಸೂಚನೆಯ ಮೇರೆಗೆ ತಾಲೂಕು ದೈಹಿಕ ಶಿಕ್ಷಣ ಪರಿವೀûಾ ಣಾಧಿಕಾರಿ ಸುಂದರ ಗೌಡ ಆಗಮಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಆದರೆ ಅವರ ಯಾವುದೇ ಮಾತಿಗೆ ಪ್ರತಿಭಟನಕಾರರು ಮಣಿಯಲಿಲ್ಲ.

ಅನಂತರ ಬೆಳ್ಳಾರೆ ಠಾಣಾ ಎಸ್‌ಐ ಎಂ.ವಿ. ಚೆಲುವಯ್ಯನವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ  ದೈಹಿಕ ಶಿಕ್ಷಣ ಪರಿವೀûಾಣಾಧಿಕಾರಿ ಸುಂದರ ಗೌಡರು ಶಿಕ್ಷಕರನ್ನು ನೀಡುವ ಕುರಿತು ಭರವಸೆ ನೀಡಿದರು. 

ಭರವಸೆಗೆ ಮಣಿಯದ ಷೋಷ ಕರು ಶಿಕ್ಷಕರ ನೇಮಕವಾದ ಬಳಿಕ ವಷ್ಟೇ ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗುವುದು. ಅಲ್ಲಿ ತನಕ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೊಡುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಶಿಕ್ಷಣಾಧಿಕಾರಿಯವರು ಕುದ್ಮಾರಿನ ಎಸ್‌ಡಿಎಂಸಿಯವರನ್ನು ಅನಾಗರಿಕರು ಎಂದು ಹೇಳಿರುವುದು ಖಂಡನೀಯ. ಕನಿಷ್ಠ ಪಕ್ಷ ಸೌಜನ್ಯತೆಯಿಂದಾದರೂ ವರ್ತಿಸಿ ಸಮಸ್ಯೆ ಬಗೆಹರಿಸಬಹುದಿತ್ತು. ಅವರ ಅಹಂ, ದರ್ಪಕ್ಕೆ ಕುದ್ಮಾರು ಶಾಲೆಯ ಮಕ್ಕಳನ್ನು ಬಲಿಪಶು ಮಾಡಲು ನಾವು ಬಿಡುವುದಿಲ್ಲ. ಶಿಕ್ಷಣಾಧಿಕಾರಿ ಅವರು ಪತ್ರಿಕಾ ಪ್ರಕಟನೆೆ ನೀಡಿ ಕುದ್ಮಾರಿನಲ್ಲಿ  ತಾನು ಅನಾಗರಿಕರು ಎಂದು ಹೇಳಿರುವುದು ನಿಜ ಎಂಬುದನ್ನು  ಸಮರ್ಥಿಸಿರುವುದು ಅವರ ಮೂರ್ಖತನವನ್ನು ತೋರಿಸುತ್ತದೆ. ಶಿಕ್ಷಣಾಧಿಕಾರಿಯವರು ತನ್ನ ಅಹಂನಿಂದ ಶಿಕ್ಷಣ ಇಲಾಖೆಯನ್ನೇ ಹಾಳುಗೆಡವುತ್ತಿದ್ದಾರೆ ಎಂದು ಶಾಲಾ ಹಿರಿಯ ವಿದ್ಯಾರ್ಥಿ ಪ್ರವೀಣ್‌ ಕುಮಾರ್‌ ಕಡೆಂಜಿಗುತ್ತು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಗಳ ಸಾಥ್‌
ಪ್ರತಿಭಟನೆಯಲ್ಲಿ ಎಸ್‌ಡಿಎಂಸಿ, ಷೋಷಕರು ಮಾತ್ರವಲ್ಲದೇ ಗ್ರಾಮಸ್ಥರು ಪಾಲ್ಗೊಂಡು ಸುಮಾರು ಇನ್ನೂರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ಸ್ಕಂದಶ್ರೀ ಯುವಕ ಮಂಡಲ, ಸ್ನೇಹಿತರ ಬಳಗ ಹಾಗೂ ರೆಡ್‌ ಬಾಯ್ಸ ಸೇರಿದಂತೆ ಕುದ್ಮಾರಿನ ಅನೇಕ ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಸಾಥ್‌ ನೀಡಿದರು. ಶಿಕ್ಷಕರ ನೇಮಕವಾಗುವ ತನಕ ಪ್ರತಿಭಟನೆಯಿಂದ ವಿಚಲಿತರಾಗುವ ಪ್ರಶ್ನೆಯೇ ಇಲ್ಲ, ಬಿಇಒ, ಸಿಆರ್‌ಪಿ ಶಾಲೆಗೆ ಭೇಟಿ ನೀಡಬೆಕೆಂದು ಸಭೆಯಲ್ಲಿ ಒಕ್ಕೊರಲಿನ ಆಗ್ರಹ ಕೇಳಿಬಂತು.

ಕುದ್ಮಾರು ಶಾಲೆಯಲ್ಲಿ  ಇಷ್ಟೆಲ್ಲ ಸಮಸ್ಯೆ ತಲೆದೋರಲು ಸಿಆರ್‌ಪಿ ವೆಂಕಟೇಶ್‌ ಅನಂತಾಡಿ ಯವರೇ ನೇರ ಕಾರಣ. ಪಳ್ಳತ್ತಾರು ಶಾಲೆಯಲ್ಲಿ ಶಿಕ್ಷಕರ ಕೊರತೆ ಯಿದ್ದರೂ ಅವರಿಗೆ ಪಳ್ಳತ್ತಾರು ಶಾಲೆಯಲ್ಲಿ ಕಾರ್ಯನಿರ್ವಹಿಸಲು ಇಷ್ಟವಿಲ್ಲ, ಹೀಗಾಗಿ ಅವರು ಮೇಲಾಧಿಕಾರಿ ಗಳಿಗೆ ತಪ್ಪು ಮಾಹಿತಿ ನೀಡಿ, ಇಲ್ಲಿನ ಶಾಲೆಗಳು ಅವನತಿ ಹೊಂದುವಂತೆ ಮಾಡುತ್ತಾರೆ ಎಂದು ಸಿಆರ್‌ಪಿಯವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾ ಯಿತು.ಸಿಆರ್‌ಪಿ ಅವರು ಕ್ಲಸ್ಟರ್‌ ವ್ಯಾಪ್ತಿಯ ಶಾಲೆಗಳಿಗೆ ಸೇತುಬಂಧವಾಗಿ ಕಾರ್ಯ ನಿರ್ವಹಿಸಬೇಕೆ ಹೊರತು ಕಂದಕ ಸೃಷ್ಟಿಸುವ ಕೆಲಸ ಮಾಡಬಾರದು.ಸಿಆರ್‌ಪಿ ಅವರು ತಮ್ಮ ವ್ಯಾಪ್ತಿಯ ಶಾಲೆಯಲ್ಲಿ ಇಷ್ಟು ದೊಡ್ಡ ಸಮಸ್ಯೆಯಿದ್ದರೂ ಬೇಟಿ ನೀಡಿಲ್ಲ ಯಾಕೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಲಿಕಲಿಯದ್ದೇ ಗಲಿಬಿಲಿ
1ರಿಂದ 3ರ ತನಕ ಸುಮಾರು 72 ಮಕ್ಕಳಿದ್ದು ಇದೀಗ ಕೇವಲ ಇಬ್ಬರೇ ಶಿಕ್ಷಕರು ನಿರಂತರವಾಗಿ ನಲಿಕಲಿ ತರಗತಿ ಯಲ್ಲಿ ತೊಡಗಿಸಿಕೊಳ್ಳುವಂತಾಗಿದೆ. ಇದು ನಲಿಕಲಿಯನ್ನು ಗಲಿಬಲಿಯಾಗಿಸಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಲತಾ ಪಿ. ಗೌಡ ಹೇಳಿದರು.ಪಳ್ಳತ್ತಾರು ಶಾಲೆಗೆ ನಿಯೋಜಿಸಿದ ಶಿಕ್ಷಕಿಯ ನಿಯೋಜನೆಯನ್ನು ರದ್ದುಗೊಳಿಸುವ ತನಕ ತಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ.ನಮ್ಮ ತಾಳ್ಮೆಯನ್ನೇ ದೌರ್ಭಲ್ಯ ಎಂದು ಭಾವಿಸುವುದು ಬೇಡ.ಶಿಕ್ಷಣಾಧಿಕಾರಿ ಕುದ್ಮಾರು ಶಾಲೆಯ ಕುರಿತು ಉದ್ದಟತನ ತೋರುವುದು ಸರಿಯಲ್ಲ ಎಂದರು.

ಮಾತುಕತೆಯ ವೇಳೆ ಜಿಪಂ ಸದಸ್ಯೆ ಪ್ರಮೀಳಾ ಜನಾರ್ಧನ, ಬೆಳಂದೂರು ಗ್ರಾಪಂ ಅಧ್ಯಕ್ಷೆ ಉಮೇಶ್ವರಿ ಅಗಳಿ, ಎಪಿಎಂಸಿ ನಿರ್ದೇಶಕ ದಿನೇಶ್‌ ಮೆದು, ಬೆಳಂದೂರು ಪಂಚಾಯಿತಿ ಉಪಾಧ್ಯಕ್ಷ ಹರೀಶ್‌ ಕೆರೆನಾರು, ಸದಸ್ಯರಾದ ಸಂಜೀವ ಕೂರ, ಮೇದಪ್ಪ ಕೆಡೆಂಜಿ, ಕಾರ್ಯದರ್ಶಿ ಜಯಪ್ರಕಾಶ್‌ ಅಲೆಕ್ಕಾಡಿ, ಎಸ್‌ಡಿಎಂಸಿ ಉಪಾಧ್ಯಕ್ಷ ಮೇದಪ್ಪ ಕುವೆತ್ತೋಡಿ, ಯುವಕ ಮಂಡಲದ ಅಧ್ಯಕ್ಷ ದೇವರಾಜ್‌ ನೂಜಿ ,ಶಾಲಾ ಮುಖ್ಯಶಿಕ್ಷಕಿ ಜೂಲಿಯಾನ ಡಿಸೋಜ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.