ಹದಗೆಟ್ಟ ಕಾನೂನು ಸುವ್ಯವಸ್ಥೆ: ಕೋಟ


Team Udayavani, Jul 11, 2017, 3:45 AM IST

KOTA-10.jpg

ರಾಜ್ಯದಲ್ಲಿ  12 ಹಿಂದೂ ಕಾರ್ಯಕರ್ತರ ಹತ್ಯೆ
ಉಡುಪಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಗೃಹ ಸಚಿವರ ರಾಜೀ ನಾಮೆ ಯಿಂದ ಆ ಖಾತೆ ಸಿಎಂ ಅವರಲ್ಲಿಯೇ ಇದ್ದು ಅತಂತ್ರ ವಾಗಿದೆ. ರಾಜ್ಯದಲ್ಲಿ 2013ರಿಂದ 2017ರ ಮಾ. 31ರ ವರೆಗೆ 9 ಬಿಜೆಪಿ ಕಾರ್ಯಕರ್ತರು, ಮೂವರು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಆನಂತರವೂ ಹತ್ಯೆಗಳು ಮುಂದುವರಿದಿವೆ ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಸೋಮವಾರ ತನ್ನ ಉಡುಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.2013ರಿಂದ 2017ರ ಮಾ. 31ರ ವರೆಗೆ ರಾಜ್ಯದಲ್ಲಿ 23 ಬಿಜೆಪಿ ಕಾರ್ಯಕರ್ತರು ಹಾಗೂ 17 ಹಿಂದೂ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ. ಇಂದಿಗೂ ಅದು ಮುಂದುವರಿಯುತ್ತಲೇ ಇದೆ. ಆರೆಸ್ಸೆಸ್‌ನ ಸಾಮಾನ್ಯ ಕಾರ್ಯಕರ್ತ ಶರತ್‌ ಮಡಿವಾಳ ಅವರ ಹತ್ಯೆಯಾಗಿದೆ. ಅವರ ಮನೆಗೂ ಭೇಟಿ ನೀಡಿ ಪರಿಸ್ಥಿತಿ ಅರಿತುಕೊಂಡಿದ್ದೇನೆ. ಹತ್ಯೆ ನಡೆದು ಹಲವು ದಿನಗಳು ಉರುಳಿದರೂ ಪ್ರಮುಖ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರಿಂದ ಸಾಧ್ಯವಾಗಿಲ್ಲ ಎಂದವರು ತಿಳಿಸಿದರು.

ಕಲ್ಲು ತೂರಾಟದಲ್ಲಿ ಕೇರಳಿಗರು
ಶರತ್‌ ಮೃತದೇಹ ಕೊಂಡೊಯ್ಯುವ ವೇಳೆ ಮೆರ ವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರುವ ದೃಶ್ಯಾ ವಳಿ ಗಳು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿದೆ. ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದ್ದು, ಮಾಹಿತಿಗಳ ಪ್ರಕಾರ, ಅವ ರಲ್ಲಿ 6 ಮಂದಿ ಕೇರಳಿಗರು ಎನ್ನುವುದು ಗೊತ್ತಾಗಿದೆ. ಮಂಗಳೂರಿ ನಲ್ಲಿ ಅಶಾಂತಿ ಸೃಷ್ಟಿಸಲು ಹೊರರಾಜ್ಯದ ಯುವಕ ರನ್ನು ಕರೆತಂದಿರುವುದು ಇಲ್ಲಿ ಸಾಬೀತಾಗುತ್ತಿದೆ. ಪರಿಸ್ಥಿತಿ ಇಷ್ಟು ಗಂಭೀರ ವಾಗಿದ್ದರೂ ರಾಜ್ಯ ಸರಕಾರ ಮಾತ್ರ ತಲೆಕೆಡಿಸಿ ಕೊಂಡಿಲ್ಲ. ಶರತ್‌ ಕೊಲೆಗಾರರ ಬಂಧಿಸಲು ಅಶಕ್ತವಾದ ಈ ರಾಜ್ಯ ಸರಕಾರದ ಸಿಎಂ ಸಿದ್ದರಾಮಯ್ಯ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ರಮಾನಾಥ ರೈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೋಟ ಆಗ್ರಹಿಸಿದರು.

ಕಾಂಗ್ರೆಸ್‌ ಆಡಳಿತ – 
ಅತೀ ಹೆಚ್ಚು  ಗಲಭೆ

ಬಿಜೆಪಿ ಆಡಳಿತವಿದ್ದ   2011,  12ರಲ್ಲಿ 38 ಕೋಮು ಗಲಭೆ ನಡೆದಿದ್ದು,  80 ಪ್ರಕರಣ ದಾಖಲಾಗಿದ್ದವು. 2013ರಿಂದ 2017 ಮಾ. 31ರ ವರೆಗೆ ಕಾಂಗ್ರೆಸ್‌ ಆಡಳಿತದಲ್ಲಿ 98 ಕೋಮುಗಲಭೆಗಳು ನಡೆದಿದ್ದು, 511 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರಕಾರದ ಅಂಕಿ-ಅಂಶಗಳೇ ತಿಳಿಸುತ್ತವೆ. ಕಾಂಗ್ರೆಸ್‌ ಆಡಳಿತದಲ್ಲಿ ಕೋಮು ಸಂಘರ್ಷಗಳು ಹೆಚ್ಚುತ್ತಲಿವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.