ಮಡಿವಾಳ ಸಮಾಜದಿಂದ ಶರತ್ಗೆ ಶ್ರದ್ಧಾಂಜಲಿ
Team Udayavani, Jul 14, 2017, 2:35 PM IST
ದಾವಣಗೆರೆ: ಬಂಟ್ವಾಳದ ಬಿ.ಸಿ. ರೋಡ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳಗೆ ಗುರುವಾರ ಮಡಿಕಟ್ಟೆ
(ಧೋಬಿಘಾಟ್) ಯುವಕರ ಸಂಘ ಹಾಗೂ ಮಡಿವಾಳ ಸಮುದಾಯದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಜಿಲ್ಲಾ ಪಂಚಾಯತಿ ಕಚೇರಿ ಎದುರಿರುವ ಮಡಿಕಟ್ಟೆಯಲ್ಲಿ ಜಮಾಯಿಸಿದ ಸಮುದಾಯ ಬಾಂಧವರು, ಶರತ್ ಮಡಿವಾಳರ ಕಗ್ಗೊಲೆ
ಕೃತ್ಯವನ್ನ ತೀವ್ರವಾಗಿ ಖಂಡಿಸಿ, ಅಮಾಯಕ ಶರತ್ ಮಡಿವಾಳರ ಕೊಲೆಗಡುಕರಿಗೆ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ
ಸರ್ಕಾರವನ್ನು ಒತ್ತಾಯಿಸಿದರು.
ನಂತರ ಮಾತನಾಡಿದ ನಗರಪಾಲಿಕೆ ಸದಸ್ಯ, ಮಡಿಕಟ್ಟೆ ಯುವಕರ ಸಂಘದ ಮುಖಂಡ ಆವರಗೆರೆ ಎಚ್.ಜಿ. ಉಮೇಶ್, ದೇಶದಲ್ಲಿ ವಿನಾಕಾರಣ ಆಮಾಯಕರ ಹತ್ಯೆ ನಡೆಯುತ್ತಿವೆ. ಒಂದು ಸಂಘಟನೆಯ ಕಾರ್ಯಕರ್ತನಾಗಿದ್ದ ಶರತ್ ಮಡಿವಾಳರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಅವರ ಲಾಂಡ್ರಿಯಲ್ಲೇ ಹತ್ಯೆ ಮಾಡಿದ್ದಾರೆ. ಇದು ನಿಜಕ್ಕೂ ನಾಗರೀಕ ಸಮಾಜ ತಲೆತಗ್ಗಿಸುವ
ವಿಚಾರ. ರಾಜ್ಯ ಸರ್ಕಾರ ಕೊಲೆ ರಾಜಕೀಯ ಮಾಡುವುದನ್ನು ಬಿಟ್ಟು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿ ಸಿ ಸೂಕ್ತ ಕಾನೂನು ಕ್ರಮ
ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಶರತ್ ಮಡಿವಾಳ ಹತ್ಯೆಯ ವಿಷಯವನ್ನು ವಿವಿಧ ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವಕ್ಕಾಗಿ ಬಳಸಿಕೊಳ್ಳುತ್ತಿರುವುದು ಅಮಾನವೀಯ ವರ್ತನೆ. ಘಟನೆಯಲ್ಲಿ ಯಾವುದೇ ಪಕ್ಷ, ಸಂಘಟನೆಯ ವ್ಯಕ್ತಿಗಳು ಪಾಲ್ಗೊಂಡಿದ್ದರೂ ಸರ್ಕಾರ ಯಾವುದೇ ಒತ್ತಡಕ್ಕೆ ಒಳಗಾಗದೇ ತನಿಖೆ ನಡೆಸಿ, ತಪ್ಪಿತಸ್ಥರ ಬಂಧಿಸಿ, ಗಡೀಪಾರು
ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಮಡಿವಾಳ ಸಮಾಜದ ಕಾರ್ಯಾಧ್ಯಕ್ಷ ಎಂ. ನಾಗೇಂದ್ರಪ್ಪ ಮಾತನಾಡಿ, ಶರತ್ ಕುಟುಂಬಕ್ಕೆ 25ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಸದಸ್ಯನಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಮನವಿ ಮಾಡಿದರು. ನಗರಪಾಲಿಕೆ ಅ ಧಿಕಾರಿ ಕರಿಯಪ್ಪ,
ಮಂಜುನಾಥ್ ಅವರಗೊಳ್ಳ, ಮಡಿಕಟ್ಟೆ ಯುವಕರ ಸಂಘದ ಪದಾಧಿ ಕಾರಿಗಳಾದ ಎಂ. ಅಡಿವೆಪ್ಪ, ಎಂ.ಕೆ. ಬಸವರಾಜ್, ಎಸ್.
ನಿಂಗರಾಜ್, ಆರ್.ಎಂ. ರವಿ, ಡೈಮಂಡ್ ಮಾಲತೇಶ್, ಎಚ್. ಮಂಜುನಾಥ್, ಹರೀಶ್ ಹಾಗೂ ಎಂ.ವೈ. ಸತೀಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !