ತಳ್ಳುಗಾಡಿ ವ್ಯಾಪಾರದಿಂದ ರಸ್ತೆ ಸಂಚಾರಕ್ಕೆ ಅಡಚಣೆ: ಕ್ರಮಕ್ಕೆ ಆಗ್ರಹ


Team Udayavani, Jul 15, 2017, 2:10 AM IST

Phone-in-14-7.jpg

ಪಾಂಡೇಶ್ವರ: ಸೆಂಟ್ರಲ್‌ ಮಾರ್ಕೆಟ್‌ ಸುತ್ತಮುತ್ತ ನಡೆಯುವ ತಳ್ಳುಗಾಡಿಗಳ ವ್ಯಾಪಾರದಿಂದ ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುತ್ತದೆ ಎಂದು ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದೂರಿದರು. ಈ ಬಗ್ಗೆ ಶೀಘ್ರವೇ ಅಭಿಯಾನವನ್ನು ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಹಾರ ನಡೆಸಲು ತಳ್ಳುಗಾಡಿ ವ್ಯಾಪಾರಿಗಳಿಗೆ ತಿಳಿವಳಿಕೆ ನೀಡುವುದಾಗಿ ಡಿಸಿಪಿ ಹನುಮಂತರಾಯ ತಿಳಿಸಿದರು.

ದೇರಳಕಟ್ಟೆ ಸಮೀಪದ ಬೆಳ್ಮ ಅಂಬೇಡ್ಕರ್‌ಪದವಿನಲ್ಲಿ ರಾತ್ರಿ ವೇಳೆ ಗಾಂಜಾ ವ್ಯವಹಾರ ನಡೆಯುತ್ತಿದ್ದು, ಅಲ್ಲಿ ಸಿ.ಸಿ. ಕೆಮರಾ ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದರು. ಈ ಕುರಿತು ಕ್ರಮ ಜರಗಿಸುವ ಭರವಸೆಯನ್ನು ಡಿಸಿಪಿ ನೀಡಿದರು. ಬೈಕಂಪಾಡಿಯಲ್ಲಿ  ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿದ್ದು, ವಾಹನ ಸಂಚಾರ ದುಸ್ತರವಾಗಿದೆ ಎಂಬ ದೂರಿಗೆ ಡಿಸಿಪಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಪತ್ರ ಬರೆದು ದುರಸ್ತಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದರು. ಅಗತ್ಯವಿರುವಲ್ಲಿ ನೋ ಪಾರ್ಕಿಂಗ್‌ ಬೋರ್ಡ್‌ ಅಳವಡಿಕೆಗೂ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ತೊಕ್ಕೊಟ್ಟಿನಲ್ಲಿ ರಿಕ್ಷಾಗಳಿಗೆ ಮೀಟರ್‌ ಅಳವಡಿಸಿದ್ದರೂ ಚಾಲಕರು ಅದನ್ನು ಬಳಸುತ್ತಿಲ್ಲ ಎಂಬ ದೂರಿಗೆ ಅವರು, ಈ ಬಗ್ಗೆ ರಿಕ್ಷಾ ಚಾಲಕರ ಸಭೆ ನಡೆಸಲು ಸ್ಥಳೀಯ ಎಸಿಪಿಗೆ ಸೂಚಿಸಲಾಗುವುದು ಎಂದರು.

ಮೂಡಬಿದಿರೆಯ ಪೂಪಾಡಿಕಲ್ಲಿನ 2 ಅಂಗಡಿಗಳಲ್ಲಿ ಸಾರಾಯಿ ಮಾರಲಾಗುತ್ತಿದೆ ಎಂಬ ದೂರು ವ್ಯಕ್ತವಾಯಿತು. ಈ ಬಗ್ಗೆ ಗಮನ ಹರಿಸುವುದಾಗಿ ಡಿಸಿಪಿ ತಿಳಿಸಿದರು. ಸಿಸಿಬಿ ವಿಭಾಗದ ಇನ್ಸ್‌ಪೆಕ್ಟರ್‌ ಸವಿತ್ರತೇಜ, ಎಎಸ್‌ಐ ಯೂಸುಫ್‌, ಹೆಡ್‌ಕಾನ್ಸ್‌ಟೆಬಲ್‌ ಪುರುಷೋತ್ತಮ ಉಪಸ್ಥಿತರಿದ್ದರು. ಜಿಲ್ಲಾ ಬಸ್‌ ಮಾಲಕರ ಸಂಘದ (ಸಿಟಿ ಬಸ್‌) ಪ್ರಧಾನ ಕಾರ್ಯದರ್ಶಿ ಸುಚೇತನ್‌ ಅವರೂ ಉಪಸ್ಥಿತರಿದ್ದು, ಬಸ್‌ ಸಂಚಾರಕ್ಕೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. 

ಸಾರ್ವಜನಿಕರಿಂದ ಬಂದ ದೂರುಗಳು
ಅಪ್ಪರ್‌ ಬೆಂದೂರು 2ನೇ ಕ್ರಾಸ್‌ನಲ್ಲಿ ಜೀಪೊಂದನ್ನು ಕೆಲವು ದಿನಗಳಿಂದ ಫುಟ್‌ಪಾತ್‌ನಲ್ಲಿ ನಿಲ್ಲಿಸಲಾಗಿದ್ದು, ಪಾದಚಾರಿಗಳಿಗೆ ಸಮಸ್ಯೆಯಾಗಿದೆ.

ಜೈಲ್‌ ರೋಡ್‌ನ‌ ಎರಡೂ ಬದಿ ಕಾರುಗಳನ್ನು ನಿಲ್ಲಿಸುತ್ತಿದ್ದು,  ಟ್ರಾಫಿಕ್‌ ಜಾಂ ಆಗುತ್ತಿದೆ.

ಕಂಕನಾಡಿವರೆಗೆ ಪರವಾನಿಗೆ ಹೊಂದಿದ ಕೊಣಾಜೆ ಕಡೆಯಿಂದ ಬರುವ ಖಾಸಗಿ ಬಸ್‌ಗಳು ಸ್ಟೇಟ್‌ಬ್ಯಾಂಕ್‌ ತನಕದ ಟಿಕೆಟ್‌ ಹಣ ಪಡೆದು ಪ್ರಯಾಣಿಕರನ್ನು ಪಂಪ್‌ವೆಲ್‌ ತಂಗುದಾಣದಲ್ಲಿ ಇಳಿಸಿ ಸ್ಟೇಟ್‌ಬ್ಯಾಂಕ್‌ ಕಡೆಗೆ ಹೋಗುವ ಬೇರೆ ಬಸ್‌ ಹತ್ತಿಸಿ ಬಿಡಲಾಗುತ್ತಿದೆ.

ಕೊಣಾಜೆ- ಸ್ಟೇಟ್‌ ಬ್ಯಾಂಕ್‌ ಪರವಾನಿಗೆ ಹೊಂದಿರುವ ಖಾಸಗಿ ಸಿಟಿ ಎಕ್ಸ್‌ಪ್ರೆಸ್‌ ಬಸ್‌ ಒಂದು ಆರ್ಡಿನರಿ ಬಸ್‌ ರೀತಿಯಲ್ಲಿ ಎಲ್ಲ ಕಡೆ ನಿಲ್ಲುತ್ತಿದೆ.   

ಪಾಂಡೇಶ್ವರ ನ್ಯೂ ರೋಡ್‌ನ‌ಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಲಾಗುತ್ತಿದೆ.

ಮಂಗಳಾದೇವಿಗೆ ಹೋಗುವ 15, 11 ನಂಬರಿನ ಬಸ್‌ಗಳು ಮೋರ್ಗನ್ಸ್‌ಗೇಟ್‌ ಮಾರ್ಗವಾಗಿ ಹೋಗುತ್ತಿದ್ದು, ವಾಪಸ್‌ ಬರುವಾಗ ಮೋರ್ಗನ್ಸ್‌ಗೇಟ್‌ಗೆ ಸಂಚರಿಸದೆ ಬೇರೆ ಮಾರ್ಗವಾಗಿ ಓಡಾಡುತ್ತಿವೆ. 

ಉರ್ವ ಮಾರ್ಕೆಟ್‌ ಮತ್ತು ಸಮೀಪದ ಮಾರಿಯಮ್ಮ ದೇವಸ್ಥಾನದ ಎದುರು ರವಿವಾರ ರಸ್ತೆಯಲ್ಲಿಯೇ ವಾಹನ ನಿಲುಗಡೆ ಮಾಡಲಾಗುತ್ತಿದೆ. 

ಬಿಜೈ ಚರ್ಚ್‌ ಬಳಿಯ ವೃತ್ತದಿಂದ ಬಸ್‌ ನಿಲ್ದಾಣದವರೆಗೆ ಫುಟ್‌ಪಾತ್‌ ಇಲ್ಲ. 

ಬಿಜೈ ಸೂಪರ್‌ ಬಜಾರ್‌ ಬಳಿ ರಸ್ತೆ ದಾಟಲು ಬ್ಯಾರಿಕೇಡ್‌ ಅಳವಡಿಸಿ. 

ನಂತೂರು ಪಾದುವಾ ಕಾಲೇಜು ಎದುರಿನ ರಸ್ತೆ (ಶರ್ಬತ್‌ ಕಟ್ಟೆ ರಸ್ತೆ) ಅಗಲ ಕಿರಿದಾಗಿದ್ದು,  ದೊಡ್ಡ ಗಾತ್ರದ ಲಾರಿಗಳು ಸಂಚರಿಸುತ್ತವೆ.

ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣದ 200 ಮೀ. ವ್ಯಾಪ್ತಿಯಲ್ಲಿ  ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಆದರೂ ನಿಲ್ಲಿಸಲಾಗುತ್ತಿದೆ.  

ಕೈಕಂಬ- ಗುರುಪುರ- ವಾಮಂಜೂರು ರಸ್ತೆಯಲ್ಲಿ  ಹೆಲ್ಮೆಟ್‌ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಾರೆ. 

ರೂಟ್‌ ನಂಬರ್‌ 27ರ ಸಿಟಿ ಬಸ್‌ (ಬ್ಲೂ ಬಸ್‌)ನ ನಿರ್ವಾಹಕರೊಬ್ಬರು ಪ್ರಯಾಣಿಕರ ಜತೆ ಅಸಭ್ಯವಾಗಿ ವರ್ತಿಸುತ್ತಾರೆ. ಬಾಕಿ ಚಿಲ್ಲರೆ ನೀಡುತ್ತಿಲ್ಲ.

ಎಂ.ಜಿ. ರಸ್ತೆಯ  ಕೆನರಾ ಕಾಲೇಜು ಎದುರು ಬ್ಯಾನರ್‌ಗಳ ಹಗ್ಗಗಳು ನೇತಾಡುತ್ತಿವೆ. ಡೊಂಗರಕೇರಿಯಲ್ಲಿ ಅನಧಿಕೃತ ಮೊಬೈಲ್‌ ಟವರ್‌ ತಲೆ ಎತ್ತಿದೆ.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.