‘4 ವರ್ಷಗಳಲ್ಲಿ 12 ಕೋ.ರೂ.ಅಭಿವೃದ್ಧಿ ಕಾರ್ಯ’


Team Udayavani, Jul 15, 2017, 2:05 AM IST

Punacha-GP-Sabhe-14-7.jpg

ವಿಟ್ಲ: ಊರಿನ ಅಭಿವೃದ್ಧಿ ದೃಷ್ಟಿಯಲ್ಲಿ ನೀಡಿದ ಪ್ರತಿಯೊಬ್ಬರ ಅಹವಾಲುಗಳನ್ನು ಸ್ವೀಕರಿಸಿ ಪಕ್ಷಾತೀತವಾಗಿ ಅನುದಾನ ಹಂಚಿಕೆ ಮಾಡಲಾಗಿದೆ. ಪುಣಚ ಗ್ರಾಮಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 12 ಕೋ.ರೂ.ಗಳಿಗಿಂತಲೂ ಅಧಿಕ ಅನುದಾನವನ್ನು ಮೂಲ ಸೌಕರ್ಯಗಳೊಂದಿಗೆ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಒದಗಿಸಲಾಗಿದೆ ಎಂದು ಪುತ್ತೂರು ಶಾಸಕಿ ಟಿ. ಶಕುಂತಳಾ ಶೆಟ್ಟಿ  ಹೇಳಿದ್ದಾರೆ. ಅವರು ಶುಕ್ರವಾರ ಪುಣಚ ಗ್ರಾ.ಪಂ. ಸಭಾಭವನದಲ್ಲಿ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದರು.

ಈ ಬಾರಿ ಕುಳ ಮತ್ತು ಪೆರುವಾಯಿ ಗ್ರಾಮಗಳಿಗೆ ಸುವರ್ಣ ಗ್ರಾಮ ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಬದನಾಜೆ-ಕುಂಡಡ್ಕ -ಪರಿಯಾಲ್ತಡ್ಕ ರಸ್ತೆಗೆ ವನ್‌ಟೈಮ್‌ ಫಂಡ್‌ ಅನುದಾನ 2.20 ಕೋ.ರೂ. ಮಂಜೂರಾಗಿದ್ದು ಎರಡೂ ಭಾಗಗಳಿಂದ ಆಗಸ್ಟ್‌ ತಿಂಗಳ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ. ಶಾಸಕತ್ವದ ಅವಧಿಯಲ್ಲಿ ನಾಗರಿಕರ ಬಹುತೇಕ ಬೇಡಿಕೆ ಈಡೇರಿಸಿದ್ದೇನೆ ಎಂಬ ಸಂತೃಪ್ತಿಯಿದೆ ಎಂದರು.

ತೆರಿಗೆ ವಂಚಕರಿಗೆ ದಂಡ ವಿಧಿಸಿ
ಶ್ರೀಮಂತರು ತೆರಿಗೆ ವಂಚನೆ ಮಾಡುತ್ತಿದ್ದಾರೆ. ಬಡವರು ತೆರಿಗೆ ಪಾವತಿಸುತ್ತಿದ್ದಾರೆ. ತೆರಿಗೆ ಪಾವತಿಸಲು ತಡವಾದರೆ ಅವರಿಗೆ ದಂಡ ವಿಧಿಸುವ ನಿರ್ಣಯ ಕೈಗೊಳ್ಳಬೇಕು ಎಂದು ಪುಣಚ ಗ್ರಾಮಸ್ಥರು ಆಗ್ರಹಿಸಿದರು.

ಕಸದ ರಾಶಿ
ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ಕಸದ ರಾಶಿ ಬಿದ್ದಿದೆ. ಪೇಟೆಯ ಅಂಗಡಿಗಳ ಮಾಲಕರು ಕಸಗಳನ್ನು ರಸ್ತೆ ಬದಿಯಲ್ಲಿ ಎಸೆಯುತ್ತಿದ್ದಾರೆ. ಈ ಬಗ್ಗೆ ಪಂಚಾಯತ್‌ ಗಮನ ಹರಿಸಿ, ಅಂಗಡಿ ಬದಿಗಳಲ್ಲಿ ಬಕೆಟ್‌ ವ್ಯವಸ್ಥೆ ಮಾಡಬೇಕು. ಅವುಗಳನ್ನು ಮೀರಿದವರ ಮೇಲೆ ಕ್ರಮ ಜರಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಪುಣಚ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರನ್ನು ನಿಯೋಜಿಸಬೇಕು. ರಕ್ತ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು. ಆಸ್ಪತ್ರೆಯ ಅಭಿವೃದ್ಧಿಗಾಗಿ ಸಮಿತಿ ರಚಿಸಬೇಕು ಎಂದು ನಾಗರಿಕರು ಆಗ್ರಹಿಸಿದರು.

ದೀರ್ಘ‌ ಮಾತಿಗೆ ಆಕ್ಷೇಪ
ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ಪುಣಚ ಗ್ರಾಮದ ಅಭಿವೃದ್ಧಿಗೆ ನೀಡಿದ ಅನುದಾನದ ಬಗ್ಗೆ ವಿವರಣೆ ನೀಡುತ್ತಿದ್ದಾಗ ಸಭೆಯಿಂದ ಅಸಮಾಧಾನದ ಮಾತು ಕೇಳಿ ಬಂತು. ಆಗ ಶಾಸಕರು ‘ಕ್ಷೇತ್ರದ ಶಾಸಕಿಯಾಗಿ ಗ್ರಾಮಸಭೆಯಲ್ಲಿ ಭಾಗವಹಿಸಿ ಗ್ರಾಮದಿಂದ ಬಂದ ಬೇಡಿಕೆಗಳನ್ನು ಪ್ರಸ್ತಾಪಿಸುತ್ತಾ, ಅನುದಾನ ಹಂಚಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ ಹೊರತು ಇತರ ಯಾವುದೇ ವಿಚಾರಗಳನ್ನು ಪ್ರಸ್ತಾಪಿಸಿಲ್ಲ’ ಎಂದು ಸಮರ್ಥಿಸಿಕೊಂಡರು.

ಬೆಳೆವಿಮೆ ಮಾಹಿತಿ ನೀಡಿ
ಬೆಳೆವಿಮೆ ಬಗ್ಗೆ ತೋಟಗಾರಿಕಾ ಇಲಾಖೆಯವರು ಯಾವುದೇ ಮಾಹಿತಿ ನೀಡುತ್ತಿಲ್ಲ. ಅವರು ಗ್ರಾಮ ಸಭೆಗೆ ಗೈರು ಹಾಜರಾಗುತ್ತಿದ್ದಾರೆ. ಮಳೆಗಾಲದಲ್ಲಿ ಈ ಭಾಗದಲ್ಲಿ ಹಲವು ತೋಟಗಳು ಕೊಳೆರೋಗಕ್ಕೆ ತುತ್ತಾಗುತ್ತಿವೆ ಎಂದು ನಾಗರಿಕರು ಆರೋಪಿಸಿದರು.

ಪುಣಚ ಗ್ರಾ.ಪಂ. ಅಧ್ಯಕ್ಷೆ ಪ್ರತಿಭಾ ಶ್ರೀಧರ್‌ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಇಲಾಖೆಯ ಸುಧಾ ಜೋಷಿ ಅವರು ನೋಡಲ್‌ ಅಧಿಕಾರಿಯಾಗಿ ಭಾಗವಹಿಸಿದ್ದರು. ಜಿ.ಪಂ.ಸದಸ್ಯೆ ಜಯಶ್ರೀ ಕೋಡಂದೂರು, ತಾ.ಪಂ.ಸದಸ್ಯೆ ಕವಿತಾ ಸುಬ್ಬನಾಯ್ಕ, ಅಭಿವೃದ್ಧಿ ಅಧಿಕಾರಿ ಭಾರತಿ, ಗ್ರಾಮ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

ಡೆಂಗ್ಯೂ ಪ್ರಕರಣ ಪತ್ತೆ
ಪುಣಚ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಯೇಧುರಾಜ್‌ ಅವರು ಮಾತನಾಡಿ ಕಳೆದ ಕೆಲವು ತಿಂಗಳುಗಳಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ  ಮನೆಮನೆಗೆ ತೆರಳಿ ಅವುಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಲಾಗಿದೆ. ಸೊಳ್ಳೆ ಉತ್ಪತ್ತಿಯಾಗದಂತೆ ನಾಗರಿಕರು ಎಚ್ಚರ ವಹಿಸಬೇಕು. ಕೇರಳ ರಾಜ್ಯದ ಕಾಸರಗೋಡಿನಿಂದ ನಮ್ಮ ಪರಿಸರಕ್ಕೆ ಎಚ್‌1ಎನ್‌1 ರೋಗ ಹರಡುತ್ತಿದೆ. ಹಂದಿಗಳ ಮೂಲಕ ಮನುಷ್ಯನಿಗೆ ಈ ರೋಗ ಹರಡುತ್ತದೆ. ಇಲಾಖೆ ವತಿಯಿಂದ ಇದನ್ನು ತಡೆಗಟ್ಟುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.