ಕೋಚ್‌ ಆಯ್ಕೆ ಮುಂದೂಡಿಕೆ


Team Udayavani, Jul 11, 2017, 3:05 AM IST

ganguli.jpg

ಮುಂಬಯಿ: ಬಹು ಕಾತುರದಿಂದ ಕಾಯಲ್ಪಡುತ್ತಿದ್ದ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಯ್ಕೆಯನ್ನು ಬಿಸಿಸಿಐ ಮುಂದೂಡಿದೆ. ಕೋಚ್‌ ಹುದ್ದೆಗೆ ಆಕಾಂಕ್ಷಿಗಳಾಗಿದ್ದ ರವಿಶಾಸಿŒ, ವೀರೇಂದ್ರ ಸೆಹವಾಗ್‌, ಟಾಮ್‌ ಮೂಡಿ, ರಿಚರ್ಡ್‌ ಫೈಬಸ್‌ ಸಂದರ್ಶನ ನಡೆಸಿದರೂ ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯ ಕೇಳಿ ಮುಂದುವರಿಯಲು ಬಿಸಿಸಿಐ ತೀರ್ಮಾನಿಸಿದೆ. ಜು.26ರೊಳಗೆ ಕೋಚ್‌ ಹೆಸರನ್ನು ಪ್ರಕಟಿಸುವುದಾಗಿ ಬಿಸಿಸಿಐನ ಉನ್ನತ ಸಲಹಾ ಸಮಿತಿ ಸದಸ್ಯ ಸೌರವ್‌ ಗಂಗೂಲಿ ತಿಳಿಸಿದ್ದಾರೆ.

ಕೋಚ್‌ ಆಯ್ಕೆಯನ್ನು ಬಿಸಿಸಿಐ ಗಂಭೀರ ವಾಗಿ ಪರಿಗಣಿಸಿದೆ. ಕೋಚ್‌ ಹೇಗೆ ಕೆಲಸ ಮಾಡುತ್ತಾ ರೆನ್ನುವುದನ್ನು ಕೊಹ್ಲಿ ಅರ್ಥ ಮಾಡಿಕೊಳ್ಳಬೇಕು, ಈ ಬಗ್ಗೆ ಅವರಿಗೆ ಮನದಟ್ಟು ಮಾಡಿಸುವುದಾಗಿ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಿನ್ನಾಭಿಪ್ರಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಕೊಹ್ಲಿಗೆ  ನೀಡಿದ್ದಾರೆ. 
ಸೌರವ್‌ ಗಂಗೂಲಿ, ವಿವಿಎಸ್‌ ಲಕ್ಷ್ಮಣ್‌ ಕೋಚ್‌ ಆಕಾಂಕ್ಷಿಗಳ ಸಂದರ್ಶನ ನಡೆಸಿದರು. ಸಚಿನ್‌ ತೆಂಡುಲ್ಕರ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ್ದರು. ಬಿಸಿಸಿಐ ಸಲಹಾ ಸಮಿತಿ ಸಂದರ್ಶನ ಪ್ರಕ್ರಿಯೆಯನ್ನು ಮುಗಿಸಿದರೂ ತೀರ್ಮಾನಕ್ಕೆ ಬರಲು ಇನ್ನಷ್ಟು ಸಮಯ ಬೇಕೆಂಬ ಅಭಿಪ್ರಾಯಕ್ಕೆ ಬಂದಿದೆ. 
2019ರವರೆಗೆ ಕೋಚ್‌ ಅವಧಿ: ಸದ್ಯ ಆಯ್ಕೆಯಾಗುವ ಕೋಚನ್ನು ದೀರ್ಘ‌ ಕಾಲದವರೆಗೆ ಮುಂದುವರಿಸಲು ಬಿಸಿಸಿಐ ಬಯಸಿದೆ. 2019ರವರೆಗೆ ಅವರನ್ನು ಮುಂದುವರಿಸಲು ಬಯಸಿದೆ. ಈ ಮತ್ತೆ ಮತ್ತೂಂದು ಭಿನ್ನಾಭಿ ಪ್ರಾಯಕ್ಕೆ ಅದು ಸಿದ್ಧವಾಗಿಲ್ಲ. ಕೇವಲ ಆರೇ ತಿಂಗಳಲ್ಲಿ ಸಂಬಂಧ ಮುರಿದು ಬೀಳುವುದು ನಮಗೆ ಇಷ್ಟವಿಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.
ಸಂದರ್ಶನದಲ್ಲಿ ಕೊಹ್ಲಿ ಮೂಗು ತೂರಿಸಿಲ್ಲ: ಹಲವು ಆಕಾಂಕ್ಷಿಗಳ ಸಂದರ್ಶನ ನಡೆದರೂ ನಾಯಕ ವಿರಾಟ್‌ ಕೊಹ್ಲಿ ಈ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದರು. ಈ ಸಂಬಂಧ ಅವರಿಗೆ ಮೆಚ್ಚುಗೆ ಸೂಚಿಸಬೇಕು ಸೌರವ್‌ ಗಂಗೂಲಿ ಹೇಳಿದ್ದಾರೆ. ಈ ಹಿಂದೆ ಕೊಹ್ಲಿ ತರಬೇತಿ ಪ್ರಕ್ರಿಯೆಯಲ್ಲಿ ಕೈಯಾಡಿಸಿದ್ದಾರೆ, ರವಿಶಾಸಿŒ ಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿತ್ತು.
ಭಿನ್ನಮತವೇ ಮುಂದೂಡಿಕೆಗೆ ಕಾರಣ?
ಕೋಚ್‌ ಆಯ್ಕೆ ಮುಂದೂಡಲು ಕಾರಣವೇ ನೆಂಬ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ ಸಚಿನ್‌, ಸೌರವ್‌, ಲಕ್ಷ್ಮಣ್‌ ನೇತೃತ್ವದ ಆಯ್ಕೆ ಸಮಿತಿಗೆ ಈ ಬಗ್ಗೆ ಕೆಲವು ಗೊಂದಲಗಳಿವೆ. ಆದ್ದರಿಂದ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಊಹಿಸಲಾಗಿಲ್ಲ. ಎಂದಿನಂತೆ ರವಿಶಾಸಿŒ ಆಯ್ಕೆಗೆ ಸಚಿನ್‌ ತೆಂಡುಲ್ಕರ್‌ ಬೆಂಬಲ ನೀಡಿದ್ದರೆ, ಈ ವಿಚಾರದಲ್ಲಿ ಗಂಗೂಲಿ ತುಸು ಅಸಮ್ಮತಿ ಹೊಂದಿದ್ದಾರೆ. ಆದರೆ ರವಿಶಾಸಿŒ ಬದಲು ಯಾರನ್ನು ಆಯ್ಕೆ ಮಾಡಬೇಕೆಂಬ ಇನ್ನೂ ಗೊಂದಲವುಳಿದಿದೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.