ಕಾರಾಗೃಹ ರಹಸ್ಯ ಭೇದಿಸಲು ತನಿಖೆ: ಪೊಲೀಸ್‌ ಇಲಾಖೆ ಬಗ್ಗೆ ಸಿಎಂ ಬೇಸರ


Team Udayavani, Jul 14, 2017, 3:00 AM IST

DIG.jpg

ಬೆಂಗಳೂರು: ಕಾರಾಗೃಹ ಡಿಜಿಪಿ ಸತ್ಯನಾರಾಯಣ ರಾವ್‌ ವಿರುದ್ಧ ಡಿಐಜಿ ರೂಪಾ ಮಾಡಿರುವ ಆರೋಪ ಪೊಲೀಸ್‌ ಇಲಾಖೆಯಷ್ಟೇ ಅಲ್ಲದೆ ಸರಕಾರದ ಮಟ್ಟದಲ್ಲೂ ಸಂಚಲನ ಮೂಡಿಸಿದೆ. ನಿವೃತ್ತಿಗೆ 18 ದಿನ ಬಾಕಿ ಇರುವಾಗ ಸತ್ಯನಾರಾಯಣ ರಾವ್‌ ವಿರುದ್ಧ ಕೇಳಿ ಬಂದಿರುವ ಆರೋಪ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಗುರುವಾರ ಗೃಹ ಇಲಾಖೆ ಅಧಿ ಕಾರಿಗಳ ಜತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಿಐಜಿ ರೂಪಾ ವರದಿ ಆಧಾರದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸುವಂತೆ ಆದೇಶ ನೀಡಿದರು.

ಇದೇ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಯ ವಿದ್ಯಮಾನಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಒಟ್ಟಾರೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆದಷ್ಟು ಶೀಘ್ರ ವರದಿ ಸಲ್ಲಿಸಬೇಕು ಎಂದು ಸೂಚಿಸಿದರ‌ು.

ಪರಪ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸುತ್ತಿರುವ ಎಐಎಡಿಎಂಕೆ (ಅಮ್ಮ ಬಣ) ಪ್ರಧಾನ ಕಾರ್ಯ ದರ್ಶಿ ವಿ.ಕೆ. ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹ ಡಿಜಿಪಿ ಸತ್ಯನಾರಾಯಣ 2 ಕೋಟಿ ರೂ. ಲಂಚ ಪಡೆದಿದ್ದಾರೆ. ಛಾಪಾ ಕಾಗದ ಆರೋಪಿ ತೆಲಗಿಗೆ ಕಾರಾಗೃಹ ನಿಯಮ ಉಲ್ಲಂ ಸಿ ಆತಿಥ್ಯ ನೀಡ ಲಾಗುತ್ತಿದೆ ಎಂಬ ಅಂಶ ಸಹಿತ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದ್ದು ಕ್ರಮ ಕೈಗೊಳ್ಳಬೇಕು ಎಂದು ಡಿಐಜಿ ಡಿ. ರೂಪಾ ವರದಿ ನೀಡಿದ್ದರು. ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿಗೆ ವರದಿ ರವಾನಿಸಿ ಪ್ರತಿಯನ್ನು ಡಿಜಿಪಿ ಸತ್ಯನಾರಾಯಣ ರಾವ್‌ ಅವರಿಗೂ ಕಳುಹಿಸಿದ್ದರು.

ಸತ್ಯನಾರಾಯಣ ರಾವ್‌ ಲೋಕಾಯುಕ್ತ  ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ ಸಂದರ್ಭ ಸರಕಾರ ಮತ್ತು ಅವರ ನಡುವೆ ಆಂತರಿಕವಾಗಿ ಉಂಟಾಗಿದ್ದ ಸಂಘರ್ಷಕ್ಕೂ  ಈಗಿನ ಪ್ರಕರಣಕ್ಕೂ ತಳುಕು ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

ಡಿಐಜಿ ರೂಪಾ ನೀಡಿರುವ ವರದಿಯಲ್ಲಿ ಉಲ್ಲೇಖವಾದ ಎರಡು ಕೋಟಿ ರೂ. ಲಂಚ ಪಡೆದ ಆರೋಪ ನಿರಾಧಾರ. ಇನ್ನು 18 ದಿನಗಳಲ್ಲಿ ಸೇವೆಯಿಂದ ನಿವೃತ್ತಿಯಾಗಲಿದ್ದೇನೆ. ನನ್ನ ವೃತ್ತಿ ಜೀವನದಲ್ಲಿ ಬಿಸ್ಕೇಟ್‌ ಕೂಡ ಮುಟ್ಟಿದವನಲ್ಲ. ಪ್ರಚಾರ ಪಡೆಯಲು ನಿರಾಧಾರ ಆರೋಪ ಮಾಡಬಾರದು. ಸೂಕ್ತ ದಾಖಲೆ ಗಳಿದ್ದರೆ ಬಹಿರಂಗಪಡಿಸಲಿ.
– ಸತ್ಯನಾರಾಯಣ ರಾವ್‌, ಡಿಜಿಪಿ

ಸತ್ಯನಾರಾಯಣ ರಾವ್‌ ಸವಾಲಿಗೆ ತನಿಖೆ ಆಗಲಿ. ನಾನು ಕಾರಾಗೃಹಕ್ಕೆ ಭೇಟಿ ನೀಡಿ ದಾಗ ತೆಲಗಿಯ ಅನಾಯಾಸ ಓಡಾಟ,  ಶಶಿಕಲಾರಿಗೆ ಪ್ರತ್ಯೇಕ ಅಡುಗೆ ಕೋಣೆ ಮಾಡಿಕೊಟ್ಟಿರು ವುದನ್ನು ನೋಡಿದ್ದೇನೆ.  ಶಶಿಕಲಾ ಅವರಿಗೆ ವಿಐಪಿ ಆತಿಥ್ಯ ನೀಡುವ ಸಲುವಾಗಿ 2 ಕೋಟಿ ರೂ. ಲಂಚ  ಪಡೆದಿರುವ ಆರೋಪದ ಬಗ್ಗೆ  ಖುದ್ದು ಡಿಜಿಪಿ ಅವರಿಗೆ ವರದಿ ನೀಡಿದ್ದೇನೆ.
– ರೂಪಾ, ಡಿಐಜಿ

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.