ಮತ್ತೆ ಬೊಫೋರ್ಸ್‌ ಭೂತ: ಪ್ರಕರಣಕ್ಕೆ ಮರುಜೀವ ನೀಡಲು ಸಂಸದರ ಆಗ್ರಹ


Team Udayavani, Jul 15, 2017, 4:20 AM IST

Bofors-Scam-17-4.jpg

ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹೆಸರಿಗೆ ಅತಿದೊಡ್ಡ ಕಳಂಕ ತಂದಂಥ‌ ಹಲವು ದಶಕಗಳ ಹಿಂದಿನ ಬೊಫೋರ್ಸ್‌ ಹಗರಣ ಮತ್ತೆ ಸದ್ದು ಮಾಡುವ ಲಕ್ಷಣಗಳು ಗೋಚರಿಸುತ್ತಿವೆ. ಮುಚ್ಚಿಹೋಗಿದ್ದ ಪ್ರಕರಣಕ್ಕೆ ಮರು ಜೀವ ನೀಡುವಂತೆ ಹಾಗೂ ಇದಕ್ಕೆ ಅವಕಾಶ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕೇಂದ್ರ ಸರಕಾರದ ಅನುಮತಿ ಪಡೆಯುವಂತೆ ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಸಂಸದರಿಬ್ಬರು ಆಗ್ರಹಿಸಿದ್ದಾರೆ. ಒಂದು ವೇಳೆ, ಇವರು ಅಂದುಕೊಂಡಂತೆ ನಡೆದಿದ್ದೇ ಆದಲ್ಲಿ, ಕಾಂಗ್ರೆಸ್‌ಗೆ ಬಹುದೊಡ್ಡ ಆಘಾತ ಹಾಗೂ ಮುಖಭಂಗ ಆಗುವುದಂತೂ ಖಚಿತ ಎಂದು ಹೇಳಲಾಗಿದೆ.

ಗುರುವಾರವಷ್ಟೇ ನಡೆದ ರಕ್ಷಣಾ ವಿಚಾರಗಳನ್ನು ಪರಿಶೀಲಿಸುವ ಸಂಸ ದೀಯ ಸಮತಿ ಸಭೆಯಲ್ಲಿ ಬಿಜೆಪಿ ನಾಯಕ ನಿಶಿಕಾಂತ್‌ ದುಬೆ, ಬಿಜೆಡಿ ನಾಯಕ ಭಾತೃìಹರಿ ಮಹ್ತಾಬ್‌ ಸಹಿತ ಹಲವು ಸಂಸದರು ಈ ಬಗ್ಗೆ ಪ್ರಸ್ತಾವಿಸಿದ್ದಾರೆ. ಬೊಫೋರ್ಸ್‌ ಹಗರಣದ ವಿಚಾರಣೆ ರದ್ದುಗೊಳಿಸಿ 2005 ರಲ್ಲಿ ದಿಲ್ಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಕೇಂದ್ರಕ್ಕೆ ಮನವಿ ಮಾಡುವಂತೆಯೂ ಸಿಬಿಐಗೆ ಸಲಹೆ ನೀಡಿದ್ದಾರೆ. ಬಳಿಕ, ಈ ಕುರಿತು ಏನು ಕ್ರಮ ಕೈಗೊಳ್ಳಲಾಯಿತು ಎಂದು ವಿವರಿಸಿ 2 ವಾರಗಳೊಳಗೆ ಸಂಸದೀಯ ಸಮಿತಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಇರುವ ಅಯೋಧ್ಯೆ ವಿವಾದಿತ ಕಟ್ಟಡ ಧ್ವಂಸ ಪ್ರಕರಣಕ್ಕೆ ಮರುಜೀವ ಕೊಡಬಹುದು ಎಂದಾದರೆ, ಬೊಫೋರ್ಸ್‌ ಹಗರಣದ ವಿಚಾರಣೆಯನ್ನು ಏಕೆ ಮುಂದುವರಿಸಬಾರದು ಎಂದು ಇದೇ ವೇಳೆ ದುಬೆ ಪ್ರಶ್ನಿಸಿದ್ದಾರೆ ಎಂದು ದಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಅಪರಾಧಕ್ಕೆ ಹಿಡಿದ ಕನ್ನಡಿ: ‘ಬೊಫೋರ್ಸ್‌ ಪ್ರಕರಣವು ವ್ಯವಸ್ಥಿತ ವೈಫ‌ಲ್ಯ ಮತ್ತು ಅಪರಾಧಕ್ಕೆ ಹಿಡಿದ ಕನ್ನಡಿಯಾಗಿದೆ. ಹಾಗಾಗಿ, ಆ ಬಗ್ಗೆ ತನಿಖೆ ಹಾಗೂ ವಿಚಾರಣೆ ಮುಂದುವರಿಯಲೇಬೇಕು. ಇದಕ್ಕೆ ಸಿಬಿಐ ಸುಪ್ರೀಂ ಮೆಟ್ಟಿಲೇರಲೇಬೇಕು’ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ‘ನೀವು ಈ ಹಿಂದೆಯೇ ಏಕೆ ಸುಪ್ರೀಂ ಕೋರ್ಟ್‌ಗೆ ಹೋಗಲಿಲ್ಲ’ ಎಂದು ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಅಲೋಕ್‌ ಅವರು, ‘ಸಿಬಿಐ ಈ ಹಿಂದೆಯೇ ಇಂತಹುದೊಂದು ಮನವಿ ಸಲ್ಲಿಸಲು ಮುಂದಾಗಿತ್ತು. ಆದರೆ, ಹಿಂದಿನ ಯುಪಿಎ ಸರಕಾರ ಅದಕ್ಕೆ ಒಪ್ಪಿಗೆ ನಿರಾಕರಿಸಿತ್ತು’ ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ವೇಳೆ, ಸಿಬಿಐ ಮುಖ್ಯಸ್ಥರಲ್ಲದೆ, ರಕ್ಷಣಾ ಕಾರ್ಯದರ್ಶಿ ಸಂಜಯ್‌ ಮಿತ್ರಾ ಅವರೂ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದೆ ಹಾಜರಿದ್ದರು. 1986ರ ಬೊಫೋರ್ಸ್‌ ಹಾವಿಟ್ಜರ್‌ ಗನ್‌ ಒಪ್ಪಂದಕ್ಕೆ ಸಂಬಂಧಿಸಿದ ಆಡಿಟರ್‌ ವರದಿಯು 6 ಮಂದಿ ಸಂಸದರ ಸಮಿತಿಯ ಮುಂದಿರುವ ಅತ್ಯಂತ ಹಳೆಯ ವರದಿಯಾಗಿದೆ. ಇದೀಗ ಸಮಿತಿ, ಆ ವರದಿಯ ಪರಿಶೀಲನೆ ನಡೆಸುತ್ತಿದೆ.

ಸಂಪೂರ್ಣ ಮುಚ್ಚಿಹೋಗಿಲ್ಲ: 2005ರಲ್ಲಿ ದಿಲ್ಲಿ ಹೈಕೋರ್ಟ್‌ ಪ್ರಕರಣದ ವಿಚಾರಣೆ ರದ್ದುಗೊಳಿಸಿದ್ದರೂ ಪ್ರಕರಣ ಸಂಪೂರ್ಣವಾಗಿ ಮುಚ್ಚಿಹೋಗಿಲ್ಲ. 2016ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಈ ಕುರಿತು ಪ್ರಸ್ತಾವವಾಗಿತ್ತು. ಆಗ ಕೋರ್ಟ್‌ಗೆ ಹಾಜರಾಗಿದ್ದ ಸಿಬಿಐ, ‘ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಯುಪಿಎ ಸರಕಾರ ಅನುಮತಿ ನೀಡಿರಲಿಲ್ಲ ಎಂದು ನುಡಿದಿತ್ತು.  

ಏನಿದು ಬೊಫೋರ್ಸ್‌ ಹಗರಣ?
1987ರಲ್ಲಿ  ಭಾರತ ಮತ್ತು ಸ್ವೀಡನ್‌ 1.4 ಶತಕೋಟಿ ಡಾಲರ್‌ ಮೊತ್ತದ ಶಸ್ತ್ರಾಸ್ತ್ರ ಖರೀದಿ ಒಪ್ಪಂದಕ್ಕೆ ಸಹಿ ಹಾಕಿದ್ದವು. ಅದರಂತೆ, ಸ್ವೀಡನ್‌ನ ಶಸ್ತ್ರಾಸ್ತ್ರ ಉತ್ಪಾದಕ ಕಂಪೆನಿಯಾದ ‘ಎ ಬಿ ಬೊಫೋರ್ಸ್‌’ ಭಾರತಕ್ಕೆ 400 ಹೊವಿಟ್ಜರ್‌ ಗನ್‌ಗಳನ್ನು ಪೂರೈಕೆ ಮಾಡಿತ್ತು. ಕಂಪೆನಿಯು ಈ ಮೊತ್ತದ ಎರಡು ಪಟ್ಟುಗಳಷ್ಟು ಪೂರೈಕೆಯ ಗುತ್ತಿಗೆ ಪಡೆಯಿತು. ಇದು ಸ್ವೀಡನ್‌ ಹಿಂದೆಂದೂ ನೋಡಿರದಷ್ಟು ದೊಡ್ಡ ಮೊತ್ತದ ಒಪ್ಪಂದವಾಗಿತ್ತು. ಆದರೆ 1987ರಲ್ಲಿ  ಸ್ವೀಡನ್‌ನ ರೇಡಿಯೋವೊಂದು ಆಘಾತಕಾರಿ ಮಾಹಿತಿಯೊಂದನ್ನು ಬಿತ್ತರಿಸಿತು. ‘ಡೀಲ್‌ ಅನ್ನು ತನ್ನದಾಗಿಸಿಕೊಳ್ಳಲು ಬೊಫೋರ್ಸ್‌ ಕಂಪೆನಿಯು ಭಾರತದ ರಾಜಕಾರಣಿಗಳು ಹಾಗೂ ಪ್ರಮುಖ ರಕ್ಷಣಾ ಅಧಿಕಾರಿಗಳಿಗೆ ಬರೋಬ್ಬರಿ 640 ದಶಲಕ್ಷ ರೂ.ಗಳನ್ನು ಕಿಕ್‌ಬ್ಯಾಕ್‌ ರೀತಿ ನೀಡಿದೆ’ ಎಂಬ ಸುದ್ದಿ ಇದಾಗಿತ್ತು.

ಅಧಿಕಾರ ಕಳೆದುಕೊಂಡ ರಾಜೀವ್‌
ರೇಡಿಯೋದಲ್ಲಿ ಬಂದ ವರದಿಯಂತೆ, ಕಿಕ್‌ಬ್ಯಾಕ್‌ ಪ್ರಕರಣದಲ್ಲಿ ಇಟಲಿಯ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಕ್ವಟ್ರೋಚಿಯು ಆಗಿನ ಪ್ರಧಾನಿ ರಾಜೀವ್‌ ಗಾಂಧಿ ಕುಟುಂಬದ ಆಪ್ತನಾಗಿದ್ದ. ಇದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತು. ಆದರೆ, ಇದನ್ನು ಅಲ್ಲಗಳೆದಿದ್ದ ರಾಜೀವ್‌ ಅವರು, ಯಾವ ಮಧ್ಯವರ್ತಿಯೂ ಭಾಗಿಯಾಗಿರಲಿಲ್ಲ, ಕಿಕ್‌ಬ್ಯಾಕ್‌ ಅನ್ನೂ ಪಡೆದಿಲ್ಲ ಎಂದು ಲೋಕಸಭೆಯಲ್ಲಿ ಹೇಳಿದ್ದರು. ಆದರೆ, ಈ ಹಗರಣಕ್ಕಾಗಿ ಕಾಂಗ್ರೆಸ್‌ ಬಹುದೊಡ್ಡ ಬೆಲೆ ತೆರಬೇಕಾಯಿತು. 1989ರ ಲೋಕಸಭೆ ಚುನಾವಣೆಯಲ್ಲಿ ರಾಜೀವ್‌ ಅಧಿಕಾರ ಕಳೆದುಕೊಳ್ಳಬೇಕಾಯಿತು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.