ಮಹಿಳೆಯರಿಗೆ, ಮಕ್ಕಳಿಗೆ ಹೊಸ ಈಜು ಕೊಳ ನಿರ್ಮಾಣಕ್ಕೆ ಚಿಂತನೆ


Team Udayavani, Jul 14, 2017, 2:05 AM IST

Swimming-13-7.jpg

ಮಹಾನಗರ: ನಗರದ ಲೇಡಿಹಿಲ್‌ ಸಮೀಪದ ಹ್ಯಾಟ್‌ಹಿಲ್‌ನ ಮಹಿಳಾ ವನದಲ್ಲಿ ಮಹಿಳೆಯರಿಗೆ ಹಾಗೂ ಕ್ರೀಡಾಪಟುಗಳಿಗೆ ಪೂರಕವಾಗುವ ಸುಸಜ್ಜಿತ ಹೊಸ ಈಜುಕೊಳವನ್ನು ತನ್ನ ಅವಧಿಯಲ್ಲಿ ಪ್ರಾರಂಭಿಸುವ ಚಿಂತನೆ ಇದೆ ಎಂದು ಮೇಯರ್‌ ಕವಿತಾ ಸನಿಲ್‌ ಹೇಳಿದರು. ಪೂನಾದಲ್ಲಿ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರೀಯ ದಾಖಲೆ ಮಾಡಿರುವ ಮಂಗಳಾ ಈಜು ಕ್ಲಬ್‌ನ ಎಸ್‌. ಆರ್‌. ರಚನಾ ರಾವ್‌ ಅವರಿಗೆ ನಗರದ ಕಾರ್ಪೊರೇಷನ್‌ ಈಜುಕೊಳದ ಸಭಾಂಗಣದಲ್ಲಿ  ನಡೆದ ಸಮ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಚನಾ ರಾವ್‌ ಅವರು ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿದ್ದು, ಇನ್ನಷ್ಟು ಬಾಲಕಿಯರು ಉತ್ತಮ ಸಾಧನೆ ಮಾಡಿದಾಗ ಮಹಿಳಾ ಕ್ರೀಡಾಪಟುವಾಗಿರುವ ನನಗೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು. ಪಾಲಿಕೆಯ ಮುಖ್ಯ ಸಚೇತಕ ಶಶಿಧರ್‌ ಹೆಗ್ಡೆ ಮಾತನಾಡಿ, ಪ್ರತಿಯೊಂದು ಯಶಸ್ವಿ  ಬಾಲಕಿಯರ ಹಿಂದೆ ಹೆತ್ತವರ ಪ್ರೋತ್ಸಾಹವಿರುತ್ತದೆ. ಹೆತ್ತವರು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಕೃಷ್ಣಪ್ರಸಾದ್‌ ರೈ ಮಾತನಾಡಿ, ತಮ್ಮ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿದ ಈ ಬಾಲಕಿಯರಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದ್ದೇವೆ ಹಾಗೂ ನಿರಂತರ ಆರ್ಥಿಕ ಸಹಾಯ ಮಾಡುತ್ತೇವೆ ಎಂದು ಹೇಳಿದರು. ಯುವ ಸಬಲೀಕರಣ ಜಿಲ್ಲಾ ಯುವಜನ ಕ್ರೀಡಾಧಿಕಾರಿ ಪ್ರದೀಪ್‌ ಡಿ’ಸೋಜಾ ಉಪಸ್ಥಿತರಿದ್ದರು.

ಸಾಧಕರಿಗೆ ಸಮ್ಮಾನ
ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ ಮಂಗಳಾ ಕ್ಲಬ್ಬಿನ ಸಾನ್ಯಾ ಡಿ. ಶೆಟ್ಟಿ, ಆರಾಧನಾ ಬೇಕಲ್‌ ಹಾಗೂ ರಾಜ್ಯ ಮಟ್ಟದಲ್ಲಿ ಪದಕ ವಿಜೇತ ಸ್ಮೃತಿ ಹಾಗೂ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ ಜೈಹಿಂದ್‌ ಈಜು ಕ್ಲಬ್‌ನ ಆಲಿಸ್ಟರ್‌  ಗೋ ಇವರನ್ನು ಮಂಗಳ ಈಜು ಕ್ಲಬ್‌ನ ವತಿಯಿಂದ ಸಮ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷ  ಪ್ರಮುಖ್‌ ರೈ ಸ್ವಾಗತಿಸಿದರು. ಮುಖ್ಯ ಈಜು ತರಬೇತುದಾರರಾದ ಲೋಕರಾಜ್‌ ವಿಟ್ಲ, ಕ್ಲಬ್‌ನ ಕಾರ್ಯದರ್ಶಿ ಶಿವಾನಂದ ಗಟ್ಟಿ, ಕ್ರೀಡಾಧಿಕಾರಿ ಲಿಲ್ಲಿ ಪಾçಸ್‌, ಈಜುಕೊಳದ ವ್ಯವಸ್ಥಾಪಕ ರಮೇಶ್‌ ಕುಮಾರ್‌ ಉಪಸ್ಥಿತರಿದ್ದರು. ಸಚಿತಾ ನಂದಗೋಪಾಲ ಕಾರ್ಯಕ್ರಮ ನಿರೂಪಿಸಿ, ರಾಧೇಶ್‌ ಶೆಣೈ ವಂದಿಸಿದರು.

ಟಾಪ್ ನ್ಯೂಸ್

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

8-

Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.