ಕ್ರೀಡಾಕ್ಷೇತ್ರದತ್ತ ಒಲವು ಇಮ್ಮಡಿಗೊಳ್ಳಲಿ: ಸೂಲಿಬೆಲೆ


Team Udayavani, Jul 15, 2017, 2:15 AM IST

Sulibele-14-7.jpg

ಮಣ್ಣಗುಡ್ಡೆ: ಚೀನದಲ್ಲಿ ಓದಿಗೆ ನೀಡಿದಷ್ಟೇ ಪ್ರಾಮುಖ್ಯವನ್ನು ಕ್ರೀಡೆಗೂ ನೀಡಲಾಗುತ್ತಿದೆ. ಆದ್ದರಿಂದಲೇ ಅದು ಕ್ರೀಡೆಯಲ್ಲಿ ಮುಂಚೂಣಿಯಲ್ಲಿದೆ. ಭಾರತದಲ್ಲೂ ಕ್ರೀಡಾ ಕ್ಷೇತ್ರದತ್ತ ಒಲವು ಹೆಚ್ಚಾಗಬೇಕು. ಹೆತ್ತವರು ಮಕ್ಕಳ ಶಿಕ್ಷಣದಲ್ಲಿ ಅಂಕಕ್ಕಷ್ಟೇ ಒತ್ತು ನೀಡದೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಕ್ರೀಡಾಭಾರತಿ ಮಂಗಳೂರು ವಿಭಾಗ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಇಲ್ಲಿನ ಸಂಘನಿಕೇತನದಲ್ಲಿ ಆಯೋಜಿಸಿದ್ದ ಕ್ರೀಡಾ ಪ್ರತಿಭಾ ಪುರಸ್ಕಾರ ಹಾಗೂ ಜೀಜಾಬಾಯಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಭಾರತ ಕ್ರೀಡೆಯಲ್ಲಿ ಹಿಂದುಳಿಯಲು ಉನ್ನತ ತಂತ್ರಜ್ಞಾನ ಅಳವಡಿಸಿಕೊಳ್ಳದಿರುವುದೂ ಒಂದು ಕಾರಣ. ಕ್ರೀಡೆ ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಬಲಾಡ್ಯನನ್ನಾಗಿಸುತ್ತದೆ. ರಾಷ್ಟ್ರ ಕಾರ್ಯಕ್ಕೆ ವೈದ್ಯರು, ಎಂಜಿನಿಯರ್‌ ಮಾತ್ರವಲ್ಲ ಕ್ರೀಡಾಪಟುಗಳ ಅಗತ್ಯವೂ ಇದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಕ್ರೀಡೆಯು ದೇಶದ ಸಂಪತ್ತು. ಇದಕ್ಕೆ ಸರಿಯಾದ ಪ್ರೋತ್ಸಾಹ ಬೇಕಿದೆ. ಕೇರಳ ಸರಕಾರ ಕ್ರೀಡೆಗೆ ಅತಿ ಹೆಚ್ಚಿನ ಅನುದಾನ ಮೀಸಲಿಡುತ್ತಿದ್ದು, ರಾಜ್ಯದಲ್ಲೂ ಈ ರೀತಿಯ ಬೆಳವಣಿಗೆಯಾಗಬೇಕು. ಸಾಧನೆ ತೋರಿದ ಕ್ರೀಡಾಪಟುಗಳನ್ನು ಸರಕಾರ ಗೌರವಿಸಬೇಕು. ಸಮಾಜದ ಪ್ರತಿಷ್ಠಿತ ವ್ಯಕ್ತಿಗಳು ಒಟ್ಟು ಸೇರಿ ಸಾಧಕರಿಗೆ ದೊಡ್ಡ ಮೊತ್ತವನ್ನು ನೀಡಿ ಅಭಿನಂದಿಸುವ ಕೆಲಸ ಜಿಲ್ಲೆಯಲ್ಲಿ ಆಗಬೇಕು ಎಂದರು. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಅವರನ್ನು ಗುರುತಿಸುವ ಕೆಲಸ ಆಗಬೇಕು. ಕ್ರೀಡಾಪಟುಗಳಿಗೆ ಸರಕಾರ ಸರಿಯಾದ ಪ್ರೋತ್ಸಾಹ ನೀಡದೇ ಇರುವುದು ದುಃಖದ ವಿಚಾರ. ಕೆಲವು ಹೆತ್ತವರಿಂದಲೂ ಕ್ರೀಡೆಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದವರು ಹೇಳಿದರು.

ಉದ್ಘಾಟಿಸಿದ ಮೇಯರ್‌ ಕವಿತಾ ಸನಿಲ್‌  ಮಾತನಾಡಿ, ಕ್ರೀಡಾಭಾರತಿ ಮೂಲಕ ಕ್ರೀಡೆಗೆ ವಿಶೇಷ ಪ್ರೋತ್ಸಾಹ ದೊರೆಯುತ್ತಿರುವುದು ಶ್ಲಾಘನೀಯ. ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳುವಂತೆ ಹೆತ್ತವರು ಮಾರ್ಗದರ್ಶನ ಮಾಡಬೇಕು ಎಂದರು.

ಸಾಧಕರಿಗೆ ಅಭಿನಂದನೆ
ರಾಷ್ಟ್ರ, ಅಂತಾರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಪದಕ ವಿಜೇತರನ್ನು ಗೌರವಿಸಲಾಯಿತು. ಕ್ರೀಡಾಭಾರತಿಯ ಸಂಯೋಜಕ ಭೋಜರಾಜ್‌ ಕಲ್ಲಡ್ಕ ಅವರನ್ನು ಸಮ್ಮಾನಿಸಲಾಯಿತು. ಶಾಸಕ ಜೆ.ಆರ್‌. ಲೋಬೋ, ಆರೆಸ್ಸೆಸ್‌ ಸಹಪ್ರಾಂತ ಸಂಘಚಾಲಕ್‌ ಡಾ| ಪಿ. ವಾಮನ ಶೆಣೈ, ಕ್ರೀಡಾಭಾರತಿ ದಕ್ಷಿಣ ಮಧ್ಯಕ್ಷೇತ್ರೀಯ ಸಂಯೋಜಕ ಚಂದ್ರಶೇಖರ ಜಹಾಗೀದಾರ್‌, ಶ್ರೀದೇವಿ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎ.ಸದಾನಂದ ಶೆಟ್ಟಿ, ವಿಧಾನಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‌ ಆಳ್ವ, ರೆಡ್‌ಕ್ರಾಸ್‌  ಜಿಲ್ಲಾಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಆರೆಸ್ಸೆಸ್‌ ಮಂಗಳೂರು ಮಹಾನಗರ ಸಂಘಚಾಲಕರಾದ ಸುನಿಲ್‌ ಆಚಾರ್‌, ಡಾ| ಸತೀಶ್‌ ರಾವ್‌, ಬ್ರಿಗೇಡಿಯರ್‌ ಐ.ಎನ್‌. ರೈ, ಡಿಡಿಪಿಐ ವಾಲ್ಡರ್‌ ಡಿ’ ಮೆಲ್ಲೊ, ಮಂಗಳೂರು ಉತ್ತರವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಆಶಾ ನಾಯಕ್‌, ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅಲೋಶಿಯಸ್‌ ಡಿ’ ಸೋಜಾ,   ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ರಘುನಾಥ್‌, ಅಧ್ಯಕ್ಷ ಕೆ.ಎಚ್‌. ನಾಯಕ್‌, ಸಲಹೆಗಾರ ಗಂಗಾಧರ ರೈ ಮಾಣಿ, ಕ್ರೀಡಾಭಾರತಿ ಪ್ರಧಾನ ಕಾರ್ಯದರ್ಶಿ ಪ್ರಮೋದ್‌ ಅರಿಗ ಮುಂತಾದವರು ಉಪಸ್ಥಿತರಿದ್ದರು. ಕ್ರೀಡಾಭಾರತಿ ಗೌರವಾಧ್ಯಕ್ಷ ಬಿ. ನಾಗರಾಜ ಶೆಟ್ಟಿ ಪ್ರಸ್ತಾವಿಸಿದರು. ಅಧ್ಯಕ್ಷ ಕಾರ್ಯಪ್ಪ ರೈ ಸ್ವಾಗತಿಸಿದರು. ಅಜಿತ್‌ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು.

ಜೀಜಾಬಾಯಿ ಪ್ರಶಸ್ತಿ ಪ್ರದಾನ
ಕ್ರೀಡಾಪಟುಗಳಾದ ಉಷಾ ಬಿ.ಎನ್‌., ಮರಿನಾ ದೇವಿ, ಜೋಸ್ನಾ ಸಿಮಾಂನ್‌, ಜೋಯ್ಲಿನ್‌ ಎಂ. ಲೋಬೋ ಅವರ ಹೆತ್ತವರಿಗೆ ಜೀಜಾಬಾಯಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.