ಆಧುನಿಕ ಕೃಷಿ ಪದ್ಧತಿ ಅನುಸರಿಸಿ: ಡಾ| ರಾಜಕುಮಾರ


Team Udayavani, Jul 13, 2017, 9:53 AM IST

13-GUB-1.jpg

ನಾರಾಯಣಪುರ: ನೀರಿನ ಮಿತ ಬಳಕೆಗೆ ಆದ್ಯತೆ ನೀಡಿ, ಆಧುನಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಮಾಳನೂರು ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ| ರಾಜಕುಮಾರ ಹೇಳಿದರು.

ಪಟ್ಟಣದ ಶ್ರೀ ಯಲ್ಲಾಲಿಂಗ ದೇವಸ್ಥಾನದ ಮಂಗಲ ಮಂಟಪದಲ್ಲಿ ಬುಧವಾರ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ 2017-18 ನೇ ಸಾಲಿನ ಕೃಷಿ ಅಭಿಯಾನ, ರೈತರೊಂದಿಗೆ ವಿಜ್ಞಾನಿಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೀರಿನ ಮಿತ ಬಳಕೆಗೆಂದು ಇರುವ ತುಂತುರು, ಹನಿ ನೀರಾವರಿ ಪದ್ಧತಿಗಳನ್ನು ಅನುಸರಿಸಿ ಭೂಮಿ ಸವಳು
ಜವಳು ಆಗುವುದನ್ನು ತಡೆಯಬೇಕು. ಇದಕ್ಕಾಗಿ ತಜ್ಞರ ಮಾರ್ಗದರ್ಶನದಲ್ಲಿ ಬಸಿಗಾಲುವೆ ನಿರ್ಮಿಸಿ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ರೈತನು ಜಮೀನಿನಲ್ಲಿನ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದರಿಂದ ಭೂಮಿಯಲ್ಲಿ ಮಣ್ಣಿನ ಫಲವತ್ತತೆ ಅರಿತು ಮಿತವಾದ ರಸಾಯನಿಕಗಳನ್ನು ಬಳಕೆ ಮಾಡಿಕೊಂಡು ಕೃಷಿ ಮಾಡಬಹುದು, ಸಾವಯವ ಕೃಷಿಗೆ ಮಹತ್ವ ನೀಡಿ, ಭೂಮಿ ಫಲವತ್ತತೆಗೆ ನೈಸರ್ಗಿಕ ಎರೆಹುಳು ಹಾಗೂ ಹಸಿರೆಲೆ ಗೊಬ್ಬರವನ್ನು ಯಥೇಚ್ಚವಾಗಿ ಬಳಸಿ ಶ್ರಮವಹಿಸಿ ದುಡಿದರೆ ನಾನಾ ಮಾದರಿಯ ಬೆಳೆಗಳನ್ನು ಬೆಳೆಯಬಹುದು ಎಂದು ವಿವರಿಸಿದರು.  

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ಮಾತನಾಡಿ, ಕೃಷಿ ಇಲಾಖೆ ಮಳೆಯಾಶ್ರಿತ ವಲಯದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಇಲಾಖೆ ವತಿಯಿಂದ ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ ಎನ್ನುವ ಘೋಷಣೆಯೊಂದಿಗೆ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷೆ ಅನಸೂಬಾಯಿ ಚವ್ವಾಣ ಉದ್ಘಾಟಿಸಿದರು, ಗ್ರಾ.ಪಂ ಅಧ್ಯಕ್ಷ  ಧೀರಪ್ಪ ರಾಠೊಡ ಅಧ್ಯಕ್ಷತೆ ವಹಿಸಿದ್ದರು, 
ಉಪತಹಶೀಲ್ದಾರ ಮಹಾದೇವಪ್ಪಗೌಡ ಬಿರಾದಾರ, ಜಿ.ಪಂ. ಸದಸ್ಯ ಎನ್‌.ಡಿ. ನಾಯಕ, ಗ್ರಾಪಂ ತಾ.ಪಂ ಸದಸ್ಯ ಮೋಹನ
ಪಾಟೀಲ, ಬಾಲಾಜಿ ಚವ್ವಾಣ, ಶೇಖ ಅಹ್ಮದ, ಕೃಷಿ ಅಧಿಕಾರಿಗಳಾದ ಎಸ್‌.ಬಿ. ತೆಗ್ಗಿ, ಪಶುಸಂಗೋಪನಾ ಅಧಿ ಕಾರಿ ಡಾ|
ಮೆಹಬೂಬಸಾಬ ಖಾಜಿ, ತೋಟಗಾರಿಗೆ ಅಧಿಕಾರಿ ಶಿವಾನಂದ, ಬಸಮ್ಮ, ಎಸ್‌.ಬಿ.ಪಾಲ್ಕೆ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ,
ಪಶುಸಂಗೋಪನೆ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಬಾಪೂಜಿ ಶಾಲೆ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು,
ಎಸ್‌.ಆರ್‌.ಚಳಗೇರಿ ಸ್ವಾಗತಿಸಿದರು, ಆರ್‌.ಎಸ್‌. ಸರ್ಜಾಪುರ ನಿರೂಪಿಸಿದರು. ಕೃಷಿ ಅಧಿ ಕಾರಿ ಚನ್ನಪ್ಪಗೌಡ ಗೌಡರ
ವಂದಿಸಿದರು.

ವಿವಿಧ ಇಲಾಖೆಗಳಿಂದ ಕೃಷಿಯಂತ್ರಗಳ ಪ್ರದರ್ಶನ: ಇಲಾಖೆಯ ನಡೆ ರೈತರ ಮನೆ ಕಡೆ ಕಾರ್ಯಕ್ರಮದಡಿ ರೈತರ ಕೃಷಿಗೆ ಉಪಯೋಗವಾಗುವ ವಿವಿಧ ಯಂತ್ರಗಳ  ಪ್ರದರ್ಶನ ಹಾಗೂ ವಸ್ತು ಪ್ರದರ್ಶನ ವಿಶೇಷ ಗಮನ ಸೆಳೆಯಿತು. ನಾರಾಯಣಪುರಕ್ಕೂ ರೈತ ಸಂಪರ್ಕ ಕೇಂದ್ರ ನೀಡಿ ನಾರಾಯಣಪುರ ಸುತ್ತಮುತ್ತ ಅನೇಕ ಹಳ್ಳಿಗಳಿವೆ. ಇಲ್ಲಿಯೇ ರೈತ ಸಂಪರ್ಕ ಕೇಂದ್ರವಾದರೆ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ. ರೈತರಿಗೆ ಇಲಾಖೆಯಿಂದ ವಿವಿಧ ಯೋಜನೆಗಳ ಮಾಹಿತಿ ದೊರೆಯುತ್ತದೆ. ಈ
ನಿಟ್ಟಿನಲ್ಲಿ ಕೃಷಿ ಅಧಿ ಕಾರಿಗಳು ಯೋಚಿಸಬೇಕು.
ಸೋಮನಗೌಡ, ರೈತ ಸಂಘದ ಮುಖಂಡ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.