ಎನ್ನಾರೈಗಳಿಗೂ ಮತದಾನ ಅವಕಾಶ: ಪ್ರತಿಕ್ರಿಯೆ ನೀಡಿ
Team Udayavani, Jul 15, 2017, 3:05 AM IST
ಹೊಸದಿಲ್ಲಿ: ಅನಿವಾಸಿ ಭಾರತೀಯರಿಗೆ ಅವರು ಇರುವಲ್ಲಿಂದಲೇ ಮತದಾನ ಅವಕಾಶ ನೀಡುವ ಕುರಿತಂತೆ, ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಇದೇ ವೇಳೆ, ಅನಿವಾಸಿ ಭಾರತೀಯರಿಗೂ ಅಲ್ಲಿಯೇ ಮತದಾನ ಹಕ್ಕು ನೀಡುವ ಬಗ್ಗೆ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗದ ಪ್ರಸ್ತಾವನೆಯನ್ನೂ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಪರಿಗಣಿಸಿದೆ.
ಪ್ರಜಾಪ್ರಾತಿನಿಧ್ಯ ಕಾಯ್ದೆ 1950ನ್ನು ಬದಲಾವಣೆ ಮಾಡಿ ಅನಿವಾಸಿ ಭಾರತೀಯರಿಗೆ ಅಂಚೆ ಮತಪತ್ರ ಮೂಲಕ ಮತದಾನ ಅವಕಾಶ ನೀಡಬಹುದಾಗಿದೆ ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿತ್ತು. ಅನಿವಾಸಿ ಭಾರತೀಯರಿಗೆ ಮತದಾನ ಅವಕಾಶ ಕಲ್ಪಿಸುವ ಬಗ್ಗೆ ಹಲವು ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರತಿಕ್ರಿಯೆ ಕೇಳಿದೆ. ಅಂಚೆ ಮತ ಪತ್ರದ ಮೂಲಕ ಎನ್ನಾರೈಗಳಿಗೂ ಹಕ್ಕು ಚಲಾಯಿಸುವ ಅವಕಾಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ