ಶಾಸ್ತ್ರೀ ಅಧಿಕಾರಕ್ಕೆ ಕತ್ತರಿ ಹಾಕಿದರಾ ಗಂಗೂಲಿ?


Team Udayavani, Jul 13, 2017, 3:50 AM IST

ganguly.jpg

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ನೂತನ ಕೋಚ್‌ ಎಂದು ರವಿಶಾಸ್ತ್ರೀ ಹೆಸರನ್ನು ಪ್ರಕಟಿಸುವ ಮುನ್ನ ಬಿಸಿಸಿಐನಲ್ಲಿ ಭಾರೀ ವಾದವಿವಾದಗಳು ನಡೆದಿದ್ದವಾ? ಹೌದು ಎನ್ನುತ್ತವೆ ಕೆಲ ಮೂಲಗಳು. ಮಂಗಳವಾರ ರಾತ್ರಿ ಕೋಚ್‌ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವ ಮುನ್ನ ಬಿಸಿಸಿಐ ಸೃಷ್ಟಿಸಿದ ಅವಾಂತರಗಳನ್ನು ಗಮನಿಸಿದರೆ ಇದನ್ನು ಹೌದು ಎಂದು ಒಪ್ಪಿಕೊಳ್ಳದೇ ವಿಧಿಯಿಲ್ಲ.

ಮೂಲಗಳ ಪ್ರಕಾರ, ರವಿಶಾಸ್ತ್ರೀಯನ್ನು ಆಯ್ಕೆ ಮಾಡಲು ಬಿಸಿಸಿಐ ಸಲಹಾ ಸಮಿತಿ ಸದಸ್ಯ ಗಂಗೂಲಿಗೆ ಇಷ್ಟವಿರಲಿಲ್ಲವಂತೆ. ಸಲಹಾ ಸಮಿತಿಯ ಮತ್ತೂಬ್ಬ ಸದಸ್ಯ ಸಚಿನ್‌ ತೆಂಡುಲ್ಕರ್‌, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಒತ್ತಾಸೆಯೇ ಶಾಸ್ತ್ರೀ ಆಯ್ಕೆಗೆ ಕಾರಣ ಎನ್ನಲಾಗಿದೆ.

ರವಿಶಾಸ್ತ್ರೀಯನ್ನು ಒಪ್ಪಿಕೊಳ್ಳುವಂತೆ ಸಚಿನ್‌, ಗಂಗೂಲಿಯ ಮನವೊಲಿಸಿದ ರಂತೆ. ತಂಡದ ಆಟಗಾರರು, ನಾಯಕ ಕೊಹ್ಲಿ ಶಾಸ್ತ್ರೀಯನ್ನು ಬಯಸುತ್ತಿದ್ದಾರೆ. ಆದ್ದರಿಂದ ಶಾಸ್ತ್ರೀಯನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಸಚಿನ್‌ ಹೇಳಿದ್ದನ್ನು ಗಂಗೂಲಿ ಮಾನ್ಯ ಮಾಡಿದರು. ಮತ್ತೂಂದು ಕಡೆ ವಿರಾಟ್‌ ಕೊಹ್ಲಿ, ರವಿಶಾಸ್ತ್ರೀಯೇ ಬೇಕೆಂದು ಬಲವಾಗಿ ಹಠ ಹಿಡಿದ ಕಾರಣ ಶಾಸ್ತ್ರೀಯನ್ನು ಒಪ್ಪಿಕೊಳ್ಳುವುದು ಅನಿವಾರ್ಯವಾಯಿತು ಎನ್ನಲಾಗಿದೆ.

ರವಿಶಾಸ್ತ್ರೀ ಅಧಿಕಾರಕ್ಕೆ ಕತ್ತರಿ: ಆದರೆ ರವಿಶಾಸ್ತ್ರೀಯನ್ನು ಒಪ್ಪಿಕೊಳ್ಳುವುದಕ್ಕೂ ಮುನ್ನ ಗಂಗೂಲಿ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೌಲಿಂಗ್‌ ಕೋಚ್‌ ಆಗಿ ಭರತ್‌ ಅರುಣ್‌ ಬೇಕೆಂಬ ರವಿಶಾಸ್ತ್ರೀ ಬೇಡಿಕೆಯನ್ನು ಒಪ್ಪಿಲ್ಲ. ಬದಲಿಗೆ ಜಹೀರ್‌ ಖಾನ್‌ರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ಹಠ ಹಿಡಿದಿದ್ದಾರೆ. ಇದಕ್ಕೆ ಬಿಸಿಸಿಐ ಒಪ್ಪಿದೆ. ಆಗ ಗಂಗೂಲಿಯು ತಣ್ಣಗಾಗಿದ್ದಾರೆ. ಮತ್ತೂಂದು ರಾಹುಲ್‌ ದ್ರಾವಿಡ್‌ರನ್ನು ವಿದೇಶ ಪ್ರವಾಸದ ಕೆಲ ನಿರ್ದಿಷ್ಟ ಸಂದರ್ಭದಲ್ಲಿ ಬ್ಯಾಟಿಂಗ್‌ ಸಲಹಾಗಾರರನ್ನಾಗಿ ನೇಮಿಸಲಾಗಿದೆ. ಇವೆಲ್ಲ ಮೂಲಕ ರವಿಶಾಸ್ತ್ರೀ ಅಧಿಕಾರಕ್ಕೆ ಕತ್ತರಿ ಹಾಕಲಾಗಿದೆ ಎನ್ನುವುದು ಊಹೆಗಳು.

2016ರಲ್ಲೂ ಕೋಚ್‌ ಹುದ್ದೆಗೆ ಸಂದರ್ಶನ ನಡೆದಾಗ ರವಿಶಾಸ್ತ್ರೀ ಸ್ಪರ್ಧೆ ಯಲ್ಲಿದ್ದರು. ಆಗಲೂ ಗಂಗೂಲಿಯ ವಿರೋಧ ಕಾರಣ ಅನಿಲ್‌ ಕುಂಬ್ಳೆ ಆಯ್ಕೆಯಾಗಿದ್ದರು. ಇದಾದ ನಂತರ ರವಿಶಾಸ್ತ್ರೀ ಮತ್ತು ಗಂಗೂಲಿ ಸಂಬಂಧ ತೀವ್ರ ಹದ ಗೆಟ್ಟಿತ್ತು. ಈ ಬಾರಿ ಕೋಚ್‌ ಹುದ್ದೆಗೆ ಬಿಸಿಸಿಐ ಅರ್ಜಿ ಕರೆದಿದ್ದಾಗ ಆರಂಭದಲ್ಲಿ ರವಿಶಾಸ್ತ್ರೀ ಕಣಕ್ಕಿಳಿದಿರಲಿಲ್ಲ. ಅನಿಲ್‌ ಕುಂಬ್ಳೆ ವಿದಾಯದ ಬಳಿಕ ಬಿಸಿಸಿಐ ಗಡುವನ್ನು ವಿಸ್ತರಿಸಿತು. ಆಗ ರವಿಶಾಸ್ತ್ರೀ ಅರ್ಜಿ ಹಾಕಿದರು. ಅಂತಿಮವಾಗಿ ಕೋಚ್‌ ಹುದ್ದೆ ಪಡೆಯಲು ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.